ಬಿಎಸ್ಪಿಯಿಂದ ಸಮಾನ ಅವಕಾಶ: ಶ್ಯಾಮಸುಂದರ
Team Udayavani, Jan 16, 2018, 3:27 PM IST
ಮಾನ್ವಿ: ಸರ್ವರಿಗೂ ಸಮಾನ ಅವಕಾಶ ನೀಡಬಲ್ಲ ಪವಿತ್ರವಾದ ಪ್ರಜಾಪ್ರಭುತ್ವ ಜಾರಿಗೆ ತರಲು ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಬಿಎಸ್ಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಶ್ಯಾಮಸುಂದರ ಕುಂಬ್ದಾಳ ಹೇಳಿದರು.
ಬಹುಜನ ಸಮಾಜ ಪಕ್ಷ ತಾಲೂಕು ಘಟಕದಿಂದ ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಎಸ್ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿ ಅವರ ಜನ್ಮದಿನ ನಿಮಿತ್ತ ಕೇಕ್ ಕತ್ತರಿಸಿ ಅವರು ಮಾತನಾಡಿದರು. ಸುಮಾರು 50 ವರ್ಷಗಳಿಗೂ ಹೆಚ್ಚುಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ಜನರಿಗೆ ಉತ್ತಮ ಶಿಕ್ಷಣ, ಉದ್ಯೋಗ, ಭೂಮಿ ಹಾಗೂ ಬಂಡವಾಳಗಳನ್ನು ಒದಗಿಸುವ ಯೋಜನೆ ಬಿಟ್ಟು ಅನ್ನಭಾಗ್ಯ, ಕ್ಷೀರಭಾಗ್ಯ, ತಾಳಿಭಾಗ್ಯದಂತಹ ಚಾರಿಟಿ
ಯೋಜನೆಗಳನ್ನು ಜಾರಿ ಮಾಡಿ ದೇಶದಲ್ಲಿ ಬಹುಸಂಖ್ಯಾತರನ್ನು ದೈನೇಸಿಗಳನ್ನಾಗಿ ಮಾಡುತ್ತಿದೆ. ಇನ್ನು ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ, ಅಪೌಷ್ಟಿಕತೆಯಂತಹ ಜ್ವಲಂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚಿ ಕೋಮುಗಲಭೆಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಸರ್ವರಿಗೂ ಸಮಾನ ಅವಕಾಶಗಳು ದೊರಕಲು ಬಿಎಸ್ಪಿ ಪಕ್ಷದಿಂದ ಮಾತ್ರ ಸಾಧ್ಯ. ಕರ್ನಾಟಕದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಗಳ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದರು.
ಇದೆ ವೇಳೆ ಪ್ರಜಾಪ್ರಭುತ್ವ ಉಳಿಸುವ ಕಡೆಗೆ-ಆನೆಯ ನಡಿಗೆ ಜನಾಂದೋಲನ ಬೈಕ್ ರ್ಯಾಲಿ ನಡೆಸಲಾಯಿತು. ಅಲ್ಲದೆ ಬಡ ಜನರಿಗೆ ಒಂದು ದಿನ ಉಚಿತ ಆಟೋ ಸೇವೆ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಿಎಸ್ಪಿ ಜಿಲ್ಲಾ ಸಮಿತಿ ಸದಸ್ಯ ಹನುಮಂತ್ರಾಯ ಕಪಗಲ್, ಚನ್ನಬಸವ ಜಗ್ಲಿ, ನಾರಾಯಣಪ್ಪ ನಾಯಕ, ಸಂಪತ್ರಾಜ್, ಯಮುನಪ್ಪ ಪನ್ನೂರು, ಇಮಾಮ್ ಸಾಬ್, ದುರುಗಪ್ಪ ಸಾದಾಪುರ, ದೇಶರಾಜ್ ಕೊಡ್ಲಿ, ಪರಶುರಾಮ
ಬಾಗಲವಾಡ, ಉರುಕುಂದ ಜಗ್ಲಿ, ಬಿ. ಚಂದ್ರಶೇಖರ, ಬಸವರಾಜ ದೇವರಮನಿ, ತಾಯಪ್ಪ ದೊಡ್ಡಿ ಸೇರಿದಂತೆ ಆನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?