ಸೌಲಭ್ಯ ಕೊರತೆ: ಕುಪ್ಪಿಗುಡ್ಡದಲ್ಲಿ ಗುಡ್ಡದಷ್ಟು ಸಮಸ್ಯೆ


Team Udayavani, Sep 4, 2017, 3:40 PM IST

ray-5.jpg

ಲಿಂಗಸುಗೂರು: ತಾಲೂಕಿನ ಕುಪ್ಪಿಗುಡ್ಡ ಗ್ರಾಮದಲ್ಲಿ ಬೆಟ್ಟದಷ್ಟು ಸಮಸ್ಯೆಗಳು ತಾಂಡವವಾಡುತ್ತಿದ್ದರೂ
ಅಧಿಕಾರಿಗಳ ಸ್ಪಂದನೆ ಮಾತ್ರ ಶೂನ್ಯವಾಗಿದೆ.

ಲಿಂಗಸುಗೂರು ಪಟ್ಟಣದಿಂದ ಆರು ಕಿ.ಮೀ. ಅಂತರದಲ್ಲಿರುವ ಈ ಗ್ರಾಮ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಸರ್ಜಾಪುರ ಗ್ರಾಪಂ ವ್ಯಾಪ್ತಿಯಲ್ಲಿದೆ. ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಧೋಬಿ ಘಾಟ್‌ ಸೇರಿದಂತೆ ಹಲವು ಸೌಲಭ್ಯಗಳ ಕೊರತೆ ಇದೆ.

ನೀರಿನ ಸಮಸ್ಯೆ: ರಾಜೀವ ಗಾಂಧಿ ಕುಡಿಯುವ ನೀರಿನ ಯೋಜನೆಯ ಏಳು ಗ್ರಾಮಗಳ ಪೈಕಿ ಈ ಗ್ರಾಮವನ್ನು ಸೇರಿಸಲಾಗಿದೆ. ಇದಲ್ಲದೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಹಲವಾರು ಯೋಜನೆಗಳ ಮೂಲಕ ಭಗೀರಥ ಪ್ರಯತ್ನ ಮಾಡಿದರೂ ಸಮರ್ಪಕವಾಗಿ ನೀರು ಪೂರೈಕೆ ಸಾಧ್ಯವಾಗಿಲ್ಲ. ಬಾವಿಯಲ್ಲಿ ಹೂಳು ತುಂಬಿದ್ದು ಅದನ್ನು ತೆಗೆಸಲು ಗ್ರಾಪಂ ಆಡಳಿತ ನಿರ್ಲಕ್ಷ ವಹಿಸಿದೆ. ನೀರಿನ ಸಮಸ್ಯೆ ನಮ್ಮೂರಿಗೆ ಅಂಟಿರುವ ಶಾಪ ಎಂದು ಗ್ರಾಮಸ್ಥರು ಗೋಳಿಡುವಂತಾಗಿದೆ.

ಚರಂಡಿ ಇಲ್ಲ: ಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದ್ದರಿಂದ ಎಲ್ಲೆಂದರಲ್ಲಿ ಮಲೀನ ನೀರು ಹರಿಯುತ್ತಿದ್ದು, ಗ್ರಾಮಸ್ಥರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ. ಇದರಿಂದ ರೋಗ ರುಜಿನಗಳು ಹರಡುವುದಕ್ಕೂ ಕಾರಣವಾಗಿದೆ. ಗ್ರಾಮದಲ್ಲಿ ಅವಶ್ಯಕತೆ ಇರುವ ಕಡೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಧೋಬಿ ಘಾಟ್‌ ವ್ಯವಸ್ಥೆ ಇಲ್ಲದ್ದೇ ದೊಡ್ಡ ಸಮಸ್ಯೆಯಾಗಿದೆ. ಬಟ್ಟೆ ತೊಳೆಯಲು ಪರ್ಯಾಯ ಸ್ಥಳ ಇಲ್ಲದೇ  ಮದಿಂದ ಅರ್ಧ ಕಿ.ಮೀ. ಅಂತರದಲ್ಲಿರುವ ಲಿಂಗಸುಗೂರು-ರಾಯಚೂರು ರಾಜ್ಯ ಹೆದ್ದಾರಿ ರಸ್ತೆಯಲ್ಲೇ ಗ್ರಾಮದ ಮಹಿಳೆಯರು ಸಾಲುಗಟ್ಟಿ ಕುಳಿತು ಬಟ್ಟೆ ತೊಳೆಯುತ್ತಾರೆ. ರಾಜ್ಯ ಹೆದ್ದಾರಿಯಾಗಿದ್ದರಿಂದ ವಾಹನಗಳ ಓಡಾಟ
ಹೆಚ್ಚಿರುವ ಈ ಸ್ಥಳದಲ್ಲಿ ಎಚ್ಚರ ತಪ್ಪಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ಆದ್ದರಿಂದ ಗ್ರಾಮದಲ್ಲಿ ಧೋಬಿಘಾಟ್‌ ನಿರ್ಮಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

ಕೈಗೆಟುಕುವ ತಂತಿ: ಗ್ರಾಮದಲ್ಲಿನ ವಿದ್ಯುತ್‌ ಕಂಬಗಳಲ್ಲಿನ ತಂತಿಗಳು ಕೈಗೆಟುಕುವಂತಿವೆ. ಇವುಗಳನ್ನು ಸರಿಪಡಿಸಲು ಜೆಸ್ಕಾಂಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರಂತರ ಜ್ಯೋತಿ ಯೋಜನೆಯಡಿಯಲ್ಲಿ ವಿದ್ಯುತ್‌ ಕಂಬಗಳನ್ನು ಹಾಕಿ ತಂತಿಗಳ ಜೋಡಣೆ ಮಾಡಲಾಗಿದೆ. ಆದರೆ ಇನ್ನೂ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.