ಅರಣ್ಯ ಇಲಾಖೆ ಅಧಿಕಾರಿ ತರಾಟೆಗೆ


Team Udayavani, Sep 28, 2018, 12:29 PM IST

ray-3.jpg

ರಾಯಚೂರು: ಮುಂಗಾರು ಹಂಗಾಮಿನಲ್ಲಿ ನಿರೀಕ್ಷೆಯಷ್ಟು ಗಿಡಗಳನ್ನು ನೆಡುವಲ್ಲಿ ನಿರ್ಲಕ್ಷ್ಯ ವಹಿಸಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ತರಾಟೆಗೆ ತೆಗೆದುಕೊಂಡರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ನಿಮಗೆ ಎಷ್ಟು ಗುರಿ ನೀಡಲಾಗಿತ್ತು, ಎಷ್ಟು ನೆಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಆಗ ಇಲಾಖೆ ಅಧಿಕಾರಿ 4.5 ಲಕ್ಷ ಗುರಿಯಿದ್ದು, 16 ಸಾವಿರ ಸಸಿಗಳನ್ನು ನೆಟ್ಟಿರುವುದಾಗಿ ತಿಳಿಸಿದ್ದರಿಂದ ಬೇಸರ ವ್ಯಕ್ತಪಡಿಸಿದ ಅವರು, ನಿಮ್ಮ ಗುರಿ ಇರುವುದೆಷ್ಟು ಎಷ್ಟು ನೆಟ್ಟಿದ್ದೀರಾ. ಏನು ನಿದ್ರೆ ಮಾಡುತ್ತಿದ್ದಿರಾ ಎಂದು ತರಾಟೆಗೆ ತೆಗೆದುಕೊಂಡರು. 

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಜೊತೆಗೆ ಯೋಜನೆ ರೂಪಿಸಿ ಗಿಡ ನೆಡಲು ಸೂಚಿಸಿದರು. ಸ್ವತ್ಛ ಭಾರತ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಶೌಚಗೃಹಗಳ ಗುಣಮಟ್ಟದ ಸರ್ವೆ ಮಾಡಬೇಕು. ಶೌಚಗೃಹ ಬಳಸುವ ಕುರಿತು ಜಾಗೃತಿ ಮೂಡಿಸಲು ಮಹಿಳಾ ಸಂಘ ಹಾಗೂ ಸ್ತ್ರೀ ಶಕ್ತಿ ಕೇಂದ್ರಗಳ ಹೆಣ್ಣುಮಕ್ಕಳನ್ನು ಬಳಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್‌.ನಾಗರಾಜ ಅವರಿಗೆ ಸೂಚಿಸಿದರು.

ಡಿಡಿಪಿಐ ಬಿ.ಕೆ.ನಂದನೂರು ಮಾತನಾಡಿ, ಜಿಲ್ಲೆಯಲ್ಲಿ ಗಣಿತ, ಇಂಗ್ಲಿಷ್‌ ಮತ್ತು ವಿಜ್ಞಾನ ಶಿಕ್ಷಕರ ಕೊರತೆ ಇದೆ ಎಂದು ವಿವರಿಸಿದರು. ಭೋದಕರ ಕೊರತೆಯಿದ್ದರೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂದು ಸೂಚಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವತ್ಛತೆ ಇಲ್ಲದಿರುವ ಕುರಿತು ದೂರುಗಳಿದ್ದು, ಯುವ ವೈದ್ಯರಿಂದ ಉತ್ತಮ ಕೆಲಸ ಪಡೆಯುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹೊಸ ಯೋಜನೆಯಡಿ ಟೂರಿಸ್ಟ್‌ ಟ್ಯಾಕ್ಸಿ ಖರೀದಿಸಲು ಮೂರು ಲಕ್ಷದವರೆಗೆ ಸಬ್ಸಿಡಿ ಸಿಗುತ್ತಿದೆ. ಉಳಿದ ಹಣವನ್ನು ಫಲಾನುಭವಿಗಳು ಬ್ಯಾಂಕ್‌ನಿಂದ ಸಾಲ ಪಡೆಯಬೇಕಿದೆ. ಡೈರಿ. ಪೌಲಿ ಫಾರ್ಮ್ಗೂ ಸಬ್ಸಿಡಿ ಸಿಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದರು.
 
ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಎಡಿಸಿ ಗೋವಿಂದರೆಡ್ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಎಂ.ಕೆ.ಎಸ್‌.ನಸೀರ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವೈ.ಎ. ಕಾಳೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.