ರಿಮ್ಸ್‌ನಿಂದ 300 ಹಾಸಿಗೆ ಆಸ್ಪತ್ರೆಗೆ ಪ್ರಸ್ತಾವನೆ


Team Udayavani, Jul 24, 2018, 2:54 PM IST

ray-1.jpg

ರಾಯಚೂರು: ಇಲ್ಲಿನ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಕೊರತೆ ಕಾಡುತ್ತಿದೆ. ಈ ಕಾರಣಕ್ಕೆ ಆಡಳಿತ ಮಂಡಳಿ ಮತ್ತೂಂದು 300 ಹಾಸಿಗೆಗಳ ಆಸ್ಪತ್ರೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದಿಂದಲೂ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ರಿಮ್ಸ್‌ನಲ್ಲಿ 550 ಬೆಡ್‌ಗಳಿವೆ. ಆದರೆ, ಕೆಲವೊಮ್ಮೆ ರೋಗಿಗಳ ಸಂಖ್ಯೆ ಹೆಚ್ಚಾದಾಗ ಸಮಸ್ಯೆ ಎದುರಿಸುವಂತಾಗುತ್ತದೆ. ಹೀಗಾಗಿ ಆಸ್ಪತ್ರೆ ಆಡಳಿತ ಸರ್ಕಾರದ ಪರವಾನಗಿ ಪಡೆದು ಇರುವ ಸ್ಥಳದಲ್ಲಿಯೇ ಹೊಂದಾಣಿಕೆ ಮಾಡಿಕೊಂಡು 600 ಬೆಡ್‌ಗಳವರೆಗೆ ವಿಸ್ತರಿಸಿದ್ದಾರೆ. ಅದಕ್ಕೂ ಮೀರಿ ಬೆಡ್‌ಗಳನ್ನು ಹೆಚ್ಚು ಮಾಡಬೇಕಾದಲ್ಲಿ ಸಿಬ್ಬಂದಿ, ವೈದ್ಯರು, ಮೂಲಭೂತ ಸೌಲಭ್ಯ, ವಾರ್ಡ್‌ಗಳು, ಔಷಧ ಸೇರಿದಂತೆ ಎಲ್ಲವೂ ಹೆಚ್ಚಿಸಬೇಕಾಗುತ್ತದೆ. ಅದಕ್ಕಿಂತ ಹೆಚ್ಚುವರಿ ಆಸ್ಪತ್ರೆ ನಿರ್ಮಿಸುವುದೇ ಸೂಕ್ತ ಎಂಬ ಕಾರಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಎಂಸಿಎಚ್‌ ವಿಭಾಗ: ಈಗಿನ ರೋಗಿಗಳ ಸಂಖ್ಯೆಗನುಗುಣವಾಗಿ 750 ಬೆಡ್‌ಗಳ ಬೇಡಿಕೆಯಿದೆ. ಮುಖ್ಯವಾಗಿ ಬಾಣಂತಿಯರು ಹಾಗೂ ಮಕ್ಕಳಿಗಾಗಿ ಬೆಡ್‌ಗಳ ಕೊರತೆ ಇದೆ. 90 ಬೆಡ್‌ಗಳಿದ್ದರೆ 180ಕ್ಕೂ ಅಧಿಕ ಬಾಣಂತಿಯರು ದಾಖಲಾಗುತ್ತಿದ್ದಾರೆ. ಹೀಗಾಗಿ ಸೂಕ್ಷ್ಮನಿಗಾ ಘಟಕಗಳಲ್ಲಿ ಒಂದೇ ಬೆಡ್‌ ಮೇಲೆ ಇಬ್ಬರು ಮಕ್ಕಳನ್ನು ಮಲಗಿಸುವ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಈ ಕಾರಣಕ್ಕೆ
300 ಬೆಡ್‌ಗಳ ಆಸ್ಪತ್ರೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆದರೆ, ಸರ್ಕಾರ ಮೊದಲ ಹಂತದಲ್ಲಿ ಕನಿಷ್ಠ 150 ಬೆಡ್‌ಗಳ ಆಸ್ಪತ್ರೆ ನೀಡುವ ಸಾಧ್ಯತೆಗಳಿವೆ. 150 ಬೆಡ್‌ಗಳಲ್ಲಿ ಅರ್ಧದಷ್ಟು ಬಾಣಂತಿಯರಿಗೆ ಉಳಿದವುಗಳನ್ನು ಸಾಮಾನ್ಯ ರೋಗಿಗಳಿಗೂ ಬಳಸಿಕೊಳ್ಳಲು ಅವಕಾಶವಿರುತ್ತದೆ. ಸರ್ಕಾರದ ಪ್ರತಿನಿಧಿ ಕೂಡ ಈಚೆಗೆ ಪ್ರತಿಕ್ರಿಯೆ ನೀಡಿದ್ದು, ಪ್ರಸ್ತಾವನೆ ಕೈಗೆತ್ತಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎನ್ನುತ್ತಾರೆ ರಿಮ್ಸ್‌ ನಿರ್ದೇಶಕಿ.

50 ಸೀಟು ಹೆಚ್ಚಳ: ಈ ಮುಂಚೆ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್‌ ಗೆ 100 ಸ್ಥಾನಗಳಿದ್ದವು. ಹೀಗಾಗಿ ರೋಗಿಗಳ ತಪಾಸಣೆಗೂ ಸಮಸ್ಯೆಯಾಗುತ್ತಿತ್ತು. ಆದರೆ, ಕಳೆದ ವರ್ಷ ಅದನ್ನು 150ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳು ಚಿಕಿತ್ಸೆ ನೀಡಲು ಲಭ್ಯರಿದ್ದು, ಹೆಚ್ಚುವರಿ ಬೆಡ್‌ಗಳನ್ನು ನೀಡಿದಲ್ಲಿ ಪರಿಸ್ಥಿತಿ ನಿಭಾಯಿಸಬಹುದು.

ಹುದ್ದೆಗಳ ಕೊರತೆ: ಒಂದೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದಾರೆ. ತಿಂಗಳಾಂತ್ಯಕ್ಕೆ ತಜ್ಞ ವೈದ್ಯರು ನಿಯೋಜನೆಗೊಳ್ಳಲಿದ್ದಾರೆ ಎಂದು ಈಚೆಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದ್ದರು. ಅದರಂತೆ ರಿಮ್ಸ್‌ನಲ್ಲೂ ಬೋಧಕ ಸಿಬ್ಬಂದಿ ಕೊರತೆ ಎದುರಾಗಿದೆ. ಹೀಗಾಗಿ 15 ಸಹಾಯಕ ಪ್ರಾಧ್ಯಾಪಕರು, 26 ಸಹಾಯಕರನ್ನು ನೀಡುವಂತೆ ಭಾರತೀಯ ವೈದ್ಯಕೀಯ ಮಂಡಳಿಗೆ ಮನವಿ ಮಾಡಲಾಗಿದೆ.

ರಿಮ್ಸ್‌ಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಲಭ್ಯಗಳಿಗೂ ಬೇಡಿಕೆ ಹೆಚ್ಚುತ್ತಿದೆ. ಸರ್ಕಾರ 300 ಬೆಡ್‌ಗಳ ಆಸ್ಪತ್ರೆ ಮಂಜೂರು ಮಾಡಿದಲ್ಲಿ ಅನುಕೂಲವಾಗಲಿದೆ ಎಂಬುದು ಸಾರ್ವಜನಿಕರ ಒತ್ತಾಸೆ.

ಅಗತ್ಯಕ್ಕಿಂತ ಹೆಚ್ಚು ರೋಗಿಗಳು ಬರುತ್ತಿರುವ ಕಾರಣ ರಿಮ್ಸ್‌ನಲ್ಲಿ ಬೆಡ್‌ಗಳ ಕೊರತೆ ಕಾಡುತ್ತಿದೆ. ಹೀಗಾಗಿ 300 ಬೆಡ್‌ಗಳ ಆಸ್ಪತ್ರೆ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈಗಿರುವ ಆಸ್ಪತ್ರೆ ಪಕ್ಕದ ಬಿ ಬ್ಲಾಕ್‌ನಲ್ಲಿ ಸ್ಥಳಾವಕಾಶವಿದ್ದು, ಅಲ್ಲಿಯೇ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಹಿಂದಿನ ಸರ್ಕಾರದಲ್ಲಿಯೇ ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಈಗಿನ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ. 
 ಡಾ| ಕವಿತಾ ಪಾಟೀಲ, ರಿಮ್ಸ್‌ ನಿರ್ದೇಶಕಿ

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.