ಕಾರ್ಮಿಕ ಸಂಘದ ಚುನಾವಣೆ ನಡೆಸಲು ಆಗ್ರಹ


Team Udayavani, Jul 15, 2017, 2:10 PM IST

Tiri-1A.jpg

ಹಟ್ಟಿಚಿನ್ನದಗಣಿ: ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಈಗಿನ ಅವಧಿ ಜು. 12ಕ್ಕೆ ಮುಕ್ತಾಯವಾಗಿದೆ. ಕೂಡಲೇ ಸಂಘಕ್ಕೆ ಚುನಾವಣೆ ನಡೆಸಲು ಮುಂದಾಗಬೇಕು ಎಂದು ಆಗ್ರಹಿಸಿ ಟಿಯುಸಿಐ ಮುಖಂಡರು ಹಾಗೂ ಬೆಂಬಲಿತ ಕಾರ್ಮಿಕರು ಕ್ಯಾಂಪ್‌ ಬಸ್‌ ನಿಲ್ದಾಣದಿಂದ ಗಣಿ ಕಂಪನಿವರೆಗೆ ಮೆರವಣಿಗೆ ನಡೆಸಿದರು. 

ಗಣಿ ಕಂಪನಿ ಪ್ರಧಾನ ವ್ಯವಸ್ಥಾಪಕ ಡಾ| ಪ್ರಭಾಕರ ಸಂಗೂರಮಠ ಅವರಿಗೆ ಮನವಿ ಸಲ್ಲಿಸಿದ ಮುಖಂಡರು, ಕಾರ್ಮಿಕ ಸಂಘದ ಅವ ಧಿ ಮುಗಿಸಿರುವ ಎಐಟಿಯುಸಿ ಮುಖಂಡರಿಗೆ ಮನ್ನಣೆ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರೆ ಗಣಿ ಕಂಪನಿಯಲ್ಲಿ ಮುಂದೆ ಆಗುವ ಗೊಂದಲಕ್ಕೆ ಆಡಳಿತವರ್ಗವೇ ಕಾರಣವಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಹಾಲಿ ಎಐಟಿಯುಸಿ ಮುಖಂಡರು ಬೆಂಗಳೂರಲ್ಲಿ ಜು. 5ರಂದು ಸಭೆ ನಡೆಸಿ ಜು. 12ಕ್ಕೆ ಅವಧಿ ಮುಕ್ತಾಯವಾಗಲಿದೆ. ಚುನಾವಣೆ ನಡೆಸಲು ಆಡಳಿತವರ್ಗಕ್ಕೆ ಪತ್ರ
ಸಲ್ಲಿಸಲಾಗುವುದು ಎಂದು ಕರಪತ್ರದಲ್ಲಿ ತಿಳಿಸಿದ್ದಾರೆ. ಹಾಗಾಗಿ ಟಿಯುಸಿಐ ಸಂಘಟನೆ ಜು. 13ರಂದು ಧಾರುವಾಲ ಕ್ರೀಡಾಂಗಣದಲ್ಲಿ
ಸಭೆ ನಡೆಸಿ ಸಂಘದ ಚುನಾವಣೆ ಸಂಬಂಧ ಕೆಲವೊಂದು ತೀರ್ಮಾನ ಕೈಗೊಂಡಿದೆ. ಸಂಘದ ಈಗಿನ ಪದಾಧಿಕಾರಿಗಳ ಅವಧಿ
ಮುಗಿದಿದ್ದರಿಂದ ಚುನಾವಣೆ ನಡೆಸಲು ಗಣಿ ಆಡಳಿತ ವರ್ಗ ಮುಂದಾಗಬೇಕು ಹಾಗೂ ಅವರೊಂದಿಗೆ ಮಾತುಕತೆ ನಡೆಸಬಾರದು.
ಚುನಾವಣಾ ಧಿಕಾರಿಯನ್ನಾಗಿ ಕಲುಬುರಗಿ ಕಾರ್ಮಿಕ ಆಯಕ್ತರನ್ನು ಬೆಂಗಳೂರಿನ ಆಯುಕ್ತರು ನೇಮಕ ಮಾಡಿ ಆದೇಶ
ನೀಡಿದ್ದಾರೆ. ಈ ಸಂಬಂಧ ರಾಯಚೂರಿನಲ್ಲಿ ಜೂ. 23ರಂದು ಸಭೆ ಸಹ ನಡೆದಿದೆ. ಆದಷ್ಟು ಬೇಗ ಗಣಿ ಆಡಳಿತವರ್ಗ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿದರು.

ಚುನಾವಣೆ ಪ್ರಕ್ರಿಯೆ ಆರಂಭಿಸಲು ತಡವಾದರೆ ನಮ್ಮ ಸಂಘಟನೆ ವತಿಯಿಂದ ಜು. 20ರಂದು ಕಂಪನಿ ಮುಖ್ಯದ್ವಾರದ ಎದುರು ಒಂದು ದಿನದ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಈಗಿನ ಕಾರ್ಮಿಕ ಸಂಘದ ಮುಖಂಡರು ಜು.
12ರಂದು ಸಭೆ ನಡೆಸಿ, ಜು. 27ರಂದು ಒಂದು ದಿನದ ಮುಷ್ಕರ ನಡೆಸುವುದಾಗಿ ಹೇಳಿ ಪ್ರಕಟಣೆ ಹೊರಡಿಸಿದ್ದಾರೆ.

ಈ ಮುಷ್ಕರಕ್ಕೆ ಟಿಯುಸಿಐ ಬೆಂಬಲವಿರುವುದಿಲ್ಲ ಹಾಗೂ ಇದನ್ನು ವಿರೋಧಿ ಸಿ ಸಂಘಟನೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಮುಖಂಡರಾದ ವಾಲೆಬಾಬು, ಎಂ.ಡಿ. ಅಮೀರಅಲಿ, ದುರುಗಪ್ಪ, ರೇವಣಸಿದ್ದಪ್ಪ, ಇಮಾಮ್‌ಸಾಬ, ಸೋಮಣ್ಣ ಜವಳಗೇರಾ, ಗುಡುದಪ್ಪ, ಗಂಗಪ್ಪ ಗಲಗ, ಕೆ.ಎಸ್‌. ಶಿವಾನಂದ ಇದ್ದರು. 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.