ಮಳೆ-ಗಾಳಿಗೆ ಜನಜೀವನಅಸ್ತವ್ಯಸ್ತ: ಮನೆಗಳಿಗೆ ಹಾನಿ


Team Udayavani, May 14, 2018, 4:45 PM IST

ray-1.jpg

ಮುದಗಲ್ಲ: ಸಮೀಪದ ದೇಸಾಯಿ ಭೋಗಾಪುರ ತಾಂಡಾ, ದೇಸಾಯಿ ಭೋಗಾಪುರ, ತಲೇಖಾನ, ಯರದೊಡ್ಡಿ ಹಾಗೂ ಹಡಗಲಿ ಮತ್ತು ಹಡಗಲಿ ತಾಂಡಾ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಶನಿವಾರ ಸುರಿದ ಮಳೆ-ಬಿರುಗಾಳಿಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಶನಿವಾರ ಸಂಜೆ ಗುಡಗು-ಸಿಡಿಲಿನ ಆರ್ಭಟ ಮತ್ತು ಬಿರುಗಾಳಿಯೊಂದಿಗೆ ಮಳೆ ಸುರಿದಿದೆ. ಬಿರುಗಾಳಿಗೆ
ಮೇವಿನ ಬಣವೆಗಳು, ಗಿಡ, ವಿದ್ಯುತ್‌ ಕಂಬಗಳಿಗೆ ಧಕ್ಕೆಯಾಗಿದ್ದರೆ, ಮನೆ ಹಾಗೂ ಜಾನುವಾರು ಶೆಡ್‌ಗಳ ಟಿನ್‌
ಗಳು ಹಾರಿಹೋಗಿವೆ. 

ತಲೇಖಾನ ಗ್ರಾಪಂ ವ್ಯಾಪ್ತಿಯ ದಾದುಡಿ ತಾಂಡಾದ ಸಿದ್ದಪ್ಪ ರುಕ್ಕಪ್ಪನಿಗೆ ಸೇರಿದ ಗುಡಿಸಲು ಮನೆ ಕುಸಿದು ಬಿದಿದ್ದರಿಂದ ಮನೆಯಲ್ಲಿದ್ದ ಅಮರವ್ವ (55) ಎಂಬವರ ಕಾಲಿಗೆ ತೀವ್ರ ಗಾಯವಾಗಿದೆ. 

ಕಸ್ತೂರಿನಾಯ್ಕ ತಾಂಡಾದ ಗಮ್ಮವ್ವ ಮಾನಪ್ಪ ಎಂಬುವರ ಮನೆ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿದೆ. ಮನೆಯಲ್ಲಿದ್ದ ಗಮ್ಮವ್ವ ಮತ್ತು ಮೊಮ್ಮಗಳಾದ ಸ್ನೇಹಾಳಿಗೆ ಗಾಯಗಳಾಗಿವೆ. ಆದೇ ತಾಂಡಾದ ರಶುರಾಮ ಕಂಬಾರನ ಕೊಲಿಮೆ ಶೆಡ್‌ನ‌ ತಗಡುಗಳು ಗಾಳಿಗೆ ಹಾರಿ ಹೋಗಿವೆ. ರಮೇಶ ಠಾಕರೆಪ್ಪ ಅವರ ಜಾನುವಾರು ಶೆಡ್‌, ರಘುಕಾಂತ ಅವರ ಮನೆ, ತಿರುಪತಿ ಅವರಿಗೆ ಸೇರಿದ ಜಾನುವಾರು ಶೆಡ್‌, ನಾಗೇಶ ದೇವಪ್ಪ ಅವರ ಜಾನುವಾರು ಶೆಡ್‌, ಡಾಕಪ್ಪ ರಾಮಜಪ್ಪ ಅವರ ಜಾನುವಾರು ಶೆಡ್‌, ಅಮರೇಶ ತಂಬೂ ಎಂಬುವರ ಹೋಟೆಲ್‌ನ ಮೇಲ್ಛಾವಣಿ ತಗಡು ಹಾಗೂ ರಾಮಪ್ಪನ ತಾಂಡಾದ ಚೆನ್ನಪ್ಪ ಮೂರ್ಶಪ್ಪ ಎಂಬುವರ ಶೆಡ್‌ನ‌ ತಗಡುಗಳು ಬಹುದೂರ ಹಾರಿ ಹೋಗಿವೆ. ಅಲ್ಲಲ್ಲಿ ಮರಗಳು, ರಂಬೆಕೊಂಬೆಗಳು ಮುರಿದು ಬಿದ್ದಿವೆ. ಇನ್ನು ಕೆಲವೆಡೆ ಗಿಡಮರಗಳು ಬುಡಸಮೇತ ಧರೆಗುರುಳಿವೆ.

ವಿದ್ಯುತ್‌ ಕಟ್‌: ಕನ್ನಾಳ ಭಾಗ ಸೇರಿ ರಾಮಪ್ಪನ ತಾಂಡಾ, ವೇಣ್ಯಪ್ಪನ ತಾಂಡಾ, ಹಡಗಲಿ ತಾಂಡಾದಲ್ಲಿ ವಿದ್ಯುತ್‌ ಕಂಬ ಮುರಿದು ಬಿದ್ದ ಪರಿಣಾಮ ರಾತ್ರಿ-ಹಗಲು ವಿದ್ಯುತ್‌ ಇಲ್ಲದೆ ಜನ ಕುಡಿಯುವ ನೀರಿಗೂ ಪರಿತಪಿಸಬೇಕಾದ ಪರಸ್ಥಿತಿ ನಿರ್ಮಾಣವಾಗಿದೆ. ಬಾರದ ಕಂದಾಯ ಅಧಿಕಾರಿಗಳು: ತಾಂಡಾ ಹಾಗೂ ಗ್ರಾಮಗಳಲ್ಲಿ ಮಳೆ-ಗಾಳಿಗೆ ಸಾಕಷ್ಟು ಹಾನಿ ಆಗಿದ್ದರೂ ಯಾವೊಬ್ಬ ಅಧಿಕಾರಿಗಳು ಮಾತ್ರ ಇತ್ತ ತಲೆಹಾಕಿಲ್ಲ. ಹಾನಿ ಸಮೀಕ್ಷೆ ನಡೆಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಆಗ್ರಹ: ಬೇಸಿಗೆ ಮಳೆಗೆ ಸಾಕಷ್ಟು ಜನ ನೋವು, ಹಾನಿ ಅನುಭವಿಸಿದ್ದಾರೆ. ಕಂದಾಯ ಇಲಾಖೆ ಅಧಿಕಾರಿಗಳು
ಬಾಧಿತ ತಾಂಡಾ, ಗ್ರಾಮಗಳಿಗೆ ಭೇಟಿ ನೀಡಿ ಸರ್ವೆ ನಡೆಸಬೇಕು. ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ
ನೀಡಬೇಕೆಂದು ಹಡಗಲಿ ಕ್ಷೇತ್ರದ ತಾಪಂ ಸದಸ್ಯೆ ಶಾರದಾ ಡಿ. ರಾಠೊಡ ಆಗ್ರಹಿಸಿದ್ದಾರೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.