ಗಣಪತಿ ಬಪ್ಪಾ ಮೋರಯಾ…
Team Udayavani, Sep 22, 2018, 5:08 PM IST
ರಾಯಚೂರು: ನಗರ ಸೇರಿ ಜಿಲ್ಲಾದ್ಯಂತ ಪ್ರತಿಷ್ಠಾಪಿಸಲಾದ ಬಹುತೇಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯ ಶುಕ್ರವಾರ (9ನೇ ದಿನ) ಸಂಭ್ರಮದಿಂದ ಜರುಗಿತು. ಜಿಲ್ಲೆಯಲ್ಲಿ ಸುಮಾರು 1760ಕ್ಕೂ ಅಧಿಕ ಗಣೇಶಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಅವುಗಳಲ್ಲಿ ಐದನೇ ದಿನ 500ಕ್ಕೂ ಅಧಿಕ ಗಣೇಶಗಳನ್ನು ವಿಸರ್ಜಿಸಲಾಗಿದೆ. ಉಳಿದಂತೆ 7ನೇ ದಿನ ಕೆಲ ಗಣೇಶ ಮೂರ್ತಿಗಳನ್ನು ವಿಸರ್ಜಿಸಿದರೆ, ಬಹುತೇಕ ಗಣಪತಿಗಳಿಗೆ ಒಂಭತ್ತನೇ ದಿನ ಸಂಭ್ರಮದಿಂದ ವಿದಾಯ ಹೇಳಲಾಯಿತು.
ನಗರವೊಂದರಲ್ಲೇ 160ಕ್ಕೂ ಅಧಿಕ ಗಣೇಶಗಳ ವಿಸರ್ಜನೆ ಮಾಡಲಾಯಿತು. ಇದಕ್ಕಾಗಿ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ವೇದಿಕೆ ಸಿದ್ಧಪಡಿಸಲಾಗಿತ್ತು. ಎಲ್ಲ ಗಣೇಶಗಳು ಅಲ್ಲಿಯೇ ಜಮಾಯಿಸುವುದರಿಂದ ಅಲ್ಲಿ ಸೂಕ್ತ ವ್ಯವಸ್ಥೆ
ಕಲ್ಪಿಸಲಾಗಿತ್ತು.
ಸೂಕ್ತ ಬಂದೋಬಸ್ತ್: ಗಣೇಶ ವಿಸರ್ಜನೆ ಜತೆಗೆ ಮೊಹರಂ ಮೆರವಣಿಗೆಯೂ ಏಕಕಾಲಕ್ಕೆ ನಡೆಯುತ್ತಿದ್ದ ಕಾರಣ ಪೊಲೀಸರು ನಗರದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಅಗತ್ಯವಿರುವ ಕಡೆಯಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೂರು ಕೆಎಸ್ಆರ್ಪಿ ತುಕಡಿಗಳು, 12 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಅಲ್ಲದೇ, ಬೆಳಗಿನ ಜಾವದವರೆಗೂ ಪೆಟ್ರೋಲಿಂಗ್ ಮಾಡುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ನಿಗಾ ವಹಿಸಿರುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಪಾಟೀಲ್ ತಿಳಿಸಿದರು.
ಐದು ಕ್ರೇನ್ಗಳ ಬಳಕೆ: ಗಣೇಶ ವಿಸರ್ಜನೆಗೆ ನಗರ ಮಾವಿನ ಕೆರೆ ಬಳಿಯ ಖಾಸಬಾವಿ ಬಳಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಗಣೇಶಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ನಗರಸಭೆ ಒಟ್ಟು ಐದು ಕ್ರೇನ್ಗಳ ವ್ಯವಸ್ಥೆ ಮಾಡಿದೆ. ಗಣೇಶಗಳ ಮೆರವಣಿಗೆ ಸಾಗುವ ಕಡೆಯೆಲ್ಲ ವಿದ್ಯುತ್ ದೀಪಗಳ ಅಳವಡಿಕೆ ಮಾಡಲಾಗಿದೆ. ಖಾಸ ಬಾವಿ ಬಳಿಯೂ ವಿಶೇಷ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಜತೆಗೆ ಎರಡು ಜನರೇಟ್ರ್ಗಳ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಗಣೇಶ ವಿಸರ್ಜನೆ ಮತ್ತು ಮೊಹರಂ ಮೆರವಣಿಗೆ ಏಕಕಾಲಕ್ಕೆ ನಡೆಯುವ ಕಾರಣ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ನಗರದಲ್ಲಿ 160ಕ್ಕೂ ಅಧಿಕ ಗಣೇಶಗಳ ವಿಸರ್ಜನೆ ನಡೆಯುವ ಸಾಧ್ಯತೆಗಳಿವೆ.
ಎಸ್.ಬಿ. ಪಾಟೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ