ವಾರ್ಡನ್‌-ಪ್ರಾಂಶುಪಾಲರಿಗೆ ತರಾಟೆ


Team Udayavani, Sep 7, 2018, 2:49 PM IST

ray-1.jpg

ಸಿಂಧನೂರು: ನಗರದಲ್ಲಿ ನಡೆಯುತ್ತಿರುವ ವಿವಿಧ ಇಲಾಖೆಗಳ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬುಧವಾರ ರಾತ್ರಿ ನ್ಯಾಯಾಧೀಶರು ದಿಢೀರ್‌ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ವಾರ್ಡನ್‌ ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಸರ್ಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿವರ್ಷ ಸಾಕಷ್ಟು ಅನುದಾನ ಬಂದರೂ ಸಹ ವಿದ್ಯಾರ್ಥಿಗಳಿಗೆ ಸರಿಯಾಗಿ ಸೌಲಭ್ಯ ತಲುಪುತ್ತಿಲ್ಲ. ಈ ಕುರಿತು ವಸತಿ ನಿಲಯಗಳ ಸ್ಥಿತಿ-ಗತಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ವರದಿ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದ್ದರಿಂದ ಬುಧವಾರ ರಾತ್ರಿ ತಾಲೂಕು ನ್ಯಾಯಾಧೀಶರ ತಂಡ ವಸತಿ
ನಿಲಯಗಳಿಗೆ ದಿಢೀರ್‌ ಭೇಟಿ ನೀಡಿತ್ತು.

ನ್ಯಾಯಾಧೀಶರಾದ ರವಿಕುಮಾರ ಕೆ, ಮಹಾಂತೇಶ ಭೂಸಗೋಳ ನೇತೃತ್ವದಲ್ಲಿ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ತಂಡ ಅಲ್ಲಿನ ಅವ್ಯವಸ್ಥೆ ವೀಕ್ಷಿಸಿ ವಿದ್ಯಾರ್ಥಿಗಳ ಅಳಲನ್ನು ಆಲಿಸಿತು. ಅವ್ಯವಸ್ಥೆಗೆ
ತೀವ್ರ ಅಸಮಾಧಾನಗೊಂಡು ಮೇಲ್ವಿಚಾರಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಮಕ್ಕಳಿಗೆ ಸರಿಯಾಗಿ ಸೌಲಭ್ಯ ಒದಗಿಸುವಂತೆ ಎಚ್ಚರಿಸಿದರು.

ಹಿಂದುಳಿದ ವರ್ಗಗಳ ಹಾಗೂ ಅಂಬೇಡ್ಕರ್‌ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರ ವಸತಿ ನಿಲಯಗಳಿಗೆ ಭೇಟಿ ನೀಡಿದ ನ್ಯಾಯಾಧೀಸರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ
ನೀಡಿದರು. 

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅರ್ಧ ಗಂಟೆಯಾದರೂ ಸಹ ವಾರ್ಡನ್‌ ಹಾಗೂ ಪ್ರಾಂಶುಪಾಲರು ಸ್ಥಳಕ್ಕೆ ಬಾರದ್ದರಿಂದ ಅಸಮಾಧಾನಗೊಂಡ ನ್ಯಾಯಾಧೀಶರು ತಡವಾಗಿ ಬಂದ ಪ್ರಾಂಶುಪಾಲ ಸಂಗಮೇಶ ಕೊಳ್ಳಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಮಕ್ಕಳಿಗೆ ಏನೇನ್‌ ಕೊಡುತ್ತಿಯಾ ಹೇಳಿ ಎಂದಾಗ ವಿವರವಾಗಿ ಹೇಳದೇ ಎಲ್ಲ ಕೊಡುವುದಾಗಿ ಹೇಳಿ ಉದ್ಧಟತನ ಪ್ರದರ್ಶಿಸಿದರು. ಸರಿಯಾಗಿ ಹೇಳದಿದ್ದರೆ ನಿನ್ನನ್ನು ಮನೆಗೆ ಕಳುಹಿಸುವುದಾಗಿ ನ್ಯಾಯಾಧೀಸರು ಎಚ್ಚರಿಸಿದರು.
 
ವಸತಿ ನಿಲಯಕ್ಕೆ 3 ಲಕ್ಷ ರೂ. ಖರ್ಚು ಮಾಡುತ್ತಿದ್ದು 24 ಕಾಯಿಪಲ್ಯ ವಿವರ ತೊರಿಸಿದ್ದು, ಅಡುಗೆ ಕೋಣೆಯಲ್ಲಿ ಯಾವುದೇ ಕಾಯಿಪಲ್ಯಗಳಿಲ್ಲ. ನೀರಿನಂತಹ ಸಾರು ಹಾಗೂ ಹಸಿ-ಬಿಸಿ ಅನ್ನ ನೀಡುತ್ತಿರಿ ಎಂದು ವಿದ್ಯಾರ್ಥಿಗಳ ದೂರು ಇದೆ ಎಂದಾಗ ಮುಂದಿನ ದಿನಗಳಲ್ಲಿ ಎಲ್ಲ ಸರಿಪಡಿಸಿಕೊಂಡು ಹೋಗುವುದಾಗಿ ಹೇಳಿದರು.

ಊಟ, ಬಟ್ಟೆ, ಸೋಪು ಬಾಕ್ಸ್‌ ಬಿಟ್ಟರೆ ಐದು ವರ್ಷಗಳಿಂದ ಯಾವುದೇ ರೀತಿಯ ಸೌಲತ್ತುಗಳನ್ನು ಕೊಟ್ಟಿಲ್ಲ ಯಾಕೆ ಎಂದಾಗ ಮುಂದಿನ ದಿನಗಳಲ್ಲಿ ಕೊಡುವುದಾಗಿ ಅಸಂಬದ್ಧವಾಗಿ ಮಾತನಾಡಿದ ಪ್ರಾಂಶುಪಾಲ ಸಂಗಮೇಶ ಕೊಳ್ಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಇತರರ ಮುಂದೆ ಹೇಳಿದಂತೆ ನಮ್ಮ ಮುಂದೆ ಸುಳ್ಳು ಹೇಳಿದರೆ ನಿನ್ನ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಸರ್ಕಾರಕ್ಕೆ ವರದಿ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರದ ಸಂಬಳ ತಿಂದು ಸರಿಯಾಗಿ ಕೆಲಸ ಮಾಡಲು ಆಗುವುದಿಲ್ಲವೇ, ಇನ್ನೂ ಮುಂದೆ ಈ ರೀತಿಯಾಗದಂತೆ ಮಕ್ಕಳಿಗೆ ಸರ್ಕಾರದ ಸೌಲತ್ತುಗಳನ್ನು ಕೊಡಿ ಎಂದು ಎಚ್ಚರಿಕೆ ನೀಡಿದರು.

ವಸತಿ ನಿಲಯಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸೊಳ್ಳೆ ಪರದೆ, ಶುದ್ದ ಕುಡಿಯುವ ನೀರು-ಗುಣಮಟ್ಟದ ಆಹಾರ ಸೇರಿದಂತೆ ಎಲ್ಲ ಸವಲತ್ತುಗಳನ್ನು ಒದಗಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ಮೇಲೆ ಸೂಕ್ತ ಕ್ರಮ
ಜರುಗಿಸುವುದಾಗಿ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಪ್ರಾಂಶುಪಾಲರಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ದೂರು: ಬಾಲಕರ ಮೆಟ್ರಿಕ್‌ ಪೂರ್ವ-ನಂತರ ಅಂಬೇಡ್ಕರ್‌ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ವಿದ್ಯಾರ್ಥಿಗಳು ಸರ್ಕಾರದ ಸೌಲತ್ತುಗಳನ್ನು ಕೊಡುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಯಮ್ಮ ಅವರಿಗೆ ಕೋರಿದರೂ ನೀವು ಹಾಸ್ಟೆಲ್‌ನಲ್ಲಿ ಸತ್ತರೂ ಪರವಾಗಿಲ್ಲ ವಸತಿ ನಿಲಯಕ್ಕೆ ಬರುವುದಿಲ್ಲ. 

ಪದೇಪದೇ ಕಚೇರಿಗೆ ಬಂದರೆ ನಿಮ್ಮ ಮೇಲೆ ದೂರು ದಾಖಲು ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು. ನ್ಯಾಯಾಧೀಶರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಯಮ್ಮ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.