ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ


Team Udayavani, Feb 7, 2018, 4:33 PM IST

ray-1.jpg

ಸಿಂಧನೂರು: ಬೀದರ ಜಿಲ್ಲೆ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ಹಡಪದ ಸಮಾಜದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಆಗ್ರಹಿಸಿ ತಾಲೂಕು ಹಡಪದ ಸಮಾಜ ನೇತೃತ್ವದಲ್ಲಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ನಗರದ ಎಪಿಎಂಸಿ ಗಣೇಶ ಗುಡಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಸಮಾಜದ ಮುಖಂಡ ಎಚ್‌.ಜಿ. ಹಂಪಣ್ಣ ಮಾತನಾಡಿ, ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರಿಗೆ ಮರಣದಂಡನೆ ಶಿಕ್ಷೆ ನೀಡಬೇಕು. ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿದರು.

ಸಾಹಿತಿ ಎಂ.ಎಂ. ಕಲಬುರಗಿ, ಗೌರಿ ಲಂಕೇಶ ಸೇರಿದಂತೆ ಹಲವಾರು ಕೊಲೆಗಳಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿ ಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಹಡಪದ ಸಮಾಜದ ದೊಡ್ಡಪ್ಪ ಕಳಮಳ್ಳಿ, ಈರಣ್ಣ ಅಲ್ಲೂರು, ಶಿವಪ್ಪ ಅರಳಹಳ್ಳಿ, ನಿಜಗುಣ ಹಡಪದ, ಕಾಶಿನಾಥ ಮೂಡಬೂಳ, ಶರಣಪ್ಪ, ಯರಿಯಪ್ಪ ತೊಂಡಿಹಾಳ, ತಿರುಪತಿ, ಮರಿಯಪ್ಪ, ಮುದುಕಪ್ಪ, ಪಂಪಣ್ಣ, ಚನ್ನಪ್ಪ, ಬಸವರಾಜ, ಶರಣಪ್ಪ, ವಿರುಪಣ್ಣ, ಎಂ. ಜಗದೀಶ, ರಾಜು ಚಂದ್ರಪ್ಪ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನೊಂದ ಕುಟುಂಬಕ್ಕೆ ಪರಿಹಾರ ಕೊಡಿ
ಮಸ್ಕಿ: ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಇಲ್ಲಿನ ಹಡಪದ ಅಪ್ಪಣ್ಣ ಹಾಗೂ ಸವಿತಾ ಸಮಾಜ ಸೇವಾ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಪ್ರೊಬೇಶರಿ ತಹಶೀಲ್ದಾರ್‌ ತಿಮ್ಮಣ್ಣ ಉಜ್ಜಯಿನಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅತ್ಯಾಚಾರ ಹಾಗೂ ಕೊಲೆಗಳಂತಹ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು.  ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಈ ಹಿಂದೆ ವಿಜಯಪುರ ಹಾಗೂ ಮುದ್ದೇಬಿಹಾಳದಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕೊಲೆಯಾದ ಬಾಲಕಿ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಿ, ಸರ್ಕಾರಿ ಹುದ್ದೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ನೂರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು 

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.