ರೈತರ ಉಳಿವಿಗೆ ಸಂಶೋಧನೆಗಳು ನಡೆಯಲಿ: ಡಾ| ನಾಯ್ಕ


Team Udayavani, Jun 13, 2018, 4:10 PM IST

raichuru-1.jpg

ರಾಯಚೂರು: ಕೃಷಿ ಲಾಭವಲ್ಲದ ಕ್ಷೇತ್ರವಾಗಿ ಮಾರ್ಪಡುತ್ತಿದ್ದು, ಹೀಗಾಗಿ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಅತ್ತ ರೈತರಿಗೂ, ಇತ್ತ ಗ್ರಾಹಕರಿಗೂ ಲಾಭವಾಗದೆ ಮಧ್ಯವರ್ತಿಗಳು ಲಾಭ ಮಾಡಿಕೊಳ್ಳುತ್ತಿರುವುದೇ ಈ ಸಮಸ್ಯೆಗೆ ಕಾರಣ ಎಂದು ಶಿವಮೊಗ್ಗ ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯದ
ಕುಲಪತಿ ಡಾ| ಎಂ.ಕೆ.ನಾಯ್ಕ ಕಳವಳ ವ್ಯಕ್ತಪಡಿಸಿದರು.

ಇಲ್ಲಿನ ಕೃಷಿ ವಿವಿ ಪ್ಷೇಕ್ಷಾಗೃಹದಲ್ಲಿ ಸ್ನಾತಕೋತ್ತರ ಅಧ್ಯಯನ ನಿರ್ದೇಶನಾಲಯವು ಆಯೋಜಿಸಿದ್ದ ಎರಡು ದಿನಗಳ ಸ್ನಾತಕೋತ್ತರ ಪ್ರಥಮ ಸಮ್ಮೇಳನಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ರೈತರು  ಬೆಳೆ ಹಾಗೂ
ಬೆಲೆ ಮಧ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿ ನಷ್ಟಕ್ಕೆ ತುತ್ತಾಗುತ್ತಿದ್ದಾರೆ. ಮಧ್ಯವರ್ತಿಗಳ ಹಾವಳಿ ಮಿತಿ ಮೀರುತ್ತಿದ್ದು, ಅವೈಜ್ಞಾನಿಕ ದರ ನೀತಿಯಿಂದ ರೈತರು ನಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ರೈತರಿಗೆ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಯುವ ಕೃಷಿ ವಿಜ್ಞಾನಿಗಳು ಹೊಸ ಹೊಸ ಸಂಶೋಧನೆ ನಡೆಸಬೇಕಿದೆ. ಸದ್ಯಕ್ಕೆ ರಾಜ್ಯದ ರೈತರ ಸರಾಸರಿ ವಾರ್ಷಿಕ ಆದಾಯ 33 ಸಾವಿರ ರೂ. ಮಾತ್ರ ಇದೆ. ಇದನ್ನು ದ್ವಿಗುಣಗೊಳಿಸುವತ್ತ ಸರ್ಕಾರ ಚಿಂತನೆ ನಡೆಸಿರುವುದು ಗಮನಾರ್ಹ ಎಂದರು.

ಕೃಷಿ ವಿಜ್ಞಾನ ಎಲ್ಲ ವಿಜ್ಞಾನಗಳ ತಾಯಿ ಇದ್ದಂತೆ. ದೇಶದ 130 ಕೋಟಿ ಜನರಿಗೆ ನಿತ್ಯ ಆಹಾರ ಸಿಗುತ್ತಿದೆ ಎಂದರೆ ಅದರ ಹಿಂದೆ ಕೃಷಿ ವಿಜ್ಞಾನಿಗಳ ಕೊಡುಗೆ ಬಹಳಷ್ಟಿದೆ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಹೆಚ್ಚುತ್ತಿದೆ. ಅದರ ಜತೆಗೆ ಕೃಷಿ ಉತ್ಪಾದನೆ ಹೆಚ್ಚಳದ ಸವಾಲು ನಮ್ಮೆದುರಿಗಿದೆ ಎಂದರು.

ರಾಯಚೂರು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ| ಬಿ.ವಿ.ಪಾಟೀಲ ಮಾತನಾಡಿ, ದೇಶ ಆಹಾರೋತ್ಪಾದನೆಯಲ್ಲಿ
ಸ್ವಾವಲಂಬನೆ ಸಾಧಿಸಿದೆ. ಒಂದೂವರೆ ವರ್ಷದ ಹಿಂದೆ 271 ಮಿಲಿಯನ್‌ ಟನ್‌ ಆಹಾರ ಉತ್ಪಾದಿಸಿದರೆ, ಪ್ರಸಕ್ತ ವರ್ಷ 285 ಮಿಲಿಯನ್‌ ಟನ್‌ ಆಹಾರ ಉತ್ಪಾದಿಸಲಾಗುತ್ತಿದೆ. ಆದರೆ, ಇದರಿಂದ ಕೃಷಿಯಾಧಾರಿತ ಪ್ರದೇಶ ಕಡಿಮೆಯಾಗುತ್ತಿದೆ.ಹೆಚ್ಚುತ್ತಿರುವ ಕೈಗಾರಿಕೆಗಳು ಹಾಗೂ ಜನಸಂಖ್ಯೆಯಿಂದ ಕೃಷಿ ಭೂಮಿ ಪ್ರಮಾಣ ಇಳಿಕೆಯಾಗುತ್ತಿದೆ. ಇಂಥ ವೇಳೆ ಇರುವ ಭೂಮಿಯಲ್ಲೇ ಅಧಿಕ ಇಳುವರಿ ಪಡೆಯುವಂಥ ಸಂಶೋಧನೆಗಳು ನಡೆಯಬೇಕು ಎಂದರು.

ದೇಶದಲ್ಲಿ ಪ್ರತಿವರ್ಷ  52  ಸಾವಿರ ಕೃಷಿ ಪದವೀಧರರು ಹೊರ ಬರುತ್ತಿದ್ದಾರೆ. ಅದರಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ
ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ಇರುತ್ತದೆ ಎನ್ನುವ ಪ್ರಶಂಸೆ ಎಲ್ಲೆಡೆ ಕೇಳಿ ಬರುತ್ತದೆ. ಆದರೆ, ಕಮ್ಯೂನಿಕೇಶನ್‌ ಮಾಡುವ ವಿಷಯದಲ್ಲಿ ಹಿಂದೆ ಬೀಳುತ್ತಿದ್ದಾರೆ. ನೀವು ಉತ್ತಮ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಮುಂದೆ ಕೃಷಿ ವಲಯಕ್ಕೆ ಏನಾದರೂ ಕೊಡುಗೆ ನೀಡಿ ಎಂದರು. ಕೃಷಿಯಲ್ಲಿ ಸಮಸ್ಯೆಗಳಿಗೆ ಕೊನೆಯಿಲ್ಲ. ಈ ಸಮಸ್ಯೆಗಳೇ
ಸಂಶೋಧನೆಗೆ ಅವಕಾಶ ಒದಗಿಸಿವೆ. ರೈತರು ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಸರಳ ರೀತಿಯ ಸಂಶೋಧನೆ ಮಾಡಬೇಕು. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಲಿಂಕ್‌ ಮಾಡುವ ವಿಧಾನದ ಬಗ್ಗೆ ಸಂಶೋಧನೆ ನಡೆಸಬೇಕು ಎಂದರು.

ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ಡಾ| ಎಂ.ಶೇಖರಗೌಡ ಮಾತನಾಡಿ, ಕೃಷಿಯಲ್ಲಿ ಕೀಟಗಳ ನಿರ್ವಹಣೆ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆಯಬೇಕು. ಆಹಾರ ಸಂಸ್ಕರಣೆ ಹಾಗೂ ಗುಣಮಟ್ಟದ ಬಗ್ಗೆಯೂ ಸಂಶೋಧನೆಯಾಗಬೇಕು. ಕೃಷಿ ಪದವಿ ಓದುವುದಕ್ಕೆ ಬರುವ ವಿದ್ಯಾರ್ಥಿಗಳನ್ನು ವಿನಾಕಾರಣ ಸತಾಯಿಸುವ ಕೆಲಸವನ್ನು ಪ್ರಾಧ್ಯಾಪಕರು ಮಾಡಬಾರದು. ಸಲಹೆ, ಸೂಚನೆ ಹಾಗೂ ಅನುಮೋದನೆಗಳನ್ನು ಬೇಗನೆ ಕೊಟ್ಟು ಹೆಚ್ಚಿನ ಸಾಧನೆ ಮಾಡಲು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ವಿವಿಯ ಪ್ರಭಾರ ಕುಲಪತಿ ಗುತ್ತಿ ಜಂಬುನಾಥ ಅಧ್ಯಕ್ಷತೆ ವಹಿಸಿದ್ದರು. ಸಮ್ಮೇಳನ ಸಂಘಟನಾ ಕಾರ್ಯದರ್ಶಿ ಡಾ|
ಎಂ.ಜಿ.ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಪ್ರಮೋದ ಕಟ್ಟಿ ಸ್ವಾಗತಿಸಿದರು. ಸಮ್ಮೇಳನದ ಮುಖ್ಯ ಸಂಯೋಜಕ ಡಾ| ಬಿ.ಎಂ.ಚಿತ್ತಾಪುರ, ಆಡಳಿತ ಮಂಡಳಿ ಸದಸ್ಯರಾದ ಹೇಮಾವತಿ ಲಂಕೇಶ, ಅಮರೇಶ ಬಲ್ಲಿದವ, ಸಿದ್ದಪ್ಪ ಭಂಡಾರಿ ಹಾಗೂ ವೀರಣ್ಣ ಪರಸರೆಡ್ಡಿ, ಪ್ರೊ| ಜನಗೌಡ ಇದ್ದರು.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.