ಜ್ಯೋತಿಷಿಗಳೇ ದೊಡ್ಡ ಭಯೋತ್ಪಾದಕರು: ಕುಂವೀ


Team Udayavani, Sep 11, 2017, 4:33 PM IST

ray-1.jpg

ರಾಯಚೂರು: ಮಾಧ್ಯಮಗಳಲ್ಲಿ ಬೆಳ್ಳಂಬೆಳಗ್ಗೆ ಬರುವಂಥ ಜ್ಯೋತಿಷಿಗಳು ದೇಶದ ದೊಡ್ಡ ಭಯೋತ್ಪಾದಕರು. ಸರ್ಕಾರ ಇಂಥ ಕಾರ್ಯಕ್ರಮಗಳನ್ನು ಮೊದಲು ನಿಷೇಧಿಸಲಿ ಎಂದು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಆಗ್ರಹಿಸಿದರು.

ನಗರದ ಪಂ|ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಲಾ ಸಂಕುಲ ಸಂಸ್ಥೆಯಿಂದ ರವಿವಾರ ಹಮ್ಮಿಕೊಂಡ
ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ಆದರ್ಶ ಶಿಕ್ಷಕರಿಗೆ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು
ಮಾತನಾಡಿದರು. ಮಾಧ್ಯಮಗಳು ಸಮಾಜಕ್ಕೆ ಅಪಾಯಕಾರಿ ಅಂಶಗಳನ್ನು ತೋರಿಸುತ್ತಿವೆ. ಸರ್ಕಾರ ಮೌಡ್ಯ ಪ್ರತಿಬಂಧಕ ಕಾಯ್ದೆ ಜಾರಿಗೊಳಿಸುವ ಮೂಲಕ ಮೌಢ್ಯಾಚರಣೆಗಳಿಗೆ ಕಡಿವಾಣ ಹಾಕಬೇಕು ಎಂದರು.

ಮಠಗಳನ್ನು ಕಟ್ಟಿಕೊಂಡ ಗುರುಗಳು ಸಮಾಜಕ್ಕೆ ಬೇಕಿಲ್ಲ. ಮಠಗಳು ಅನುಯಾಯಿಗಳಲ್ಲಿ ಎಷ್ಟು ಜನರನ್ನು ಉದ್ಧಾರ
ಮಾಡಿವೆ. ಬಸವಣ್ಣನವರ ತತ್ವಾದರ್ಶ ಅಳವಡಿಸಿಕೊಳ್ಳದ, ಒಪ್ಪಿಕೊಳ್ಳದ ಮಠಗಳು, ಮಠಾಧಿಧೀಶರ ಅಗತ್ಯ ಸಮಾಜಕ್ಕಿಲ್ಲ.

ಎಷ್ಟು ಮಠಗಳಿಂದ ಸಮಾಜ ಉದ್ಧಾರವಾಗುತ್ತಿದೆ. ಶಿಕ್ಷಣಕ್ಕೆ, ಸಾಮಾಜಿಕ, ಆರ್ಥಿಕ ವ್ಯವಸ್ಥೆ ಸುಧಾರಣೆಗೆ ಯಾವ ಮಠಗಳು ನೆರವಾಗಿವೆ? ಕೊರಳಲ್ಲಿ ಚಿನ್ನದ ಸರ ಹಾಕಿ ಆಶೀರ್ವದಿಸಿದರೆ ಅಭಿವೃದ್ಧಿ ಆಗುವುದಿಲ್ಲ, ಲಿಂಗ ಕಟ್ಟಿ ಪಾದಪೂಜೆ ಮಾಡಿಸಿಕೊಳ್ಳುವ ಗುರುಗಳು ನಮಗೆ ಬೇಕಿಲ್ಲ ಎಂದರು.

ಚುನಾಯಿತ ಜನಪ್ರತಿನಿಧಿಗಳು ತಮ್ಮ ಕ್ಷೇತ್ರ ಬಿಟ್ಟು ಡಾಲರ್ ಕಾಲೋನಿಗಳಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ
ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗುತ್ತಿದೆ. ನಂಜುಂಡಪ್ಪ ವರದಿಯಲ್ಲಿ ಉಲ್ಲೇಖೀಸಿದ ಯಾವೊಂದು ಅಂಶಗಳು
ಜಾರಿಯಾಗುತ್ತಿಲ್ಲ ಎಂದರು. ಎಂಎಸ್‌ಐಎಲ್‌ ಅಧ್ಯಕ್ಷ ಹಂಪನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ವಸಂತಕುಮಾರ ಮಾತನಾಡಿದರು.

ಪ್ರಶಸ್ತಿ ಪ್ರದಾನ: ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ, ಸಮಾಜ ಸೇವಾರತ್ನ, ವರ್ಷದ ವ್ಯಕ್ತಿ, ಜನನಾಯಕ, ಉತ್ತಮ ಚಾಲಕ ಹಾಗೂ ವೈದ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಶಾಸಕ ಡಾ|ಶಿವರಾಜ ಪಾಟೀಲ, ಜಿಪಂ ಸದಸ್ಯ ಮಹಾಂತೇಶ ಪಾಟೀಲ ಅತ್ತನೂರ, ಡಾ| ಮನೋಹರ ವೈ.ಪತ್ತಾರ, ಎಂ. ಈರಣ್ಣ ಮಾನ್ವಿ, ಶರಣಪ್ಪಗೌಡ ಜಾಡಲದಿನ್ನಿ, ಮಹ್ಮದ್‌ ನಿಜಾಮುದ್ದೀನ್‌, ಕರೆಮ್ಮ ನಾಯಕ, ಇಲ್ಲೂರು ಗೋಪಾಲಯ್ಯ, ಗಿರಿಜಾ, ಗುಂಡಪ್ಪ, ವೀರಭದ್ರಪ್ಪ, ರಾಮಕೃಷ್ಣ, ಕಲಾ ಸಂಕುಲದ ಅಧ್ಯಕ್ಷೆ ರೇಖಾ ಬಡಿಗೇರ, ಮಾರುತಿ ಬಡಿಗೇರ ಇತರರಿದ್ದರು.

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.