ಚಿನ್ನದ ಗಣಿ ಆಸ್ಪತ್ರೆ ಎದುರು ರೋಗಿ ಪತ್ನಿ ಪ್ರತಿಭಟನೆ


Team Udayavani, Aug 3, 2017, 1:20 PM IST

03-RAI-3.jpg

ಹಟ್ಟಿ ಚಿನ್ನದ ಗಣಿ: ತೀವ್ರ ಅಸ್ವಸ್ಥವಾಗಿದ್ದ ಚಿನ್ನದ ಗಣಿ ಕಂಪನಿ ಉದ್ಯೋಗಿಯ ಚಿಕಿತ್ಸಾ ವೆಚ್ಚ ಭರಿಸದ ಚಿನ್ನದ ಗಣಿ ಕಂಪನಿ ಕ್ರಮ ಖಂಡಿಸಿ ಪತ್ನಿ ಆ್ಯಂಬುಲೆನ್ಸ್‌ನಲ್ಲಿ ಪತಿಯನ್ನು ಇರಿಸಿಕೊಂಡು ಚಿನ್ನದ ಗಣಿ ಕಂಪನಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಪ್ರಸಂಗ ಬುಧವಾರ ನಡೆಯಿತು.

ಚಿನ್ನದ ಗಣಿ ಕಂಪನಿ ಉದ್ಯೋಗಿ ಶಿವಲಿಂಗಪ್ಪನವರಿಗೆ ಆರೋಗ್ಯದಲ್ಲಿ ತೀವ್ರ ಸಮಸ್ಯೆ ಎದುರಾಗಿತ್ತು. ಚಿನ್ನದ ಗಣಿ ಕಂಪನಿ ಆಸ್ಪತ್ರೆ ವೈದ್ಯರು ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ರೋಗಿಯನ್ನು ರವಾನಿಸಿದ್ದಾರೆ. ಕಂಪನಿ ಆಡಳಿತ ವರ್ಗ ಚಿಕಿತ್ಸಾ ವೆಚ್ಚ ಭರಿಸದ್ದರಿಂದ ರೋಗಿಯನ್ನು ವಾಪಸ್ಸು
ಕರೆದುಕೊಂಡು ಹೋಗಿ ಎಂದು ಬಳ್ಳಾರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಅಲ್ಲಿಂದ ಪತಿಯನ್ನು ಆ್ಯಂಬುಲೆನ್ಸ್‌ನಲ್ಲೇ ಕರೆತಂದ ಮಹಿಳೆ ಚಿನ್ನದ ಗಣಿ ಆಸ್ಪತ್ರೆ ಎದುರು ಆ್ಯಂಬುಲೆನ್ಸ್‌ನು° ಆಸ್ಪತ್ರೆ ಒಳಗೆ ಬಿಡದೇ ಪ್ರತಿಭಟನೆ ನಡೆಸಿದರು. ಚಿನ್ನದ ಗಣಿ ಕಂಪನಿ ಹಾಗೂ ಆಸ್ಪತ್ರೆ ವೈದ್ಯರು ಗಂಡನಿಗೆ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ನಿರ್ಲಕ್ಷ ವಹಿಸಿದೆ. ಇದರಿಂದ ಪತಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಚಿನ್ನದ ಗಣಿ ಆಸ್ಪತ್ರೆ ವೈದ್ಯರು ಹಾಗೂ ಅಧಿ ಕಾರಿಗಳೇ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.

ಚಿನ್ನದ ಗಣಿ ಕಂಪನಿ ಅಧಿಕಾರಿ ಹನುಮಂತಪ್ಪ ಸ್ಥಳಕ್ಕೆ ಬಂದು ಗಣಿ ಆಸ್ಪತ್ರೆಯಲ್ಲಿಯೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ರೋಗಿಯ ಚಿಕಿತ್ಸೆಗೆ ಅವಕಾಶ ನೀಡುವಂತೆ ಕೋರಿದರು. ಆದರೆ ಆಕ್ರೋಶಗೊಂಡ ಮಹಿಳೆ ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ನನ್ನ ಪತಿಗೆ ಏನಾದರೂ ಹೆಚ್ಚು ಕಡಿಮೆಯಾದರೆ ಅದಕ್ಕೆ ಕಂಪನಿ ಅಧಿಕಾರಿ, ಆಸ್ಪತ್ರೆ ವೈದ್ಯರೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಆ್ಯಂಬುಲನ್ಸ್‌ನು° ಆಸ್ಪತ್ರೆ ಒಳಗೆ ಹೋಗಲು ಬಿಡಲಿಲ್ಲ. ಪತಿಯ ಆರೋಗ್ಯ ವಿಷಮ ಸ್ಥಿತಿಗೆ ತಲುಪಿದೆ. ಈಗಾಗಲೇ ಚಕಿತ್ಸೆಗಾಗಿ 4 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ಮಹಿಳೆ ಅಳಲು ತೋಡಿಕೊಂಡಳು. 

ಸ್ಥಳಕ್ಕೆ ಬಂದ ಪಿಎಸ್‌ಐ ಶೈಲಾ ಪ್ಯಾಟಿಶೆಟ್ಟರ್‌, ಕಂಪನಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ನಿಮ್ಮ ಸಂಕಷ್ಟ ಪರಿಹಾರಕ್ಕೆ ಸಾಥ್‌ ನೀಡುತ್ತೇವೆ. ಮೊದಲು ರೋಗಿಯನ್ನು ಆ್ಯಂಬುಲೆನ್ಸ್‌ನಿಂದ ಆಸ್ಪತ್ರೆ ಒಳಗೆ ಕರೆದುಕೊಂಡು ಹೋಗಲು ಅವಕಾಶ ನೀಡಬೇಕೆಂದು ಮನವಿ ಮಾಡಿದ ನಂತರ ರೋಗಿಯ ಪತ್ನಿ ಆ್ಯಂಬುಲನ್ಸ್‌ ಆಸ್ಪತ್ರೆ  ಒಳಕ್ಕೆ ಹೋಗಲು ಅವಕಾಶ ನೀಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.