ಅಡಿಗಲ್ಲು ಹಾಕಿದ್ರು, ಕೆಲಸ ಮಾಡೋದು ಮರೆತ್ರು!
Team Udayavani, Aug 13, 2018, 4:00 PM IST
ಲಿಂಗಸುಗೂರು: ಕಾಮಗಾರಿಗೆ ಅಡಿಗಲ್ಲು ಹಾಕೋದು ಬೇಗ ಕೆಲಸ ಶುರು ಮಾಡಲಿ ಅಂತ. ಆದರೆ ಪಟ್ಟಣದಲ್ಲಿ ಕಾಮಗಾರಿವೊಂದಕ್ಕೆ ಅಡಿಗಲ್ಲು ಹಾಕಿ ಎರಡು ತಿಂಗಳು ಗತಿಸುತ್ತಿದ್ದರೂ ಇನ್ನೂ ಕೆಲಸ ಆರಂಭವಾಗಿಲ್ಲ..
ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನದ ಬಳಿ ನಗರೋತ್ಥಾನ ಎರಡನೇ ಹಂತದಲ್ಲಿ 90 ಲಕ್ಷ ರೂ/ ಅನುದಾನದಡಿ
ಸಿಸಿ ಚರಂಡಿ ಕಾಮಗಾರಿಗೆ ಗುತ್ತಿಗೆ ನೀಡಲಾಗಿದೆ. ಈ ಕಾಮಗಾರಿಗೆ ಕಳೆದ ಜೂನ್ ತಿಂಗಳಲ್ಲಿ ಶಾಸಕ ಡಿ.ಎಸ್.
ಹೂಲಗೇರಿ ಅಡಿಗಲ್ಲು ನೆರವೇರಿಸಿದ್ದರು. ಆದರೆ ಈವರೆಗೂ ಕಾಮಗಾರಿ ಆರಂಭವಾಗದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ.
ತೊಂದರೆ: ಪಟ್ಟಣದ ರಾಯಚೂರು ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ, ಸುತ್ತಮುತ್ತಲಿನ ಮನೆಗಳಲ್ಲಿ ಬಳಸಿದ
ನೀರು ಹಾಗೂ ಮಳೆ ಬಂದಾಗ ನೀರು ಬೆಳಗಾವಿ-ಹೈದರಾಬಾದ್ ರಾಜ್ಯ ಹೆದ್ದಾರಿ ಮೇಲೆ ನಿಲ್ಲುತ್ತಿದೆ. ಈ
ನೀರಿನ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುವುದರಿಂದ ರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದು ಮತ್ತಷ್ಟು ನೀರು ನಿಲ್ಲಲು ಕಾರಣವಾಗಿದೆ. ಇದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಗುಂಡಿಯಲ್ಲಿ ನೀರು ತುಂಬಿರುವುದರಿಂದ ಇದನ್ನು ತಿಳಿಯದೇ ಬೈಕ್ ಸವಾರರು ಅವಘಡಕ್ಕೆ ಸಿಲುಕಿ ಕೈ-ಕಾಲು ಮುರಿದುಕೊಂಡ ಉದಾಹರಣೆಗಳು ಸಾಕಷ್ಟಿವೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ.
ಇಲ್ಲಿನ ನಿವಾಸಿಗಳು ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಬಹುದಿನಗಳಿಂದ ಪುರಸಭೆಗೆ ಒತ್ತಾಯಿಸಿದ್ದರಿಂದ ಪುರಸಭೆ
ನಗರೋತ್ಥಾನ ಯೋಜನೆಯಡಿ ಚರಂಡಿ ನಿರ್ಮಿಸಿಲು ಅನುದಾನ ಒದಗಿಸಿದೆ. ಆದರೆ ಗುತ್ತಿಗೆದಾರರು
ಮಾತ್ರ ಇನ್ನೂ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಜನರು ನಿತ್ಯ ತೊಂದರೆ ಅನುಭವಿಸುವುದು ತಪ್ಪುತ್ತಿಲ್ಲ. ಈ
ಸಮಸ್ಯೆ ಪರಿಹರಿಸಲು ಪುರಸಭೆ ಆಡಳಿತಾಧಿಕಾರಿಯಾದ ತಹಶೀಲ್ದಾರ್ ಹಾಗೂ ಶಾಸಕರು ಈ ಬಗ್ಗೆ ಗಮನ ಹರಿಸಿ
ಕೂಡಲೇ ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚಿಸಬೇಕಾಗಿದೆ.
ಚರಂಡಿ ಕಾಮಗಾರಿಗೆ ಟೆಂಡರ್ ಕರೆದು ಶಾಸಕರೇ ಅಡಿಗಲ್ಲು ಹಾಕಿದರೂ ಇನ್ನೂ ಕಾಮಗಾರಿ ಆರಂಭಗೊಳಿಸದ
ಗುತ್ತಿಗೆದಾರರ ವಿರುದ್ಧ ಕ್ರಮ ಜರಗಿಸಬೇಕೆಂದು ನಿವಾಸಿ ಹನುಮೇಶ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್