ಸೌಹಾರ್ದ ಜೀವನ ಸಾಗಿಸಲು ಸಲಹೆ
Team Udayavani, Jul 13, 2018, 3:22 PM IST
ಲಿಂಗಸುಗೂರು: ಸಾಮಾಜಿಕ ಬಹಿಷ್ಕಾರದಂತಹ ಹೀನ ಕೆಲಸಕ್ಕೆ ಹೋಗದೇ ಒಂದೇ ಊರಿನಲ್ಲಿ ಸೌಹಾರ್ದದಿಂದ ಬದುಕು ಸಾಗಿಸಬೇಕೆಂದು ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಹೇಳಿದರು.
ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ತಾಲೂಕಿನ ಯರಜಂತಿ ಗ್ರಾಮದಲ್ಲಿ ದಲಿತ ಕುಟಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಷಯವಾಗಿ ನಡೆದ ಅಧಿಕಾರಿಗಳು, ದಲಿತರ ಹಾಗೂ ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಅಣ್ಣ-ತಮ್ಮ ಇದ್ದಂತೆ. ತಾರತಮ್ಯ ಮಾಡಬಾರದು. ಸಾಮಾಜಿಕ
ಬಹಿಷ್ಕಾರ ಹಾಕವುದು ಸರಿಯಲ್ಲ. ಇದು ಕಾನೂನಿಗೆ ವಿರುದ್ಧವಾಗಿದೆ. ಎರಡೂ ಕೋಮಿನವರಿಗೆ ಕರೆಸಿ ಸಂಧಾನ ಮಾಡಿಸಿ. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಗ್ರಾಮದ ಹಿರಿಯರಿಗೆ ಸಲಹೆ ನೀಡಿದರು.
ಯರಜಂತಿ ಗ್ರಾಮದಲ್ಲಿ ದಲಿತರಿಗೆ ಕುಡಿಯುವ ನೀರಿಗಾಗಿ 5 ಲಕ್ಷ ರೂ. ಅನುದಾನ ಒದಗಿಸಲಾಗುವುದು ಹಾಗೂ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಪ್ರವೇಶಾತಿಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಬಿಇಒ ಹಾಗೂ ಸಿಡಿಪಿಒಗೆ ಸೂಚಿಸಿದರು.
ಆಕ್ರೋಶ: ಯರಜಂತಿ ಗ್ರಾಮದಲ್ಲಿ ಬಹಿಷ್ಕಾರ ವಿಷಯವನ್ನು ಬಹಿರಂಗಪಡಿಸಿದ್ದು ಮಾಧ್ಯಮದವರು. ಅವರನ್ನು ದೂರವಿಟ್ಟು ಸಭೆ ನಡೆಸುವುದು ಎಷ್ಟರಮಟ್ಟಿಗೆ ಸರಿ ಎಂದು ಮುಖಂಡ ಮೋಹನ ಗೋಸ್ಲೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಸ್ಪಿ ಎಸ್.ಎಚ್.ಸುಬೇದಾರ, ತಹಶೀಲ್ದಾರ್ ಚಾಮರಾಜ ಪಾಟೀಲ, ಸಿಪಿಐ ವಿ.ಎಸ್.ಹಿರೇಮಠ, ಬಿಇಒ ಚಂದ್ರಶೇಖರ ಬಂಡಾರಿ, ಸಿಡಿಪಿಒ ಪ್ರೇಮಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ರವಿ, ದಸಂಸ ಮುಖಂಡರಾದ ಹನುಮಂತ ವೆಂಕಟಾಪುರ, ಅಜ್ಜಪ್ಪ ಕರಡಕಲ್, ಶಿವಪ್ಪ ಯರಜಂತಿ, ನಾಗಪ್ಪ, ಹುಲಗಮ್ಮ, ಹನುಮಮ್ಮ, ಈರಮ್ಮ,
ಮಹಾದೇವಪ್ಪ ಪರಾಂಪುರ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ