ಲಿಂಗಸುಗೂರಲ್ಲಿ ಶಾಂತಿಯುತ ಮತದಾನ
Team Udayavani, Jun 9, 2018, 11:28 AM IST
ಲಿಂಗಸುಗೂರು: ತಾಲೂಕಿನಲ್ಲಿ ಆರು ಮತಗಟ್ಟೆಗಳಲ್ಲಿ ಶುಕ್ರವಾರ ನಡೆದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆದಿದೆ.
ಪಟ್ಟಣದ ಹಳೆಯ ತಹಶೀಲ್ದಾರ ಕಚೇರಿ, ತಾಲೂಕಿನ ಗುರುಗುಂಟಾ, ಹಟ್ಟಿ, ಮುದಗಲ್, ಮಸ್ಕಿ, ನಾಗರಹಾಳನಲ್ಲಿ ಮತಗಟ್ಟೆ ಕೇಂದ್ರ ತೆರೆಯಲಾಗಿದೆ. ಲಿಂಗಸುಗೂರು 839, ಗುರುಗುಂಟಾ 126, ಹಟ್ಟಿ ಕ್ಯಾಂಪ್ 394, ಮುದಗಲ್ 260, ಮಸ್ಕಿ 471, ನಾಗರಹಾಳ 85 ಸೇರಿ ಒಟ್ಟು 2175 ಮತದಾರರಿದ್ದಾರೆ. ಇದರಲ್ಲಿ 1654 ಪುರುಷರ, 521 ಮಹಿಳಾ ಮತದಾರರಿದ್ದಾರೆ.
ಬೆಳಗ್ಗೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು. ಮಳೆ ಸುರಿಯುತ್ತಿದ್ದರಿಂದ ಮತದಾನ ಮಂದಗತಿಯಲ್ಲಿ ಸಾಗಿತ್ತು. ಮಳೆ ನಿಂತ ಮೇಲೆ ಸ್ವಲ್ಪ ಚುರುಕು ಕಂಡುಬಂದಿತು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮತಗಟ್ಟೆ ಸುತ್ತಮುತ್ತ ಅಲ್ಲಲ್ಲಿ ಜಮಾವಣೆಗೊಂಡಿದ್ದರು.
ಮಳೆ ಸುರಿಯುತ್ತಿದ್ದರಿಂದ ಬೆಳಗ್ಗೆ 11ಗಂಟೆಯಿಂದ ಮ. 1ಗಂಟೆವರೆಗೆ ಪಟ್ಟಣದಲ್ಲಿ ವಿದ್ಯುತ್ ಕಡಿತವಾಗಿತ್ತು. ಪಟ್ಟಣದ ಹಳಯ ತಹಶೀಲ್ದಾರ್ ಕಚೇರಿ ಕಟ್ಟಡದಲ್ಲಿನ ಮತಗಟ್ಟೆ ಕೇಂದ್ರದಲ್ಲಿ ಬೆಳಕಿನ ವ್ಯವಸ್ಥೆಯಿಲ್ಲದೇ ಕತ್ತಲಲ್ಲಿ ಮತದಾನ ನಡೆಸಲಾಗಿದೆ. ಮತಗಟ್ಟೆ ಕೇಂದ್ರ ಅಧಿಕಾರಿಗಳು ತಮ್ಮ ಮೊಬೈಲ್ನಲ್ಲಿ ಟಾರ್ಚ್ ಹಾಕಿ ಮತದಾನ ಪ್ರಕ್ರಿಯೆ ನಡೆಸಿದರು. ಇದರಿಂದ ಮತದಾರರಲ್ಲಿ ಕೆಲಹೊತ್ತು ಗೊಂದಲ ಉಂಟಾಗಿತ್ತು.
ಪಟ್ಟಣದ ಮತಗಟ್ಟೆ ಕೇಂದ್ರದಲ್ಲಿ ಕನಿಷ್ಠ ಬೆಳಕಿನ ವ್ಯವಸ್ಥೆ ಮಾಡದೇ ಕತ್ತಲಲ್ಲಿ ಮತದಾನ ಮಾಡುವ ಸ್ಥಿತಿ ನಿರ್ಮಾಣ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಪ್ಪ ಮೇಟಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ