ಸಚಿವ ವೆಂಕಟರಾವ್‌ ನಾಡಗೌಡರಿಗೆ ಅದ್ಧೂರಿ ಸ್ವಾಗತ


Team Udayavani, Jun 13, 2018, 2:09 PM IST

rayachuru.jpg

ಸಿಂಧನೂರು: ಸಚಿವರಾದ ನಂತರ ಪ್ರಥಮ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಪಶು ಸಂಗೋಪನಾ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಅವರಿಗೆ ಕ್ಷೇತ್ರದ ಜನತೆ ತಾಲೂಕಿನ ದಡೇಸುಗೂರು ಹತ್ತಿರದ ತುಂಗಭದ್ರಾ ನದಿ ಬಳಿ ಅದ್ಧೂರಿಯಾಗಿ ಸ್ವಾಗತಿಸಿ ತೆರೆದ ವಾಹನದಲ್ಲಿ ಸಿಂಧನೂರುವರೆಗೆ ಮೆರವಣಿಗೆ ನಡೆಸಿದರು.

ಸಚಿವ ವೆಂಕಟರಾವ ನಾಡಗೌಡ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ದಡೇಸುಗೂರು ಗ್ರಾಮದ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಸಿಂಧನೂರುವರೆಗೆ ಬರುವ ಎಲ್ಲ ಗ್ರಾಮ ಹಾಗೂ ಕ್ಯಾಂಪ್‌ ಗಳಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಹರಕೆ ತೀರಿಸಿದರು.

ಸಚಿವ ನಾಡಗೌಡ ತೆರೆದ ವಾಹನದಲ್ಲಿ ಬರುತ್ತಿದ್ದರೆ ಹಿಂದೆ ಹಿಂಬಾಲಕರ, ಕಾರ್ಯಕರ್ತರ ಸಾವಿರಾರು ವಾಹನ ಮೆರವಣಿಗೆಗೆ ಮೆರಗು ನೀಡಿದವು. ದಡೇಸುಗೂರು ಗ್ರಾಮಕ್ಕೆ 2 ಗಂಟೆ ಸುಮಾರಿಗೆ ಬಂದರೆ ಸಿಂಧನೂರು ತಲುಪುವ ವೇಳೆಗೆ ಸಂಜೆ 5:30 ಗಂಟೆ ಅಗಿತ್ತು. ಈ ಮಧ್ಯೆ ಶ್ರೀಪುರಂ ಜಂಕ್ಷನ್‌ನಲ್ಲಿರುವ ಮುಖಂಡ ಗುರ್ರಂ ಗುನ್ನೇಶ್ವರರಾವ್‌ ಅವರ ನಿವಾಸದಲ್ಲಿ ಸಚಿವರು ಮಧ್ಯಾಹ್ನ ಊಟ ಮಾಡಿದರು. 

ಮೆರವಣಿಗೆ ಸಿಂಧನೂರು ನಗರ ಪ್ರವೇಶಿಸುತ್ತಿದ್ದಂತೆ ಕಾರ್ಯಕರ್ತರು ಜೆಡಿಎಸ್‌ ಧ್ವಜಗಳನ್ನಿಡಿದುಕೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಜೊತೆಗೆ ಡೊಳ್ಳು ಕುಣಿತ, ಭಾಜಾ-ಭಜಂತ್ರಿಗಳು ಮೆರವಣಿಗೆಗೆ ಮೆರಗು ನೀಡಿದವು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ನಗರದ ಸತ್ಯಗಾರ್ಡನ್‌ಕ್ಕೆ ಆಗಮಿಸಿ ಸಮಾವೇಶ ನಡೆಸಲಾಯಿತು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ಲಿಂಗಪ್ಪ, ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ಜೆಡಿಎಸ್‌ ಮುಖ್ಯ ಸಂಚಾಲಕ ಬಿ.ಹರ್ಷ, ವಕ್ತಾರ ಬಸವರಾಜ ನಾಡಗೌಡ, ಕಾರ್ಯಾಧ್ಯಕ್ಷ ಮಲ್ಲೇಶಗೌಡ, ನಾಗೇಶ ಹಂಚಿನಾಳ ಕ್ಯಾಂಪ್‌, ಡಿ.ಸತ್ಯನಾರಾಯಣ, ಜಿ.ಸತ್ಯನಾರಾಯಣ, ಎಸ್‌. ಕೃಷ್ಣಮೂರ್ತಿ, ಧರ್ಮನಗೌಡ ಮಲ್ಕಾಪುರ, ಅಶೋಕಗೌಡ ಗದ್ರಟಗಿ, ರಾಮನಗೌಡ ಮಲ್ಕಾಪುರ, ರಂಗಾರೆಡ್ಡಿ, ಚಂದ್ರಶೇಖರ ಮೈಲಾರ, ಕೆ.ಮರಿಯಪ್ಪ, ಸಾಯಿರಾಮಕೃಷ್ಣ, ನದೀಮುಲ್ಲಾ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟ್ರಾಫಿಕ್‌ ಜಾಮ್‌: ತಾಲೂಕಿನ ದಡೇಸುಗೂರು ಗ್ರಾಮದಿಂದಲೇ ಸಚಿವರನ್ನು ಮೆರವಣಿಗೆ ಮೂಲಕ ಸಿಂಧನೂರಿಗೆ ಬರಮಾಡಿಕೊಳ್ಳುವಾಗ ರಸ್ತೆಯುದ್ದಕ್ಕೂ ನೂರಾರು ವಾಹನಗಳು ನಿಂತು ಸಂಚಾರಕ್ಕೆ ಸಮಸ್ಯೆ ಆಯಿತು. ಟ್ರಾಕ್‌ ನಿಯಂತ್ರಣಕ್ಕೆ ಡಿವೈಎಸ್‌ಪಿ ಪ್ರದೀಪ ಕುಲ್ಕರ್ಣಿ, ಸಿಪಿಐ ನಾಗರಾಜ ಕಮ್ಮಾರ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಹರಸಾಹಸ ಪಟ್ಟರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.