ಗ್ರಾಮದಲ್ಲೇ ಉದ್ಯೋಗ ಖಾತ್ರಿ ಕೆಲಸ ಕೊಡಿ
Team Udayavani, Jul 7, 2017, 11:25 AM IST
ಗೊರೇಬಾಳ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿಯೇ ಕೆಲಸ ಕೊಡಲು ಆಗ್ರಹಿಸಿ
ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು, ಕಾರ್ಮಿಕರು ಗುರುವಾರ ಜಾಲಿಹಾಳ ಗ್ರಾಮ ಪಂಚಾಯತಿ ಎದುರು ಧರಣಿ ನಡೆಸಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಸವರಾಜ ಹಂಚಿನಾಳ, ರೈತರು, ಕೂಲಿಕಾರ್ಮಿಕರು ಗುಳೆ ಹೋಗುವುದನ್ನು
ತಡೆಯಲು ಮತ್ತು ಗ್ರಾಮದಲ್ಲಿಯೇ ಕೆಲಸ ಒದಗಿಸಲು ಕೇಂದ್ರ ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಆದರೆ ಗ್ರಾಪಂ
ಅಧಿಕಾರಿಗಳು ಸ್ವಗ್ರಾಮದಲ್ಲಿ ಕೆಲಸ ನೀಡದೇ, ಬೇರೆ ಗ್ರಾಮಗಳಿಗೆ ಕಳಿಸುತ್ತಿದ್ದು, ಪಿಡಿಒ ಮೇಲೆ ಕ್ರಮ ಕೈಗೊಳ್ಳಬೇಕೆಂದು
ಆಗ್ರಹಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕ ಜಾರಿ ಮಾಡುತ್ತಿಲ್ಲ, ಗ್ರಾಮದಲ್ಲಿರುವ ಹಳ್ಳದ ಹೂಳು ಎತ್ತುವ ಕೆಲಸವನ್ನಾದರೂ ನೀಡಬೇಕಿತ್ತು. ಆದರೆ ದೂರದ ಗುಡದೂರು ಗ್ರಾಮ ಪಂಚಾಯತಿಗೆ ಕಾರ್ಮಿಕರನ್ನು ಕಳುಹಿಸಿ
ಜನರ ಜೀವ ಹಿಂಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಮಾನ್ವಿ ತಾಲೂಕು ಕಾರ್ಯಾಧ್ಯಕ್ಷ ಪ್ರಹ್ಲಾದ ಮಾಲಿಪಾಟೀಲ ಮಾತನಾಡಿ, ನರೇಗಾ ಯೋಜನೆ ಅಧಿಕಾರಿಗಳು, ಜನಪ್ರತಿನಿಧಿಗಳ ಸ್ವಾರ್ಥಕ್ಕೆ ಬಲಿಯಾಗುತ್ತಿದೆ.
ಕೂಲಿಕಾರ್ಮಿಕರು, ರೈತರನ್ನು ಅಲಕ್ಷಿಸಿದರೆ ಮುಂದೆ ಅನಾಹುತ ಎದುರಿಸಬೇಕಾಗುತ್ತದೆ. ಸ್ವಂತ ಗ್ರಾಮದಲ್ಲಿ ಕೆಲಸ ನೀಡದಿದ್ದರೆ
ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸೂಗುರಯ್ಯ ಸ್ವಾಮಿ, ಮುಖಂಡರಾದ ಖಾದರಸಾಬ, ಅಣ್ಣಪ್ಪ ಹುಡೇದ, ವೀರೇಶ, ವಿರುಪಣ್ಣ, ಮೋಹನರೆಡ್ಡಿ, ಆನಂದ, ದೊಡ್ಡಪ್ಪ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್