ಕೋಟಿ-ಕೋಟಿ ಖರ್ಚಾದ್ರೂಬರಲಿಲ್ಲ ಒಂದು ಹನಿ ನೀರು!


Team Udayavani, Feb 26, 2018, 5:06 PM IST

ray-3.jpg

ಮುದಗಲ್ಲ: ತಲೇಖಾನ್‌ ಗ್ರಾಪಂ ವ್ಯಾಪ್ತಿಯ ರಾಮಪ್ಪನ ತಾಂಡಾ, ದಾದುಡಿ ತಾಂಡಾ, ತಲೇಖಾನ್‌ ಸೇರಿದಂತೆ ವಿವಿಧೆಡೆ ಅನುಷ್ಠಾನಗೊಳಿಸಲಾದ ಕುಡಿಯುವ ನೀರಿನ ಕಾಮಗಾರಿಗಳಿಗೆ ಕೋಟಿ ಕೋಟಿ ಹಣ ಖರ್ಚಾದರೂ ಹನಿ ನೀರು ಸಿಕ್ಕಿಲ್ಲ!.

ಗ್ರಾಮೀಣ ಭಾಗದಲ್ಲಿ ಬದುಕು ಸಾಗಿಸುತ್ತಿರುವ ಜನರಿಗೆ ಬಿಸಿಲಿನ ತಾಪ ನೆತ್ತಿ ಸುಡಲಾರಂಭಿಸಿದೆ. ಕುಡಿಯುವ ನೀರಿಗೆ ಆಸೆರೆಯಾಗಿದ್ದ ಕೋಳವೆ ಬಾವಿ ಸೇರಿದಂತೆ ಇತರ ಜಲ ಮೂಲಗಳು ಬತ್ತಿ ಅಂತರ್ಜಲ ಪಾತಾಳದತ್ತ ಮುಖ ಮಾಡಿದೆ. ಕುಡಿಯುವ ನೀರಿನ ಸಮಸ್ಯೆಗೆ ಇದುವರೆಗೆ ಜಾರಿಗೊಳಿಸಿದ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದರೆ ಹಲವು ತಲೆಮಾರುಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇರುತ್ತಿರಲಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೆ ತಾತ್ಕಾಲಿಕ ಪರಿಹಾರ ಹುಡುಕುವ, ಜನರ ಬಗ್ಗೆ ಮೊಸಳೆ ಕಣ್ಣಿರು ಸುರಿಸುವ ಪರಿಣಾಮ ಕುಡಿಯುವ ನೀರಿನ ಯೋಜನೆಗಳು ಹಳ್ಳ ಹಿಡಿದು ಜನ-ಜಾನುವಾರು ವರ್ಷವಿಡಿ ಕುಡಿಯುವ ನೀರಿಗಾಗಿ ಪರಿತಪಿಸುವ ಪರಸ್ಥಿತಿ ನಿರ್ಮಾಣವಾಗಿದೆ.

2014-15ರಲ್ಲಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ಸುಮಾರು 65ಲಕ್ಷ ರೂ. ಮಂಜೂರು ಮಾಡಿ ಲಿಂಬೆಪ್ಪನ ತಾಂಡಾ ಹಾಗೂ ರಾಮಪ್ಪನ ತಾಂಡಾದ ಮಧ್ಯೆ ನೀರು ಸಂಗ್ರಹ ತೊಟ್ಟಿ ನಿರ್ಮಿಸಿ, ಲಿಂಬೆಪ್ಪನ ತಾಂಡಾದ ಹಳ್ಳದಲ್ಲಿ ಕೊಳವೆ ಬಾವಿ ಕೊರೆಸಿ ಪಂಪ್‌ಸೆಟ್‌ ಮತ್ತು ವಿದ್ಯುತ್‌ ಪರಿವರ್ತಕ ಅಳವಡಿಸಲಾಗಿದೆ. ಎರಡು ವರ್ಷದಿಂದ ಪಂಪ್‌ಸೆಟ್‌ಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ನೀರಿನ ಟ್ಯಾಂಕಿಗೆ ಹಳ್ಳದ ಬೋರ್‌ವೆಲ್‌ ನಿಂದ ನೀರು ಸರಬರಾಜಿಗೆ ಪೈಪ್‌ಲೈನ್‌ ಸಹ ಹಾಕಿಲ್ಲ ಎಂದು ಲಿಂಬೆಪ್ಪನ ತಾಂಡಾದ ರೆಡ್ಡೆಪ್ಪ, ತೇಜಪ್ಪ ಆರೋಪಿಸಿದ್ದಾರೆ.

ಆದೇ ವರ್ಷ ಎನ್‌.ಆರ್‌.ಡಬ್ಲೂ.ಪಿ ಯೋಜನೆಯಡಿ 20 ಲಕ್ಷ ರೂ.ಖರ್ಚು ಮಾಡಿ, ದಾದುಡಿ ತಾಂಡಾದಲ್ಲಿ ನೀರು ಸಂಗ್ರಹ ಟ್ಯಾಂಕ್‌ ನಿರ್ಮಿಸಿ ಪ್ರತ್ಯೇಕ ವಿದ್ಯುತ್‌ ಪರಿವರ್ತಕ ಹಾಗೂ ಕೊಳವೆಬಾವಿಗೆ ವಿದ್ಯುತ್‌ ಮೋಟಾರ್‌ ಅಳವಡಿಸಿ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಪೈಪ್‌ ಲೈನ್‌ ಅಳವಡಿಕೆ ಕೆಲಸ ಅರೆಬರೆಯಾಗಿದ್ದರಿಂದ ಜನರಿಗೆ ಸರಿಯಾಗಿ ನೀರು ಪೂರೈಕೆ ಆಗುತ್ತಿಲ್ಲ. 

ತಲೇಖಾನ್‌ ಗ್ರಾಮದಲ್ಲಿ 1 ಲಕ್ಷ ಲೀಟರ್‌ ನೀರು ಸಂಗ್ರಹ ಸಾಮಾರ್ಥ್ಯದ ಟ್ಯಾಂಕ್‌ ನಿರ್ಮಿಸಿ ಪೈಪ್‌ಲೈನ್‌ ಮಾಡಲಾಗಿದೆ. ಬೋರಿನಲ್ಲಿ ನೀರಿನ ಪ್ರಮಾಣ ಕಡಿಮೆ ಇರುವುದರಿಂದ ಯೋಜನೆ ಅಮೆವೇಗದಲ್ಲಿದೆ. ಯರದೊಡ್ಡಿ ತಾಂಡಾದಲ್ಲಿಯೂ ಸಹ ಬೃಹತ್‌ ಟ್ಯಾಂಕ್‌ ನಿರ್ಮಿಸಿದರೂ ಯೋಜನೆ ಉಪಯೋಗಕ್ಕೆ ಬಾರದಂತಾಗಿದೆ. ತಾಂಡಾಕ್ಕೆ ಖಾಸಗಿ ವ್ಯಕ್ತಿಗಳ ತೋಟದಿಂದ ನೀರು ಖರೀದಿಸಿ ನೀಡಲಾಗುತ್ತಿದೆ. ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರಿನ ಯೋಜನೆಗಳು ಹಳ್ಳಹಿಡಿದಿವೆ. ಹಡಗಲಿ ಗ್ರಾಮದಲ್ಲಿ ನಿರ್ಮಿಸಿದ ನೀರಿನ ಟ್ಯಾಂಕ್‌ ನಾಲ್ಕೇ ವರ್ಷದಲ್ಲಿ ಸೋರಲಾರಂಭಿಸಿದೆ ಎಂದು ಗ್ರಾಪಂ ಸದಸ್ಯ ವೆಂಕನಗೌಡ ದೂರಿದ್ದಾರೆ. 

ನೀರಿನ ಯೋಜನೆ ಹಾಗೂ ವಿದ್ಯುತ್‌ ಪರಿವರ್ತಕದ ಬಗ್ಗೆ ತಾಪಂ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ಬಾರಿ ಪ್ರಸ್ತಾಪಿಸಿದರೂ ಅಧಿಕಾರಿಗಳು ಗಮನಹರಿಸಿಲ್ಲ, ಮಹಿಳಾ ಸದಸ್ಯರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲದಂತಾಗಿದೆ.
 ಶಾರದಾ ರಾಠೊಡ, ಹಡಗಲಿ ತಾಪಂ ಸದಸ್ಯೆ.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಕಿರಿಯ ಅಭಿಯಂತರರ ಮೂಲಕ ಸಮಸ್ಯೆ ಬಗೆ ಹರಿಸಲಾಗುವುದು. 
 ಅಬಿದಲಿ ಎಇಇ ಕುಡಿಯುನ ನೀರು ಸರಬರಾಜು ವಿಭಾಗ ಲಿಂಗಸುಗೂರ

„ದೇವಪ್ಪ ರಾಠೊಡ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.