ಮಗ ಮೃತಪಟ್ಟರೂ ಮತ್ತೂಬ್ಬರ ಬಾಳಿಗೆ ಬೆಳಕಾದ!


Team Udayavani, Jan 29, 2018, 5:02 PM IST

ray-4.jpg

ರಾಯಚೂರು: ಮನೆಗೆ ಆಸರೆಯಾಗಬೇಕಿದ್ದ ಮಗ ದುರಂತದಲ್ಲಿ ಸಾವಿಗೀಡಾದ ದುಃಖದಲ್ಲೂ ಕುಟುಂಬವೊಂದು
ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ಕುಟುಂಬ ಸದಸ್ಯರ ಈ ಸಮಯೋಚಿತ ನಿರ್ಧಾರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ತಾಲೂಕಿನ ಕುಕನೂರು ಗ್ರಾಮದ ಮಹೇಂದ್ರ (18) ರವಿವಾರ ಬೆಳಗ್ಗೆ ಅಪಘಾತದಲ್ಲಿ ಮೃತಪಟ್ಟಿದ್ದ.

ಸಮೀಪದ ಯರಮರಸ್‌ ಡಯಟ್‌ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಸುನೀಗಿದ್ದ. ಇಂಥ ಸಂಕಷ್ಟಮಯ ಸನ್ನಿವೇಶದಲ್ಲೂ ಹೆತ್ತವರು ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಮಗನ ಕಣ್ಣುಗಳನ್ನು ದಾನ ಮಾಡುವ
ನಿರ್ಧಾರ ಕೈಗೊಂಡಿದ್ದಾರೆ. ಬಡತನದ ಹಿನ್ನೆಲೆಯಲ್ಲೂ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಹೇಂದ್ರ, ತಮ್ಮ
ಹೊಲದಲ್ಲಿ ಬೆಳೆದ ತರಕಾರಿಯನ್ನು ಬೆಳಗ್ಗೆ ಬೈಕ್‌ನಲ್ಲಿ ಮಾರುಕಟ್ಟೆಗೆ ತರುವಾಗ ದುರ್ಘ‌ಟನೆ ಸಂಭವಿಸಿದೆ.

ಡಿಕ್ಕಿ ಹೊಡೆದ ವಾಹನ ಸಮೇತ ಚಾಲಕ  ರಾರಿಯಾಗಿದ್ದಾನೆ. ಮಗನ ಸಾವಿನ ದುಃಖದ ಮಡುವಿನಲ್ಲೂ ಪಾಲಕರು ಧೃತಿಗೆಡದೆ ಇಂಥ ನಿರ್ಧಾರ ಕೈಗೊಂಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ದೇಹವನ್ನು ಶವಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮಗನಂತೂ ಮನೆಗೆ ದಕ್ಕಲಿಲ್ಲ, ಕನಿಷ್ಠ ಪಕ್ಷ ಆತನ ಕಣ್ಣುಗಳಾದರೂ ಬೇರೆಯವರ ಬಾಳಿಗೆ ಬೆಳಕಾಗಲಿ ಎಂದು ಕುಟುಂಬ ಸದಸ್ಯರು ನೇತ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ನಗರದ ರಿಮ್ಸ್‌ನ ಶವ ಪರೀಕ್ಷೆ ಕೇಂದ್ರಕ್ಕೆ ನವೋದಯ ವೈದ್ಯಕೀಯ ವಿಜ್ಞಾನ ಕೇಂದ್ರದ ವೈದ್ಯರು ಆಗಮಿಸಿ ನೇತ್ರಗಳನ್ನು ಸಂಗ್ರಹಿಸಿದ್ದಾರೆ.

ಕೆಲಸದ ಜತೆಗೆ ಓದು: ಚಿಕ್ಕ ಗ್ರಾಮವಾದ ಕುಕನೂರಿನ ಯುವಕ ಮಹೇಂದ್ರ ಕೆಲಸದ ಜತೆಗೆ ಯರಮರಸ್‌ನ ಆನಂದ
ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ತಂದೆ ಮಲ್ಲಿಕಾರ್ಜುನ ಗ್ರಾಮದಲ್ಲಿ ಚಿಕ್ಕ ಹೋಟೆಲ್‌ ನಡೆಸುತ್ತಿದ್ದರೆ, ತಾಯಿ ನರಸಮ್ಮ ಹೊಲ ಮನೆ ಕೆಲಸ ಮಾಡುತ್ತಿದ್ದರು. ತಾಯಿಗೆ ತರಕಾರಿ ಬೆಳೆಯಲು ನೆರವಾಗುತ್ತಿದ್ದ ಮಹೇಂದ್ರ, ಬೆಳಗಿನ ಜಾವ ಬೈಕ್‌ ನಲ್ಲಿ ಮಾರುಕಟ್ಟೆಗೆ ತರಕಾರಿ ಹಾಕಿ ಬರುತ್ತಿದ್ದ. ಆದರೆ, ಇಂದು ತರಕಾರಿ ಹಾಕಲು ತೆರಳವಾಗ ವಿಧಿ ಯಾಟಕ್ಕೆ ಬಲಿಯಾಗಿದ್ದಾನೆ.

ರಿಮ್ಸ್‌ ಶವ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ನವೋದಯ ವೈದ್ಯ ಸಿಬ್ಬಂದಿ, ಕುಟುಂಬ ಸದಸ್ಯರಿಂದ ನಿಯಮಾನುಸಾರ ನೇತ್ರದಾನಕ್ಕೆ ಒಪ್ಪಿಗೆ ಪಡೆದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ವೈದ್ಯ ಸಿಬ್ಬಂದಿ ಸಕಾಲಕ್ಕೆ ಮಾಹಿತಿ ನೀಡಿದ್ದರಿಂದ ನೇತ್ರಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಬೆಂಗಳೂರಿನ ನೇತ್ರ ಸಂಗ್ರಹಾಲಯಕ್ಕೆ ನೇತ್ರಗಳನ್ನು ಕಳುಹಿಸಲಾಗುವುದು ಎಂದರು. ಕಷ್ಟದಲ್ಲೂ ಇಂಥ ಔದಾರ್ಯ ಮೆರೆದ ಪಾಲಕರ ಆಕ್ರಂದನ ಮಾತ್ರ ಮುಗಿಲುಮುಟ್ಟಿತ್ತು. ಮಗನ ಸಾವಿನಲ್ಲೂ ಸಾರ್ಥಕತೆ ಕಂಡ ಕುಟುಂಬ ಸದಸ್ಯರು ಎಲ್ಲರಿಗೂ ಮಾದರಿ ಎನಿಸಿದ್ದಾರೆ.

ಮನೆಗೆ ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡಿದ್ದೇವೆ. ಅವನಂತೂ ಮರಳಿ ಬರುವುದಿಲ್ಲ. ಆದರೆ, ಅವನ ಕಣ್ಣುಗಳಾದರೂ ಬೇರೆಯವರ ಬಾಳಿಗೆ ಬೆಳಕು ನೀಡಲಿ ಎಂಬ ಕಾರಣಕ್ಕೆ ಇಂಥ ನಿರ್ಧಾರ ಕೈಗೊಂಡಿದ್ದೇವೆ. ನಾವೇ
ಸ್ವಇಚ್ಛೆಯಿಂದ ನೇತ್ರದಾನಕ್ಕೆ ಒಪ್ಪಿಗೆ ನೀಡಿದ್ದೇವೆ.
 ಶಿವರಾಜ್‌ ಕುಕನೂರು, ಮೃತನ ಸಹೋದರ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.