ಕಾಂಗ್ರೆಸ್ ಸರ್ಕಾರದ ಯೋಜನೆ ಮುಂದುವರಿಕ
Team Udayavani, Jul 9, 2018, 1:29 PM IST
ಸಿಂಧನೂರು: ಸಾಮಾಜಿಕ ನ್ಯಾಯದ ಮೇಲೆ ಮೈತ್ರಿ ಸರ್ಕಾರ ನಡೆಯುತ್ತಿದ್ದು, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳು ಮುಂದುವರಿಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಪಶುಸಂಗೋಪನಾ ಹಾಗೂ ಮೀನುಗಾರಿಕೆ ಇಲಾಖೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಹಿಂದುಳಿದ ವರ್ಗಗಳ ಇಲಾಖೆಯ 3.25 ಕೋಟಿ ವೆಚ್ಚದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಕುಮಾರಸ್ವಾಮಿ ರೈತರ ಪರ ಬಜೆಟ್ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸ್ವಲ್ಪ ಮಟ್ಟಿಗೆ ಅನ್ಯಾಯವಾದರೂ ಈ ಹಿಂದೆ ಕಾಂಗ್ರೆಸ್ ಸರ್ಕಾರ ನೀಡಿದ ಯೋಜನೆಗಳು ಮುಂದುವರಿಯಲಿವೆ ಎಂದರು.
ಭೂಸೇನಾ ನಿಗಮದ ಅಧಿಕಾರಿಗಳು ಹಣ ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿಗಮದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಯಾವುದೇ ಕೆಲಸಗಳನ್ನು ಭೂಸೇನಾ ನಿಗಮಕ್ಕೆ ನೀಡಬಾರದು ಎನ್ನುವ ನಿರ್ಧಾರಕ್ಕೆ ಬರಲಾಗಿದೆ. ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.
ಬಜೆಟ್ನಲ್ಲಿ ಮೀನುಗಾರಿಕೆ ಇಲಾಖೆಯ ಹೊಸ ಪ್ರಾಜೆಕ್ಟ್ಗೆ 4 ಕೋಟಿ ಅನುದಾನ ನೀಡಿದ್ದು, ಅಧಿಕಾರಿಗಳ ಸಭೆ ನಡೆಸಿ ಕೆಲಸ ನಡೆಸುವುದಾಗಿ ಹೇಳಿದರು.
ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಸದಸ್ಯರಾದ ಕೆ.ಮರಿಯಪ್ಪ, ಬಸವರಾಜ ನಾಡಗೌಡ, ಹಾಜಿಮಸ್ತಾನ್, ಶರಣಬಸವ ನೆಟೆಕಲ್, ಚಂದ್ರಶೇಖರ ಮೈಲಾರ, ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ