ವಾರ್ಡನ್‌-ಪ್ರಾಂಶುಪಾಲರಿಗೆ ತರಾಟೆ


Team Udayavani, Sep 7, 2018, 2:49 PM IST

ray-1.jpg

ಸಿಂಧನೂರು: ನಗರದಲ್ಲಿ ನಡೆಯುತ್ತಿರುವ ವಿವಿಧ ಇಲಾಖೆಗಳ ವಿದ್ಯಾರ್ಥಿ ವಸತಿ ನಿಲಯಗಳಿಗೆ ಬುಧವಾರ ರಾತ್ರಿ ನ್ಯಾಯಾಧೀಶರು ದಿಢೀರ್‌ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ವಾರ್ಡನ್‌ ಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಸರ್ಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿವರ್ಷ ಸಾಕಷ್ಟು ಅನುದಾನ ಬಂದರೂ ಸಹ ವಿದ್ಯಾರ್ಥಿಗಳಿಗೆ ಸರಿಯಾಗಿ ಸೌಲಭ್ಯ ತಲುಪುತ್ತಿಲ್ಲ. ಈ ಕುರಿತು ವಸತಿ ನಿಲಯಗಳ ಸ್ಥಿತಿ-ಗತಿ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ವರದಿ ನೀಡಲು ಹೈಕೋರ್ಟ್‌ ನಿರ್ದೇಶನ ನೀಡಿದ್ದರಿಂದ ಬುಧವಾರ ರಾತ್ರಿ ತಾಲೂಕು ನ್ಯಾಯಾಧೀಶರ ತಂಡ ವಸತಿ
ನಿಲಯಗಳಿಗೆ ದಿಢೀರ್‌ ಭೇಟಿ ನೀಡಿತ್ತು.

ನ್ಯಾಯಾಧೀಶರಾದ ರವಿಕುಮಾರ ಕೆ, ಮಹಾಂತೇಶ ಭೂಸಗೋಳ ನೇತೃತ್ವದಲ್ಲಿ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ತಂಡ ಅಲ್ಲಿನ ಅವ್ಯವಸ್ಥೆ ವೀಕ್ಷಿಸಿ ವಿದ್ಯಾರ್ಥಿಗಳ ಅಳಲನ್ನು ಆಲಿಸಿತು. ಅವ್ಯವಸ್ಥೆಗೆ
ತೀವ್ರ ಅಸಮಾಧಾನಗೊಂಡು ಮೇಲ್ವಿಚಾರಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಮಕ್ಕಳಿಗೆ ಸರಿಯಾಗಿ ಸೌಲಭ್ಯ ಒದಗಿಸುವಂತೆ ಎಚ್ಚರಿಸಿದರು.

ಹಿಂದುಳಿದ ವರ್ಗಗಳ ಹಾಗೂ ಅಂಬೇಡ್ಕರ್‌ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರ ವಸತಿ ನಿಲಯಗಳಿಗೆ ಭೇಟಿ ನೀಡಿದ ನ್ಯಾಯಾಧೀಸರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವುದಾಗಿ ಭರವಸೆ
ನೀಡಿದರು. 

ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ಅರ್ಧ ಗಂಟೆಯಾದರೂ ಸಹ ವಾರ್ಡನ್‌ ಹಾಗೂ ಪ್ರಾಂಶುಪಾಲರು ಸ್ಥಳಕ್ಕೆ ಬಾರದ್ದರಿಂದ ಅಸಮಾಧಾನಗೊಂಡ ನ್ಯಾಯಾಧೀಶರು ತಡವಾಗಿ ಬಂದ ಪ್ರಾಂಶುಪಾಲ ಸಂಗಮೇಶ ಕೊಳ್ಳಿ ಅವರನ್ನು ತರಾಟೆಗೆ ತೆಗೆದುಕೊಂಡರು.

ಮಕ್ಕಳಿಗೆ ಏನೇನ್‌ ಕೊಡುತ್ತಿಯಾ ಹೇಳಿ ಎಂದಾಗ ವಿವರವಾಗಿ ಹೇಳದೇ ಎಲ್ಲ ಕೊಡುವುದಾಗಿ ಹೇಳಿ ಉದ್ಧಟತನ ಪ್ರದರ್ಶಿಸಿದರು. ಸರಿಯಾಗಿ ಹೇಳದಿದ್ದರೆ ನಿನ್ನನ್ನು ಮನೆಗೆ ಕಳುಹಿಸುವುದಾಗಿ ನ್ಯಾಯಾಧೀಸರು ಎಚ್ಚರಿಸಿದರು.
 
ವಸತಿ ನಿಲಯಕ್ಕೆ 3 ಲಕ್ಷ ರೂ. ಖರ್ಚು ಮಾಡುತ್ತಿದ್ದು 24 ಕಾಯಿಪಲ್ಯ ವಿವರ ತೊರಿಸಿದ್ದು, ಅಡುಗೆ ಕೋಣೆಯಲ್ಲಿ ಯಾವುದೇ ಕಾಯಿಪಲ್ಯಗಳಿಲ್ಲ. ನೀರಿನಂತಹ ಸಾರು ಹಾಗೂ ಹಸಿ-ಬಿಸಿ ಅನ್ನ ನೀಡುತ್ತಿರಿ ಎಂದು ವಿದ್ಯಾರ್ಥಿಗಳ ದೂರು ಇದೆ ಎಂದಾಗ ಮುಂದಿನ ದಿನಗಳಲ್ಲಿ ಎಲ್ಲ ಸರಿಪಡಿಸಿಕೊಂಡು ಹೋಗುವುದಾಗಿ ಹೇಳಿದರು.

ಊಟ, ಬಟ್ಟೆ, ಸೋಪು ಬಾಕ್ಸ್‌ ಬಿಟ್ಟರೆ ಐದು ವರ್ಷಗಳಿಂದ ಯಾವುದೇ ರೀತಿಯ ಸೌಲತ್ತುಗಳನ್ನು ಕೊಟ್ಟಿಲ್ಲ ಯಾಕೆ ಎಂದಾಗ ಮುಂದಿನ ದಿನಗಳಲ್ಲಿ ಕೊಡುವುದಾಗಿ ಅಸಂಬದ್ಧವಾಗಿ ಮಾತನಾಡಿದ ಪ್ರಾಂಶುಪಾಲ ಸಂಗಮೇಶ ಕೊಳ್ಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ಇತರರ ಮುಂದೆ ಹೇಳಿದಂತೆ ನಮ್ಮ ಮುಂದೆ ಸುಳ್ಳು ಹೇಳಿದರೆ ನಿನ್ನ ಮೇಲೆ ಸೂಕ್ತ ಕ್ರಮ ತೆಗೆದುಕೊಂಡು ಸರ್ಕಾರಕ್ಕೆ ವರದಿ ಕಳುಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸರ್ಕಾರದ ಸಂಬಳ ತಿಂದು ಸರಿಯಾಗಿ ಕೆಲಸ ಮಾಡಲು ಆಗುವುದಿಲ್ಲವೇ, ಇನ್ನೂ ಮುಂದೆ ಈ ರೀತಿಯಾಗದಂತೆ ಮಕ್ಕಳಿಗೆ ಸರ್ಕಾರದ ಸೌಲತ್ತುಗಳನ್ನು ಕೊಡಿ ಎಂದು ಎಚ್ಚರಿಕೆ ನೀಡಿದರು.

ವಸತಿ ನಿಲಯಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಸೊಳ್ಳೆ ಪರದೆ, ಶುದ್ದ ಕುಡಿಯುವ ನೀರು-ಗುಣಮಟ್ಟದ ಆಹಾರ ಸೇರಿದಂತೆ ಎಲ್ಲ ಸವಲತ್ತುಗಳನ್ನು ಒದಗಿಸಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ಮೇಲೆ ಸೂಕ್ತ ಕ್ರಮ
ಜರುಗಿಸುವುದಾಗಿ ವಸತಿ ನಿಲಯಗಳ ವಾರ್ಡನ್‌ಗಳು ಹಾಗೂ ಪ್ರಾಂಶುಪಾಲರಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ದೂರು: ಬಾಲಕರ ಮೆಟ್ರಿಕ್‌ ಪೂರ್ವ-ನಂತರ ಅಂಬೇಡ್ಕರ್‌ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ವಿದ್ಯಾರ್ಥಿಗಳು ಸರ್ಕಾರದ ಸೌಲತ್ತುಗಳನ್ನು ಕೊಡುವಂತೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಯಮ್ಮ ಅವರಿಗೆ ಕೋರಿದರೂ ನೀವು ಹಾಸ್ಟೆಲ್‌ನಲ್ಲಿ ಸತ್ತರೂ ಪರವಾಗಿಲ್ಲ ವಸತಿ ನಿಲಯಕ್ಕೆ ಬರುವುದಿಲ್ಲ. 

ಪದೇಪದೇ ಕಚೇರಿಗೆ ಬಂದರೆ ನಿಮ್ಮ ಮೇಲೆ ದೂರು ದಾಖಲು ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು. ನ್ಯಾಯಾಧೀಶರು ತಾಲೂಕು ಸಮಾಜ ಕಲ್ಯಾಣಾಧಿಕಾರಿ ಜಯಮ್ಮ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರೆ

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.