ಅಭಿವೃದ್ಧಿಗೆ ಶಾಂತ ಚಳವಳಿಯೇ ಸಾಧನ


Team Udayavani, Sep 9, 2018, 4:49 PM IST

ray-1.jpg

ರಾಯಚೂರು: ಅಭಿವೃದ್ಧಿ ಸಾಧಿಸಬೇಕಾದರೆ ಸರ್ಕಾರದೊಡನೆ ಸಂಘರ್ಷಕ್ಕಿಳಿಯುವ ಅಗತ್ಯವಿಲ್ಲ. ಶಾಂತ ಚಳವಳಿ ಮೂಲಕ ನಡೆಸುವ ಹೋರಾಟಗಳು ಪ್ರಗತಿಯ ಸಾಧನವಾಗಬಹುದು ಎಂದು ಹಿರಿಯ ಚಿಂತಕ ಪ್ರಸನ್ನ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ನಿಂದ “ಉತ್ತರ ಕರ್ನಾಟಕದ ಅಭಿವೃದ್ಧಿ ಹೇಗಿರಬೇಕು’ ಎಂಬ ವಿಚಾರ ಕುರಿತು ಶುಕ್ರವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಕ್ರಿಟ್‌ ಕಟ್ಟಡ, ರಸ್ತೆಗಳಿಂದಲೇ ಅಭಿವೃದ್ಧಿ ಎಂಬ ಕಲ್ಪನೆಗೆ ಬಿದ್ದು ಅಭಿವೃದ್ಧಿ ದೃಷ್ಟಿಕೋನ ಸಂಕುಚಿತಗೊಳ್ಳುತ್ತಿದೆ. ಗುಡಿ ಕೈಗಾರಿಕೆ, ಕುಲಕಸುಬುಗಳೇ ಇಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಬೇಕು. ಪ್ರಗತಿಗೂ, ಜನರ ಭಾವನೆಗಳಿಗೂ
ಸಂಬಂಧ ಇಲ್ಲದಿದ್ದರೆ ಅದು ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ. ಇಂದು ಕಾಂಕ್ರಿಟ್‌ ಕಟ್ಟಡಗಳು, ಫ್ಲೆ ಓವರ್‌ಗಳ ನಿರ್ಮಾಣವೇ ಅಭಿವೃದ್ಧಿ ಎನಿಸಿಕೊಳ್ಳುತ್ತಿರುವುದು ವಿಪರ್ಯಾಸ ಎಂದರು.

ಕೆಲ ವರ್ಗದವರು ತಾಂತ್ರಿಕ, ಯಾಂತ್ರಿಕ ಅಭಿವೃದ್ಧಿಯನ್ನೇ ದೊಡ್ಡದಾಗಿ ಬಿಂಬಿಸುತ್ತಿವೆ. ಎಲ್ಲರೂ ಅವರೊಟ್ಟಿಗೆ ಬರಲಿ
ಎಂದು ಹಂಬಲಿಸುತ್ತಿದ್ದಾರೆ. ಆದರೆ, ಅದನ್ನೇ ಯಾಕೆ ಅಭಿವೃದ್ಧಿ ಎಂದುಕೊಳ್ಳುತ್ತಿರಿ. ನಿಮ್ಮ ಹಳ್ಳಿ, ಗ್ರಾಮಗಳಲ್ಲಿನ ವೃತ್ತಿಗಳನ್ನೇ ಯಾಕೆ ವಿಸ್ತರಿಸುತ್ತಿಲ್ಲ. ಎಲ್ಲರೊಂದಿಗೆ ಓಡುವುದೇ ಸಾಧನೆಯಲ್ಲ. ಯಾರೋ ನಮ್ಮನ್ನು ಕರೆದರೆ ನಾವೇಕೆ ಹೋಗಬೇಕು. ನಮ್ಮ ಸ್ವಂತಿಕೆಯಲ್ಲಿ ಬಾಳಬೇಕು ಎಂದರು.

12ನೇ ಶತಮಾನದಲ್ಲಿ ಬಸವಣ್ಣ ಕಾಯಕ ಪ್ರಜ್ಞೆ ಮೂಡಿಸಿದ್ದರು. ಅವರೊಬ್ಬ ಅಸಾಧಾರಣ ಅಭಿವೃದ್ಧಿಯ ಹರಿಕಾರರು. ಕಾಯಕ ಮತ್ತು ಅಧ್ಯಾತ್ಮದ ಜತೆಗೆ ಸ್ವಾವಲಂಬಿ ಬದುಕು ರೂಪಿಸಿದ್ದರು. ಹೀಗಾಗಿಯೇ ಬಿಜ್ಜಳನ ರಾಜ್ಯ ಸುಭಿಕ್ಷೆಯಾಗಿತ್ತು. ಗಾಂಧೀಜಿ ಕೂಡ ಅದೇ ಸಿದ್ಧಾಂತ ಅನುಸರಿಸಿದ್ದರು. ನಾವು ನಮ್ಮ ಜವಾಬ್ದಾರಿ ಮರೆತು ಕೇವಲ ಸರ್ಕಾರದ ಕಡೆ ನೋಡುತ್ತೇವೆ. ಜನರ ತಲಾದಾಯ ಹೆಚ್ಚಾಗಿದೆ. ಅದರ ಜತೆಗೆ ಬಡವ ಬಲ್ಲಿದರ ನಡುವಿನ ಅಂತರವೂ ಹೆಚ್ಚಾಗಿದೆ. ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಸಾಮಾಜಿಕ, ಸಾಂಸ್ಕೃತಿಕ ಚಳವಳಿ ಆರಂಭಿಸಬೇಕಿದೆ ಎಂದರು.

ಹೈ-ಕ ಹೋರಾಟ ಸಮಿತಿ ಉಪಾಧ್ಯಕ್ಷ ಡಾ| ರಜಾಕ್‌ ಉಸ್ತಾದ್‌ ಮಾತನಾಡಿ, ಎಚ್‌ಕೆಆರ್‌ಡಿಬಿಗೆ ನಾಲ್ಕು ವರ್ಷಗಳಲ್ಲಿ 4,300 ಕೋಟಿ ರೂ. ಅನುದಾನ ಬಂದಿದೆ. ಅದರಲ್ಲಿ 2 ಸಾವಿರ ಕೋಟಿ ರೂ. ರಸ್ತೆ ನಿರ್ಮಾಣಕ್ಕೆ ಖರ್ಚು ಮಾಡಿದರೆ, 300 ಕೋಟಿ ರೂ. ಕುರ್ಚಿಗಳ ಖರೀದಿಗೆ ಬಳಸಲಾಗಿದೆ. ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವವೂ ಮುಖ್ಯ. ನೀವು ಮಾಡಿ ಎಂದು ಸಲಹೆ ನೀಡುವವರೇ ಹೆಚ್ಚಾಗಿದ್ದಾರೆ. ಯುವಕರಿಗೆ ತಮ್ಮ ಶ್ರಮ ಯಾವ ಉದ್ದೇಶಕ್ಕೆ ಬಳಕೆಯಾಗುತ್ತಿದೆ ಎನ್ನುವ ಪ್ರಜ್ಞೆ ಇರಬೇಕು. ಯಾರಿಗೆ ಅನಿವಾರ್ಯತೆ ಸೃಷ್ಟಿಯಾಗುತ್ತದೆಯೋ ಅವರು ಮಾತ್ರ ಹೋರಾಟ, ಚಳವಳಿಗೆ ಬರುತ್ತಾರೆ. ಆದರೆ, ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈ ಜೋಡಿಸಲೇಬೇಕು ಎಂದರು.

ಕಸಾಪ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಪಾಟೀಲ ಬೆಟ್ಟದೂರು, ಕಾಲೇಜಿನ ಪ್ರಾಚಾರ್ಯ ಡಾ| ದಸ್ತಗಿರಸಾಬ್‌ ದಿನ್ನಿ, ಸಾಹಿತಿ ಬಾಬು ಭಂಡಾರಿಗಲ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಸವರಾಜ ನಾಗಡದಿನ್ನಿ ಇತರರಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.