ಜೆಡಿಎಸ್‌ ಗೆಲುವಿಗೆ ಬಿರುಸಿನ ಪ್ರಚಾರ


Team Udayavani, Aug 25, 2018, 1:16 PM IST

ray-1.jpg

ಸಿಂಧನೂರು: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಬಿರುಸಿನ ಪ್ರಚಾರ ಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನೆ-ಮೀನುಗಾರಿಕೆ ಖಾತೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು. 

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಿರಿಯ ಮುಖಂಡರ ನೇತೃತ್ವದಲ್ಲಿ ತಂಡ ರಚಿಸಿ ಪ್ರಚಾರದ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಸಿಂಧನೂರಿಗೆ ದೊಡ್ಡ ಸುವರ್ಣ ಅವಕಾಶವಿದೆ. ನಗರದ ಜನರು ಕಾಂಗ್ರೆಸ್‌ ಪಕ್ಷದ ಮುಖಂಡರ ಬಣ್ಣದ ಮಾತಿಗೆ ಮರುಳಾಗದೆ ಜೆಡಿಎಸ್‌ ಅಭ್ಯರ್ಥಿಗಳಿಗೆ ಮತ ನೀಡಿ ನಿಮ್ಮ ಕನಸು ನನಸು ಮಾಡಿಕೊಳ್ಳಿ. ಪ್ರಣಾಳಿಕೆಯಲ್ಲಿ ಹೇಳಿದಂತೆ ರಸ್ತೆ, ಕುಡಿಯುವ ನೀರು, ಚರಂಡಿ ಬಡಜನರಿಗೆ ನಿವೇಶನ ಮತ್ತು ಮನೆ ಕಲ್ಪಿಸಿಕೊಡಲಾಗುವುದು. ಜೆಡಿಎಸ್‌ಗೆ ಮತ ನೀಡಿ ನಗರಸಭೆ ಆಡಳಿತ ನೀಡಿದರೆ ನಗರದ ಜನರ ಕನಸ ನನಸು-ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದರೆ ಬರಿ ಗೊಂದಲದಲ್ಲಿರಬೇಕಾಗುತ್ತದೆ ಎಂದರು. ವಿಧಾನಸಭೆ ಚುನಾವಣೆಯಲ್ಲಿ ತಾಲೂಕು-ನಗರದ ಜನರು ನನಗೆ ಮತ ನೀಡಿದ್ದರಿಂದ ನಾನು ಸಚಿವನಾಗುವ ಅವಕಾಶ ದೊರೆತ್ತಿದ್ದು, ನಗರಸಭೆಯಲ್ಲೂ ಜೆಡಿಎಸ್‌ಗೆ ಅಧಿ ಕಾರಕ್ಕೆ ಬಂದರೆ ಅಭಿವೃದ್ಧಿ ಕೆಲಸಗಳಾಗುತ್ತವೆ. ಜೆಡಿಎಸ್‌ಗೆ ಮತ ನೀಡುವಂತೆ ನಗರದ ಜನರಿಗೆ ಮನವಿ ಮಾಡಿದರು.

ನಗರದ ಸುಕಾಲಪೇಟೆಯಲ್ಲಿ ಬಡವರಿಗಾಗಿ ಖರೀದಿಸಿದ ನಿವೇಶನದ ಭೂಮಿ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ ನೀಡಿದ್ದಾರೆ. ಚುನಾವಣೆ ನಂತರ ಭೂಮಿ ಖರೀದಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ವಾರ್ಡ್‌ 27-28ರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದು, ಸಂಬಂಧಿಕರು ಎಂಬ ಕಾರಣಕ್ಕೆ ಇಬ್ಬರು ಅಭ್ಯರ್ಥಿಗಳಿಗೆ ನಾಮಪತ್ರ ವಾಪಾಸ್‌ ಪಡೆಯುವಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು ಒತ್ತಡ ಹಾಕಿದರು. ಇದರಿಂದ ನಾಮಪತ್ರ ವಾಪಸ್‌ ಪಡೆದಿದ್ದರಿಂದ ವಾರ್ಡ್‌ ನಂ. 27-28ರಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದರು. 

ಕೆಲವು ತಾಂತ್ರಿಕ ಕಾರಣಗಳಿಂದ ನೀರಾವರಿ ಇಲಾಖೆ ಗ್ಯಾಂಗ್‌ಮ್ಯಾನ್‌ ಗಳ ಬೇಡಿಕೆ ಈಡೇರಿಸಲು ಸಮಸ್ಯೆ
ಉಂಟಾಗಿದೆ. ಮುಂದಿನ ದಿನಮಾನದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್‌ ನಗರ ಘಟಕದ ಅಧ್ಯಕ್ಷರನ್ನಾಗಿ ಎಂ.ಡಿ. ನದೀಮುಲ್ಲಾ ಅವರು ಆಯ್ಕೆ ಮಾಡಿದರು.

ಜೆಡಿಎಸ್‌ ಮುಖಂಡರಾದ ಲಿಂಗಪ್ಪ ದಢೇಸಗೂರು, ಅಶೋಕಗೌಡ ಗದ್ರಟಗಿ, ಜಿಲಾನಿ ಪಾಷಾ, ಬಸವರಾಜ ನಾಡಗೌಡ, ಹಾಜಿ ಮಸ್ತಾನ್‌, ಶರಣಬಸವ ಗೊರೇಬಾಳ, ಪ್ರಿಯಾಂಕ ನಾಯಕ, ವೀರೇಶ ಶರಬಯ್ಯ, ಮೈಹಿಬೂಬ್‌, ರಸೂಲ್‌ಸಾಬ, ಸಾಯಿರಾಮಕೃಷ್ಣ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.