ಮಳೆ-ಗಾಳಿಗೆ ಹಾನಿ; ಬಾಧಿತರಿಗೆ ಶೀಘ್ರ ಪರಿಹಾರ


Team Udayavani, Jun 12, 2018, 9:39 AM IST

ray-1.jpg

ರಾಯಚೂರು: ಕಳೆದ ತಿಂಗಳು ಬೀಸಿದ ಭಾರೀ ಬಿರುಗಾಳಿಗೆ ಸಾಕಷ್ಟು ಮನೆಗಳು ಜಖಂಗೊಂಡಿದ್ದು, ಏಪ್ರಿಲ್‌ನಲ್ಲಿ ಸುರಿದ ಆಲಿಕಲ್ಲು ಮಳೆಗೆ ಭತ್ತ, ಮಾವು ಬೆಳೆ ಹಾನಿಯಾಗಿದೆ. ಈ ಕುರಿತು ಜಿಲ್ಲಾಡಳಿತ ಸಮೀಕ್ಷೆ ನಡೆಸಿದ್ದು, ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ವಿತರಿಸಲು ಸೂಚಿಸಿದ್ದಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ್‌ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಮೇ 24, 25ರಂದು ಬೀಸಿದ ಬಿರುಗಾಳಿಯಿಂದ ಮಾನ್ವಿ ತಾಲೂಕಿನ ಹರವಿ, ಗುಡದಿನ್ನಿ ಸೇರಿ ವಿವಿಧೆಡೆ ಮನೆಗಳು ಜಖಂಗೊಂಡರೆ, ಕೆಲವೆಡೆ ಟಿನ್‌ ಶೆಡ್‌ಗಳು ಹಾರಿ ಹೋಗಿವೆ. ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. 

ಈಗಾಗಲೇ 1,027 ಮನೆಗಳಿಗೆ ಪರಿಹಾರ ನೀಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಪ್ರತಿ ಸಂತಸ್ತರಿಗೆ 4,100 ರೂ. ಪರಿಹಾರವನ್ನು ಆರ್‌ಟಿಜಿಎಸ್‌ ಮಾಡಲಾಗುವುದು. ಇನ್ನು ಏಪ್ರಿಲ್‌ನಲ್ಲಿ ಸುರಿದ ಆಲಿಕಲ್ಲು ಮಳೆಯಿಂದ ಸಿಂಧನೂರು ಸೇರಿ ಇತರೆ ಪ್ರದೇಶದಲ್ಲಿ, ಸುಮಾರು 2,277 ಹೆಕ್ಟೇರ್‌ ಭತ್ತದ ಬೆಳೆ ಹಾನಿಯಾಗಿದ್ದು, 1.52 ಕೋಟಿ ರೂ. ನಷ್ಟವಾಗಿದೆ. ರೈತರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ರೈತರಿಂದ ಖರೀದಿಸಿದ್ದ ತೊಗರಿ ಬಾಕಿ ಹಣವನ್ನು ಒಂದು ವಾರದಲ್ಲಿ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಇಲ್ಲಿವರೆಗೆ 21 ಸಾವಿರ ರೈತರಿಗೆ ಹಣ ನೀಡಿದ್ದು, ಇನ್ನೂ 744 ರೈತರಿಗೆ ಬಾಕಿಯಿದೆ. ದಾಖಲೆಗಳ ಪರಿಶೀಲನೆ, ಬ್ಯಾಂಕ್‌ ಖಾತೆ ಸಂಗ್ರಹದಲ್ಲಿನ ಸಮಸ್ಯೆಯಿಂದ ವಿಳಂಬವಾಗಿದ್ದು, ತಕ್ಷಣ ವಿತರಿಸಲಾಗುವುದು. ಉದ್ದೇಶಪೂರ್ವಕವಾಗಿ ಆದಂಥ ತಪ್ಪುಗಳಲ್ಲ. ಅಚಾತುರ್ಯದಿಂದಾಗಿದ್ದು, ಶೀಘ್ರದಲ್ಲೇ ಮಾಡಿಸಲಾಗುವುದು ಎಂದರು.

ಪ್ರಸಕ್ತ ವರ್ಷ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು, ಈ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 37 ರೈತ ಸಂಪರ್ಕ ಕೇಂದ್ರಗಳಿಂದ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ನಿತ್ಯ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಳೆದ ವರ್ಷ ಬೆಳೆ ವಿಮೆ ಮಾಡಿಸಿದ್ದ ರೈತರಿಗೆ ಹಣ ಬಂದಿಲ್ಲ ಎಂಬ ದೂರುಗಳಿವೆ. ಹೀಗಾಗಿ ಬೆಳೆ ವಿಮೆ ಮಾಡಿಸಲು ರೈತರು ಮುಂದೆ ಬರುತ್ತಿಲ್ಲ. ವಿಮೆ ಕಂಪನಿಗಳ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತರಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.