ಹಳ್ಳ ಆಗಿದೆ ತ್ಯಾಜ್ಯದ ಗುಡ್ಡೆ


Team Udayavani, Aug 20, 2017, 3:37 PM IST

ray.jpg

ಮಸ್ಕಿ: ಜಲ, ವಾಯು ಮತ್ತು ಪರಿಸರ ಮಾಲಿನ್ಯವಾಗದಂತೆ ಕ್ರಮ ಕೈಗೊಳ್ಳಬೇಕಾದ ಪುರಸಭೆಯೇ ಪಟ್ಟಣದ ಹೃದಯ ಭಾಗದಲ್ಲಿನ ಹಳ್ಳದಲ್ಲಿ ತ್ಯಾಜ್ಯಗಳ ಗುಡ್ಡೆ ಹಾಕಿ ನೀರು ಕಲುಷಿತವಾಗುವಂತೆ ಮಾಡುತ್ತಿದೆ. ಪಟ್ಟಣದಲ್ಲಿ ಮನೆ, ಅಂಗಡಿ, ಹೋಟೆಲ್‌ ಗಳಿಂದ ನಿತ್ಯ ಸುಮಾರು 4 ಟನ್‌ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಇದನ್ನು ತಂದು ಪುರಸಭೆ ಹಳ್ಳದಲ್ಲಿ ಗುಡ್ಡೆ ಹಾಕಲಾಗುತ್ತಿದೆ. ಒಂದು ವೇಳೆ ಮಳೆಬಂದು ಹಳ್ಳ ಹರಿದರೆ ತ್ಯಾಜ್ಯವೆಲ್ಲ ಕೊಚ್ಚಿಕೊಂಡು ಹೋಗಿ ಹಳ್ಳದ ನೀರು ಕಲುಷಿತವಾಗುತ್ತದೆ. ತ್ಯಾಜ್ಯ ಸಂಗ್ರಹಿಸುವ ಸ್ಥಳದ ಹಿಂಬದಿ ಸರ್ಕಾರಿ ಶಾಲೆ ಇದೆ. ತ್ಯಾಜ್ಯದಿಂದ
ಹೊರಸೂಸುವ ದುರ್ವಾಸನೆಯಿಂದ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಪರದಾಡುವಂತಾಗಿದೆ. ಅಲ್ಲದೇ ತ್ಯಾಜ್ಯ ಸಂಗ್ರಹ ಸ್ಥಳದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿದ್ದು ಜನರು ಸಂಚರಿಸಲು ಭಯಪಡುವಂತಾಗಿದೆ.
ನಿರುಪಯುಕ್ತ ಪ್ಲಾಸ್ಟಿಕ್‌: ತ್ಯಾಜ್ಯದಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌, ಹಾಳೆ, ತಟ್ಟೆ, ಲೋಟಗಳೇ ಅಧಿಕ ಕಂಡುಬರುತ್ತಿವೆ. ಕಸದ ರಾಶಿಯತ್ತ ಬರುವ ಜಾನುವಾರುಗಳು ಇವುಗಳನ್ನೇ ತಿನ್ನುವುದು ಸಾಮಾನ್ಯವಾಗಿದೆ. ರೋಗ ಭೀತಿ: ಕಸದ ರಾಶಿಯಿಂದಾಗಿ ಸೊಳ್ಳೆ ಹಾವಳಿ ಹೆಚ್ಚಿದೆ. ಜನರಲ್ಲಿ ಸಾಂಕ್ರಾಮಿಕ ಕಾಯಿಲೆಗಳ ಭೀತಿ ಹೆಚ್ಚಿದೆ. ಈಗಾಗಲೇ ಪಟ್ಟಣದಲ್ಲಿ ಡೆಂಘೀ, ಚಿಕೂನ್‌ ಗುನ್ಯಾದಂತಹ ಕಾಯಿಲೆಗಳು ಕಾಣಿಸಿಕೊಂಡಿವೆ. ಒಂದು ವೇಳೆ ಜಾಸ್ತಿ ಮಳೆಯಾದರೆ ಹಳ್ಳದಲ್ಲಿ ನೀರು ಹರಿದು ಬಂದು ನೀರು ಮಲೀನವಾಗುತ್ತದೆ. ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ರೋಗಗಳು ಹೆಚ್ಚಾಗುವ ಲಕ್ಷಣಗಳಿವೆ. ಪಟ್ಟಣದಲ್ಲಿ ಸರಿಯಾದ ರೀತಿಯಲ್ಲಿ ಕಸವಿಲೇವಾರಿಯಾಗುತ್ತಿಲ್ಲ. ಮಳೆ ಬಂದಾಗ ಕೆಲ ಬಡಾವಣೆಗಳಲ್ಲಿನ ಕಸ ಚರಂಡಿಗಳಲ್ಲಿ ಹೋಗಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತದೆ. ಇನ್ನಾದರೂ ಪುರಸಭೆ ಅಧಿಕಾರಿಗಳು ಎಚ್ಚೆತ್ತು ಸಮರ್ಪಕವಾಗಿ ಕಸ ವಿಲೇವಾರಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.