ರಾಯಚೂರು ಮಂತ್ರಾಲಯದ ಹೃದಯ: ಸುಬುಧೇಂದ್ರ ಶ್ರೀ


Team Udayavani, Jul 30, 2018, 12:24 PM IST

ray-1.jpg

ರಾಯಚೂರು: ಕಲಿಯುಗದ ಕಲ್ಪತರು ಶ್ರೀ ರಾಘವೇಂದ್ರ ಸ್ವಾಮಿಗಳು ನೆಲೆಸಿರುವ ಮಂತ್ರಾಲಯ ಮಠದ ಹೃದಯ ಭಾಗ ರಾಯಚೂರಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ನುಡಿದರು.

ಸ್ಥಳೀಯ ಜವಾಹರ ನಗರದ ರಾಯರ ಶಾಖಾಮಠದಲ್ಲಿ ರವಿವಾರ ಹಮ್ಮಿಕೊಂಡಿದ್ದ ತಪ್ತಮುದ್ರಾ ಧಾರಣೆ, ರಾಯರ ಬೃಂದಾವನಕ್ಕೆ ಬೆಳ್ಳಿ ಕಂಬಗಳ ಸಮರ್ಪಣೆ ಸಮಾರಂಭದಲ್ಲಿ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿದರು.

ಭಗವಂತನ ಪ್ರತೀಕವಾದ ಚಾತುರ್ಮಾಸ್ಯ ಸಮಯದಲ್ಲಿ ರಾಯರ ಸೇವೆ ಮಾಡುವುದರಿಂದ ಹೆಚ್ಚಿನ ಅನುಗ್ರಹ ಲಭಿಸಲಿದೆ. ಮಂತ್ರಾಲಯದಲ್ಲಿ ಶ್ರೀಗುರು ರಾಯರ ಮೂಲ ವೃಂದಾವನಕ್ಕೆ ಎಷ್ಟೊಂದು ಶಕ್ತಿಯಿದೆಯೋ ಅದೇ ರೀತಿ ರಾಜ್ಯ, ದೇಶದಲ್ಲಿರುವ ವಿವಿಧ ಶಾಖಾಮಠಗಳಲ್ಲಿ ಅಷ್ಟೇ ಪ್ರಮಾಣದ ಶಕ್ತಿಯಿದೆ. ಯಾವ ರೀತಿ ಒಂದು ದೀಪದಿಂದ ಲಕ್ಷಾಂತರ ದೀಪಗಳನ್ನು ಬೆಳಗಿಸಲಾಗುತ್ತದೋ, ಎಲ್ಲ ದೀಪಗಳು ಒಂದೇ ರೀತಿಯ ಪ್ರಕಾಶವನ್ನು ನೀಡುತ್ತವೆಯೋ ಅದೇ ರೀತಿ ರಾಯರು ತನ್ನ ಭಕ್ತರು ಯಾವುದೇ ಪ್ರದೇಶದಲ್ಲಿ ಸ್ಮರಿಸಿದರೂ ಅವರ ಕಷ್ಟಕಾರ್ಪಣ್ಯಗಳನ್ನು ದೂರ ಮಾಡಲಿದ್ದಾರೆ ಎಂದು ಹೇಳಿದರು.

ರಾಯಚೂರಿನಲ್ಲಿರುವ ಶಾಖಾಮಠವು ಶ್ರೀಮಠಕ್ಕೆ ಅತ್ಯಂತ ಆಪ್ತವಾದ ಪ್ರದೇಶವಾಗಿದೆ. ಹಿಂದಿನ ಯತಿಗಳಿಗೂ ಈ ಮಠವೆಂದರೇ ಸಾಕಷ್ಟು ಗೌರವವಿತ್ತು. ರಾಯಚೂರಿನ ಮಠವು ಎಲ್ಲರ ಸಹಕಾರ, ಸಂಘಟಿತ ಶ್ರಮದಿಂದ ಉತ್ತಮವಾಗಿ ಅಭಿವೃದ್ಧಿ ಹೊಂದಿದ್ದು, ಭಕ್ತರೆಲ್ಲರೂ ಸೇರಿಕೊಂಡು 50 ಕೆಜಿ ಬೆಳ್ಳಿ ಕಂಬವನ್ನು ಶ್ರೀಮಠಕ್ಕೆ ಸಮರ್ಪಿಸುವುದರ ಮೂಲಕ ರಾಯರ ಸೇವೆಯನ್ನು ಮಾಡಿದ್ದಾರೆ ಎಂದು ನುಡಿದರು.

ಇದಕ್ಕೂ ಮುನ್ನ ಸ್ಥಳೀಯ ನಗರೇಶ್ವರ ದೇವಸ್ಥಾನದಲ್ಲಿ ಶ್ರೀಮಠದ ಪೀಠಾಧಿಪತಿಗೆ ಭಕ್ತರು ಗೌರವ ಸಮರ್ಪಣೆ ಮಾಡಿದರು. ನಂತರ ಶೋಭಾಯಾತ್ರೆ ಮೂಲಕ ರಾಯರ ಮಠಕ್ಕೆ ತೆರಳಿದ ಶ್ರೀಗಳು ಭಕ್ತರಿಗೆ ತಪ್ತಮುದ್ರಾ ಧಾರಣೆ ಮಾಡಿ 50 ಕೆಜಿ ಬೆಳ್ಳಿ ಕಂಬವನ್ನು ರಾಯರ ಬೃಂದಾವನಕ್ಕೆ ಸಮರ್ಪಿಸಿದರು. ಬಳಿಕ ಮೂಲ ರಾಮದೇವರಿಗೆ ವಿಶೇಷ ಪೂಜೆ, ಮಠದ ಪ್ರಾಂಗಣದಲ್ಲಿ ರಥೋತ್ಸವ ನೆರವೇರಿಸಲಾಯಿತು. ನಂತರ ನಗರದ ಕೋಟೆ ಮುಂಗ್ಲಿ ಪ್ರಾಣದೇವರ ದೇವಸ್ಥಾನಕ್ಕೆ ಆಗಮಿಸಿದ ಶ್ರೀುಗಳು ವಿಶೇಷ ಪೂಜೆ ಮಾಡಿ ಭಕ್ತರಿಗೆ ತಪ್ತ ಮುದ್ರಾ ಧಾರಣೆ ಮಾಡಿದರು.

ಶ್ರೀಮಠದ ವಿದ್ವಾನ್‌ ಡಾ| ರಾಜಾ ಎಸ್‌. ಗಿರಿಯಾಚಾರ್ಯ, ಶ್ರೀ ಗುರುಸಾರ್ವಭೌಮ ವಿದ್ಯಾಪೀಠದ ಪ್ರಾಚಾರ್ಯ ಡಾ|
ವಾದಿರಾಜಾಚಾರ್ಯ ಸೇರಿದಂತೆ ವಿದ್ವಾಂಸರು, ಪಂಡಿತರು, ರಾಯರ ಭಕ್ತರು, ಮಹಿಳೆಯರು, ಮಕ್ಕಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 

ರಾಯರ ಚೂರು ರಾಯಚೂರಾಗಿ ಮಾರ್ಪಟ್ಟಿದೆ. ಹರಿದಾಸ ಸಾಹಿತ್ಯವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ರಾಯಚೂರಿಗೆ ಸಲ್ಲುತ್ತದೆ. ಗೋಪಾಲದಾಸರು, ವಿಜಯದಾಸರು, ಜಗನ್ನಾಥದಾಸರು ಸೇರಿದಂತೆ ಅನೇಕ
ದಾಸವರೇಣ್ಯರು ರಾಯಚೂರು ಜಿಲ್ಲೆಯಲ್ಲಿ ಜನಿಸಿ ದಾಸಸಾಹಿತ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. 
 ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.