ದೇಶ ಒಗ್ಗೂಡಿಸಿದ್ದು ಶ್ರೇಷ್ಠ ಸಂವಿಧಾನ


Team Udayavani, Aug 23, 2018, 1:56 PM IST

ray-1.jpg

ರಾಯಚೂರು: ದೇಶದಲ್ಲಿ ಆಗಿ ಹೋದ ಅನೇಕ ಸಂತರು, ಶರಣರು, ಧರ್ಮ ಸಂಸ್ಥಾಪಕರಿಂದ ಆಗದ ಕೆಲಸ ಭಾರತ ಸಂವಿಧಾನ ಮಾಡಿತು. ಎಲ್ಲ ಧರ್ಮ, ಜಾತಿ ಜನರನ್ನು ಒಗ್ಗೂಡಿಸುವ ಕೆಲಸ ಮಾಡಿದ ಸಂವಿಧಾನ ಶ್ರೇಷ್ಠ ಗ್ರಂಥ ಎಂದು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ| ತೋಂಟದ ಸಿದ್ಧಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸರ್ವಜ್ಞ, ಜಸ್ಟಿಸ್‌ ಶಿವರಾಜ ಪಾಟೀಲ ಕಾಲೇಜುಗಳ ಸಹಯೋಗದಲ್ಲಿ ಬುಧವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನ್ಯಾ| ಶಿವರಾಜ ಪಾಟೀಲ ಪ್ರತಿಷ್ಠಾನದ ಉದ್ಘಾಟನೆ,  “ಗುಡ್‌ ಮಾರ್ನಿಂಗ್‌ 365′ ಪುಸ್ತಕ ಬಿಡುಗಡೆ, ಪ್ರತಿಭಾ ಪುರಸ್ಕಾರ ಸಮಾರಂಭದ ಸಾನಿಧ್ಯ ವಹಿಸಿ ಪೂಜ್ಯರು ಆಶೀರ್ವಚನ ನೀಡಿದರು. 

ಇಲ್ಲಿ ಸಿಗುವಂಥ ಮುಕ್ತ ವಾತಾವರಣ ಬೇರೆ ಯಾವ ದೇಶದಲ್ಲೂ ಇಲ್ಲ. ಬಹುಜನ ಸಂಸ್ಕೃತಿಯನ್ನು ಹೊಂದಿರುವ ದೇಶ ಭಾರತ. ದೇಶದಲ್ಲಿ ಪ್ರಜಾಪ್ರಭತ್ವ ಇರುವ ಕಾರಣಕ್ಕೆ ಯಾವುದೇ ಧರ್ಮ, ಜಾತಿಯವರು ದೇಶದ ಅತ್ಯುನ್ನತ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.

ಪ್ರಪಂಚದ ಇತರ ದೇಶಗಳಲ್ಲಿ ಅಲಿಖೀತ ಸಂವಿಧಾನಗಳಿವೆ. ಅಲ್ಲಿ ಹೆಚ್ಚು ಜನಸಂಖ್ಯೆ ಉಳ್ಳವರೇ ಅಧಿಕಾರ ಹಿಡಿಯಬೇಕು
ಎಂಬ ನಿಯಮಗಳಿವೆ. ಆದರೆ, ನಮ್ಮಲ್ಲಿ ಅತಿ ಕಡಿಮೆ ಜನಸಂಖ್ಯೆ ಇರುವ ಸಿಖ್‌ ಸಮುದಾಯದವರು ಪ್ರಧಾನಿಯಾಗಿದ್ದರು. ಅಲ್ಪಸಂಖ್ಯಾತರು ರಾಷ್ಟ್ರಪತಿಗಳಾಗಿದ್ದರು. ಅದಕ್ಕೆ ಸಂವಿಧಾನವೇ ಕಾರಣ. ದೇಶದಲ್ಲಿ ನಾಯಾಂಗ ವ್ಯವಸ್ಥೆಗೆ ಹೆಚ್ಚಿನ ಮಹತ್ವವಿದೆ.
ಕಾರ್ಯಾಂಗ, ಶಾಸಕಾಂಗ ತಪ್ಪು ಮಾಡಿದಾಗ ನ್ಯಾಯಾಂಗ ತಿದ್ದಿ ಸರಿಪಡಿಸುವ ಗುರುತರ ಹೊಣೆ ಹೊತ್ತಿದೆ ಎಂದರು.

ನ್ಯಾ| ಶಿವರಾಜ ವಿ. ಪಾಟೀಲ ಅವರು ರಚಿಸಿರುವ ಗುಡ್‌ಮಾರ್ನಿಂಗ್‌ 365 ಪುಸ್ತಕವನ್ನು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಬಿಡುಗಡೆ ಮಾಡಿದರು.ಸಂಸ್ಕೃತಿ ಚಿಂತಕ ರಂಜಾನ ದರ್ಗಾ ಮಾತನಾಡಿ, ನ್ಯಾಯಾಂಗ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿದ ನ್ಯಾ| ಶಿವರಾಜ ಪಾಟೀಲ ಅವರು ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಸೇವೆಗೆ ಮುಂದಾಗಿರುವುದು ಉತ್ತಮ ಕಾರ್ಯ ಎಂದರು. 

ಅಧ್ಯಕ್ಷತೆ ವಹಿಸಿದ್ದ ಜಸ್ಟಿಸ್‌ ಶಿವರಾಜ ಪಾಟೀಲ ಮಾತನಾಡಿ, ಈ ಪ್ರತಿಷ್ಠಾನ ಎಲ್ಲ ಸಂಘ ಸಂಸ್ಥೆಯಂತಾಗಬಾರದು. ನಿಮ್ಮ
ಸೇವೆ ಮಾತಿನಲ್ಲಿ ಅಲ್ಲದೇ ಕೃತಿಯಲ್ಲಿ ತೋರಿಸಬೇಕು. 

ಹಸಿದವರಿಗೆ ಅನ್ನ, ಬಡವರಿಗೆ ಬಟ್ಟೆ, ಆಪತ್ತಿನಲ್ಲಿರುವವರಿಗೆ ರಕ್ತ ನೀಡುವಂಥ ಕೆಲಸವಾಗಬೇಕು. ನೇತ್ರದಾನದ ಬಗ್ಗೆ
ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ಪ್ರತಿಷ್ಠಾನದ ಅಧ್ಯಕ್ಷ ನಿವೃತ್ತ ಜಿಲ್ಲಾ ನ್ಯಾಯಾಧೀಶ ಶೇಖರಗೌಡ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ದೂರದರ್ಶನ ನಿರ್ದೇಶಕ ಮಹೇಶ ಜೋಶಿ, ಅನ್ನಪೂರ್ಣ ಶಿವರಾಜ ಪಾಟೀಲ, ಸರ್ವಜ್ಞ ಹಾಗೂ ಜಸ್ಟಿಸ್‌ ಶಿವರಾಜ ಪಾಟೀಲ ಕಾಲೇಜಿನ ಸಂಸ್ಥಾಪಕ ಪ್ರೊ| ಚನ್ನಾರೆಡ್ಡಿ ಪಾಟೀಲ ಸೇರಿ ಇತರರು ಉಪಸ್ಥಿತರಿದ್ದರು.

ನ್ಯಾ| ಶಿವರಾಜ ಪಾಟೀಲರು ರಚಿಸಿದ “ಗುಡ್‌ ಮಾರ್ನಿಂಗ್‌ 365′ ಕೃತಿಯು ನಿತ್ಯ ಜ್ಞಾನ ಕಿರಣ ಸೂಸುವ ಶಕ್ತಿ ಹೊಂದಿದೆ. ಲೇಖಕರು ತಮ್ಮ ಅನುಭವಗಳನ್ನು ಧಾರೆ ಎರೆದು ಜೀವನದ ಸವಿ ಸೌರಭ ತಿಳಿಸಿದ್ದಾರೆ. ನಿತ್ಯ ಒಂದು ನುಡಿಮುತ್ತಿನ ರೂಪದಲ್ಲಿ ವರ್ಷ ಪೂರ್ತಿ ಜ್ಞಾನ ನೀಡುವ ಪುಸ್ತಕ ಇದಾಗಿದ್ದು, ಇಂಥ ಪುಸ್ತಕಗಳನ್ನು ಗ್ರಂಥಾಲಯದಲ್ಲಿ ಇಡುವ ಬದಲು ಮಲಗುವ ಕೊಠಡಿಯಲ್ಲಿಟ್ಟುಕೊಳ್ಳಬೇಕು. 
 ಶ್ರೀ ಸಿದ್ಧೇಶ್ವರ ಸ್ವಾಮೀಜಿ, ವಿಜಯಪುರ ಜ್ಞಾನ ಯೋಗಾಶ್ರಮ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.