ವೈಚಾರಿಕತೆ ಮೇಲೆ ದಾಳಿ ಅಪಾಯ
Team Udayavani, Mar 13, 2018, 5:31 PM IST
ರಾಯಚೂರು: ದೇಶದಲ್ಲಿ ಕೋಮು ಶಕ್ತಿಗಳ ಅಟ್ಟಹಾಸ ದಿನೇದಿನೆ ಹೆಚ್ಚುತ್ತಿದ್ದು, ವಿಚಾರವಾದಿ, ಚಿಂತಕರು, ಲೇಖಕರನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ.
ವಿಚಾರವಾದಿಗಳ ಕೊಲೆ ದೇಶದ ಭವಿಷ್ಯಕ್ಕೆ ಅಪಾಯಕಾರಿ ಎಂದು ಅಖೀಲ ಭಾರತ ಕ್ರಾಂತಿಕಾರಿ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಪ್ರದೀಪಸಿಂಗ್ ಠಾಕೂರ್ ಆತಂಕ ವ್ಯಕ್ತಪಡಿಸಿದರು.
ನಗರದ ವೀರಾಂಜನೇಯ ಮುನ್ನೂರಕಾಪು ಕಲ್ಯಾಣ ಮಂಟಪದಲ್ಲಿ ಸೋಮವಾರದಿಂದ ಶುರುವಾದ ಅಖೀಲ
ಭಾರತ ಕ್ರಾಂತಿಕಾರಿ ಕಿಸಾನ್ ಸಭಾ 2ನೇ ರಾಷ್ಟ್ರೀಯ ಸಮ್ಮೇಳನದ ಎರಡನೇ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು.
ಲೇಖಕರಾದ ಪನ್ಸಾರೆ, ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ, ಮುಜಫರ್ ಅಲ್ಲಂಗಿರಿ ಅಂಥವರ
ಕೊಲೆಯಾಗಿದೆ. ಮತ್ತೂಂದು ಕಡೆ ಲೆನಿನ್, ಅಂಬೇಡ್ಕರ್, ಪೆರಿಯಾರ್ ಪ್ರತಿಮೆಗಳನ್ನು ಕೋಮು ಶಕ್ತಿಗಳು ಧ್ವಂಸಗೊಳಿಸಿವೆ. ಸಿದ್ಧಾಂತಗಳ ಮೇಲೆ ನಡೆಯುತ್ತಿರುವ ದಾಳಿಗಳ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಲು ಮುಂದಾಗಬೇಕು ಎಂದರು.
ಆಳುವ ಸರ್ಕಾರಗಳು ಜವಾಬ್ದಾರಿಹೀನವಾಗಿ ವರ್ತಿಸುತ್ತಿವೆ. ರೈತರ ಸರಣಿ ಆತ್ಮಹತ್ಯೆಗಳು ನಡೆದರೂ ಸ್ಪಂದಿಸುತ್ತಿಲ್ಲ.
ಬೆಂಬಲ ಬೆಲೆ ನೀಡುತ್ತಿಲ್ಲ, ಸಾಲ ಮನ್ನಾ ಮಾಡುತ್ತಿಲ್ಲ. ದಲಿತ, ಆದಿವಾಸಿಗಳ ಭೂಮಿ ಮತ್ತು ವಸತಿ ಸಮಸ್ಯೆಗಳ ಬಗ್ಗೆಯೂ ಕಾಳಜಿ ವಹಿಸಿಲ್ಲ. ಕೇವಲ ಬಂಡವಾಳಶಾಹಿ ಪರ ಯೋಜನೆ ಜಾರಿಗೊಳಿಸುತ್ತಿವೆ. ಇಂಥ ಕ್ರಮಗಳ ವಿರುದ್ಧ ರೈತ ಸಂಘಟನೆಗಳು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.
ಎಐಕೆಕೆಎಸ್ ರಾಷ್ಟ್ರಾಧ್ಯಕ್ಷ ಬಾಬುರಾಮ್ ಶರ್ಮಾ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ, ಬಡಜನರಿಗೆ ವಸತಿ, ರೈತರಿಗೆ ಭೂಮಿ ಹಂಚಿಕೆಗಾಗಿ ಸರ್ಕಾರಗಳು ಪರ್ಯಾಯ ಕೃಷಿ ನೀತಿ ಜಾರಿಗೆ ತರಬೇಕು ಎಂದರು.
ಟಿಯುಸಿಐ ರಾಜ್ಯ ಉಪಾಧ್ಯಕ್ಷ ಚಿನ್ನಪ್ಪ ಕೊಟ್ರಿಕಿ, ಸಿಪಿಐ(ಎಂಎಲ್) ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ, ಜಿಲ್ಲಾ
ಕಾರ್ಯದರ್ಶಿ ಕೆ.ನಾಗಲಿಂಗಸ್ವಾಮಿ, ಆರ್ ವೈಎಫ್ಐ ರಾಜ್ಯ ಕಾರ್ಯದರ್ಶಿ ನಾಗರಾಜ ಪೂಜಾರ, ಆರ್.ಸಿ.ಎಫ್. ಬಿ.ಎನ್.ಯರದಿಹಾಳ, ವಿದ್ಯಾರ್ಥಿ ಸಂಘಟನೆಯ ಕಿರಣಕುಮಾರ, ಮಹಿಳಾ ಸಂಘಟನೆಯ ಚನ್ನಮ್ಮ, ವೆಲ್ಲು ತಮಿಳುನಾಡು ಮಾತನಾಡಿದರು. ರೈತ ಸಂಘದ ರಾಜ್ಯ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ