ಶೋಷಿತರ ಪ್ರಗತಿಗೆ ಶ್ರಮಿಸಿದ ಸಂತೆ
Team Udayavani, Aug 28, 2018, 4:38 PM IST
ರಾಯಚೂರು: ತಳ ಸಮುದಾಯಗಳು ಮುಂದೆ ಬರಬೇಕಾದರೆ ಶಿಕ್ಷಣ ಪಡೆದು ವಿದ್ಯಾವಂತರಾಗಬೇಕು, ಸಂಘಟನೆಯಿಂದ ಬಲವಂತರಾಗಬೇಕು ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಕರೆ ನೀಡಿದ್ದರು ಎಂದು ಸಿಂಧನೂರಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಎಸ್.ಶಿವರಾಜ ಹೇಳಿದರು.
ನಗರದ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಸಹಯೋಗದಲ್ಲಿ ಸೋಮವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವದಲ್ಲಿ ಅವರು ಉಪನ್ಯಾಸ
ನೀಡಿದರು.
1854ರಲ್ಲಿ ಕೇರಳದಲ್ಲಿ ಜನಿಸಿದ ಅವರು, ಅಂದು ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿ ವಿರುದ್ಧ ಹೋರಾಡಿದ್ದರು. ತಳ ಸಮುದಾಯಗಳ ಜಾಗೃತಿಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು. ಸಮಾಜದಲ್ಲಿ ಜಾತಿ ಪದ್ಧತಿ
ನಿರ್ಮೂಲನೆಗಾಗಿ ಪಣ ತೊಟ್ಟಿದ್ದರು. ಕೇರಳದಲ್ಲಿ ಅಂದಿನ ಅರಸರು ತಳ ಸಮುದಾಯಗಳ ಮೇಲೆ 300 ರೀತಿಯ ತೆರಿಗೆ ವಿಧಿಸಿದ್ದನ್ನು ತೀವ್ರವಾಗಿ ಖಂಡಿಸಿದ್ದರು ಎಂದರು.
ಸಮಾಜದಲ್ಲಿ ಮೇಲು-ಕೀಳೆಂಬ ಭಾವನೆ ಸರಿಯಲ್ಲ. ಎಲ್ಲರೂ ಒಂದೇ ಜಾತಿ, ಮತ ಪಂಥದವರೆಂಬ ಭಾವನೆಯಿಂದ ಬಾಳಬೇಕು ಎಂದು ಜಾಗೃತಿ ಮೂಡಿಸುತ್ತಿದ್ದರು. ತಂದೆಯವರಿಂದ ಸಂಸ್ಕೃತ ವೇದಾಧ್ಯಯನ ನಡೆಸಿದ್ದ ಅವರು
ಶಿಕ್ಷಣದ ಮಹತ್ವವನ್ನು ಸಾರಿದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಕಾರ್ಯಕ್ರಮ ಉದ್ಘಾಟಿಸಿದರು. ಪ್ರತಿಭಾ
ಗೋನಾಳ, ದಂಡಪ್ಪ ಬಿರಾದಾರ, ಸಮಾಜದ ಮುಖಂಡರಾದ ರಾಘವೇಂದ್ರಗೌಡ, ಭೀಮಣ್ಣಗೌಡ ಸೇರಿ ಅನೇಕರು ಉಪಸ್ಥಿತರಿದ್ದರು. ಅದಕ್ಕೂ ಮುಂಚೆ ನಗರದ ಕರ್ನಾಟಕ ಸಂಘದಲ್ಲಿ ಬ್ರಹ್ಮಶ್ರೀ ಗುರುಗಳ ಭಾವಚಿತ್ರ ಮೆರವಣಿಗೆಗೆ ತಹಶೀಲ್ದಾರ್ ಶಿವಾನಂದ ಸಾಗರ ಚಾಲನೆ ನೀಡಿದರು.
ಅಲ್ಲಿಂದ ಶೆಟ್ಟಿಬಾವಿ ವೃತ್ತ, ತೀನ್ ಕಂದಿಲ್, ಮಹಿಳಾ ಸಮಾಜ, ನಗರಸಭೆ, ಅಂಬೇಡ್ಕರ್ ವೃತ್ತ ಮಾರ್ಗವಾಗಿ
ರಂಗಮಂದಿರದವರೆಗೆ ಮೆರವಣಿಗೆ ನಡೆಸಲಾಯಿತು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿಯನ್ನು
ಸರಳವಾಗಿ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ