ಜೆಡಿಎಸ್‌ ಗೆಲುವಿಗೆ ಬಿರುಸಿನ ಪ್ರಚಾರ


Team Udayavani, Aug 25, 2018, 1:16 PM IST

ray-1.jpg

ಸಿಂಧನೂರು: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಬಿರುಸಿನ ಪ್ರಚಾರ ಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನೆ-ಮೀನುಗಾರಿಕೆ ಖಾತೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು. 

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಿರಿಯ ಮುಖಂಡರ ನೇತೃತ್ವದಲ್ಲಿ ತಂಡ ರಚಿಸಿ ಪ್ರಚಾರದ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿಸಿದರು.

ಸಿಂಧನೂರಿಗೆ ದೊಡ್ಡ ಸುವರ್ಣ ಅವಕಾಶವಿದೆ. ನಗರದ ಜನರು ಕಾಂಗ್ರೆಸ್‌ ಪಕ್ಷದ ಮುಖಂಡರ ಬಣ್ಣದ ಮಾತಿಗೆ ಮರುಳಾಗದೆ ಜೆಡಿಎಸ್‌ ಅಭ್ಯರ್ಥಿಗಳಿಗೆ ಮತ ನೀಡಿ ನಿಮ್ಮ ಕನಸು ನನಸು ಮಾಡಿಕೊಳ್ಳಿ. ಪ್ರಣಾಳಿಕೆಯಲ್ಲಿ ಹೇಳಿದಂತೆ ರಸ್ತೆ, ಕುಡಿಯುವ ನೀರು, ಚರಂಡಿ ಬಡಜನರಿಗೆ ನಿವೇಶನ ಮತ್ತು ಮನೆ ಕಲ್ಪಿಸಿಕೊಡಲಾಗುವುದು. ಜೆಡಿಎಸ್‌ಗೆ ಮತ ನೀಡಿ ನಗರಸಭೆ ಆಡಳಿತ ನೀಡಿದರೆ ನಗರದ ಜನರ ಕನಸ ನನಸು-ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿದರೆ ಬರಿ ಗೊಂದಲದಲ್ಲಿರಬೇಕಾಗುತ್ತದೆ ಎಂದರು. ವಿಧಾನಸಭೆ ಚುನಾವಣೆಯಲ್ಲಿ ತಾಲೂಕು-ನಗರದ ಜನರು ನನಗೆ ಮತ ನೀಡಿದ್ದರಿಂದ ನಾನು ಸಚಿವನಾಗುವ ಅವಕಾಶ ದೊರೆತ್ತಿದ್ದು, ನಗರಸಭೆಯಲ್ಲೂ ಜೆಡಿಎಸ್‌ಗೆ ಅಧಿ ಕಾರಕ್ಕೆ ಬಂದರೆ ಅಭಿವೃದ್ಧಿ ಕೆಲಸಗಳಾಗುತ್ತವೆ. ಜೆಡಿಎಸ್‌ಗೆ ಮತ ನೀಡುವಂತೆ ನಗರದ ಜನರಿಗೆ ಮನವಿ ಮಾಡಿದರು.

ನಗರದ ಸುಕಾಲಪೇಟೆಯಲ್ಲಿ ಬಡವರಿಗಾಗಿ ಖರೀದಿಸಿದ ನಿವೇಶನದ ಭೂಮಿ ಖರೀದಿಯಲ್ಲಿ ಅವ್ಯವಹಾರ ನಡೆದಿಲ್ಲ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ ನೀಡಿದ್ದಾರೆ. ಚುನಾವಣೆ ನಂತರ ಭೂಮಿ ಖರೀದಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ವಾರ್ಡ್‌ 27-28ರಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸಿದ್ದು, ಸಂಬಂಧಿಕರು ಎಂಬ ಕಾರಣಕ್ಕೆ ಇಬ್ಬರು ಅಭ್ಯರ್ಥಿಗಳಿಗೆ ನಾಮಪತ್ರ ವಾಪಾಸ್‌ ಪಡೆಯುವಂತೆ ಕಾಂಗ್ರೆಸ್‌ ಪಕ್ಷದ ಮುಖಂಡರು ಒತ್ತಡ ಹಾಕಿದರು. ಇದರಿಂದ ನಾಮಪತ್ರ ವಾಪಸ್‌ ಪಡೆದಿದ್ದರಿಂದ ವಾರ್ಡ್‌ ನಂ. 27-28ರಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ ಎಂದರು. 

ಕೆಲವು ತಾಂತ್ರಿಕ ಕಾರಣಗಳಿಂದ ನೀರಾವರಿ ಇಲಾಖೆ ಗ್ಯಾಂಗ್‌ಮ್ಯಾನ್‌ ಗಳ ಬೇಡಿಕೆ ಈಡೇರಿಸಲು ಸಮಸ್ಯೆ
ಉಂಟಾಗಿದೆ. ಮುಂದಿನ ದಿನಮಾನದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್‌ ನಗರ ಘಟಕದ ಅಧ್ಯಕ್ಷರನ್ನಾಗಿ ಎಂ.ಡಿ. ನದೀಮುಲ್ಲಾ ಅವರು ಆಯ್ಕೆ ಮಾಡಿದರು.

ಜೆಡಿಎಸ್‌ ಮುಖಂಡರಾದ ಲಿಂಗಪ್ಪ ದಢೇಸಗೂರು, ಅಶೋಕಗೌಡ ಗದ್ರಟಗಿ, ಜಿಲಾನಿ ಪಾಷಾ, ಬಸವರಾಜ ನಾಡಗೌಡ, ಹಾಜಿ ಮಸ್ತಾನ್‌, ಶರಣಬಸವ ಗೊರೇಬಾಳ, ಪ್ರಿಯಾಂಕ ನಾಯಕ, ವೀರೇಶ ಶರಬಯ್ಯ, ಮೈಹಿಬೂಬ್‌, ರಸೂಲ್‌ಸಾಬ, ಸಾಯಿರಾಮಕೃಷ್ಣ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.