ಕೋಟಿ ವೆಚ್ಚದಲ್ಲಿ ಬಸ್‌ ನಿಲ್ದಾಣ ಮೇಲ್ದರ್ಜೆಗೆ


Team Udayavani, Oct 8, 2018, 2:28 PM IST

ray-1.jpg

ರಾಯಚೂರು: ನಗರದ ಕೇಂದ್ರ ಬಸ್‌ ನಿಲ್ದಾಣದ ಮೇಲ್ದರ್ಜೆಗೆ ಎಚ್‌ಕೆಆರ್‌ಡಿಬಿಯಿಂದ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ಸಾಕಷ್ಟು ಬದಲಾವಣೆಗಳ ನಿರೀಕ್ಷೆ ಇವೆ. ಮುಖ್ಯವಾಗಿ ಒಂದನೇ ಡಿಪೋವನ್ನು ಸಿಟಿ ಬಸ್‌ ನಿಲ್ದಾಣವನ್ನಾಗಿಸುವುದು ಹಾಗೂ ಒಂದು ಕೋಟಿ ರೂ. ವೆಚ್ಚದಲ್ಲಿ ಕೋಟೆ ಕೆಳಭಾಗದ ಕಂದಕ ಮುಚ್ಚಿಸಿ ಶೆಲ್ಟರ್‌ ನಿರ್ಮಿಸುವ ಯೋಜನೆ ರೂಪಿಸಲಾಗಿದೆ.

ಕಳೆದ ದಶಕಕ್ಕೆ ಹೋಲಿಸಿದರೆ ಕೇಂದ್ರ ಬಸ್‌ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಸ್ಥಳ ಮಾತ್ರ ಕಿಷ್ಕಿಂದೆಯಂತಾಗಿದೆ. ಹೀಗಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ನಿಲ್ದಾಣ ಮೇಲ್ದರ್ಜೆಗೇರಿಸಲು ಎಚ್‌ಕೆಆರ್‌ ಡಿಬಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಅದಕ್ಕೆ ಪ್ರತಿಕ್ರಿಯೆ ಬಂದಿದ್ದು ಬಸ್‌ ನಿಲ್ದಾಣ ಮೇಲ್ದರ್ಜೆ ಕೆಲಸಗಳಿಗೆ ಒಂದು ಕೋಟಿ ರೂ. ನೀಡಲು ಅನುಮೋದನೆ ಸಿಕ್ಕಿದೆ. ಆದರೆ, ಅನುದಾನ ಬರಬೇಕಿದ್ದು, ಬಂದ ಮರುಕ್ಷಣವೇ ಕಾಮಗಾರಿ ಶುರುವಾಗಲಿದೆ ಎನ್ನುವುದು ಅಧಿಕಾರಿಗಳ ವಿವರಣೆ

ಮೇಲ್ದರ್ಜೆ ಉದ್ದೇಶ: ಈಗಿರುವ ಬಸ್‌ ನಿಲ್ದಾಣದಲ್ಲಿ ಸ್ಥಳಾಭಾವ ಸಮಸ್ಯೆ ಕಾಡುತ್ತಿದೆ. ಏಕಕಾಲಕ್ಕೆ ಬಸ್‌ಗಳು ಬಂದಲ್ಲಿ ತೊಂದರೆಯಾಗುತ್ತದೆ. ಆದರೆ, ನಿಲ್ದಾಣಕ್ಕೆ ಹೊಂದಿಕೊಂಡಿರುವ ಕೋಟೆ ಕಂದಕ ನಿರುಪಯುಕ್ತವಾಗಿದ್ದು, ಅದನ್ನು ಸಮತಟ್ಟು ಮಾಡಿ ಬಸ್‌ ನಿಲುಗಡೆಗೆ ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಪ್ರಾಚ್ಯವಸ್ತು ಇಲಾಖೆಯವರು ಕೋಟೆ ಪಕ್ಕ ದೊಡ್ಡ ಕಟ್ಟಡಗಳನ್ನು ಕಟ್ಟದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಅಲ್ಲಿ ಕಂದಕವನ್ನು ಸಂಪೂರ್ಣ ಮುಚ್ಚಿಸಿ ಕೇವಲ ಬಸ್‌ ಶೆಲ್ಟರ್‌ ಮಾತ್ರ ನಿರ್ಮಿಸುವ ಯೋಜನೆಯಿದೆ. ಅದರ ಜತೆಗೆ ಶೌಚಗೃಹವನ್ನು ತೆರವುಗೊಳಿಸಿ ಅದನ್ನು ಹಿಂದಕ್ಕೆ ನಿರ್ಮಿಸಿ, ತೆರವಾದ ಸ್ಥಳವನ್ನು ಸಂಪೂರ್ಣ ಬೈಕ್‌ ಪಾರ್ಕಿಂಗ್‌ಗಾಗಿ ಬಳಸಿಕೊಳ್ಳುವ ಚಿಂತನೆ ಇದೆ. ಇದರಿಂದ
ನಿಲ್ದಾಣದಲ್ಲಿ ಬಸ್‌ ಸಂಚಾರವೂ ಸುಗಮಗೊಳ್ಳಲಿದೆ, ಸ್ಥಳಾವಕಾಶವೂ ಹೆಚ್ಚಾಗಲಿದೆ.

ಸಿಟಿ ಬಸ್‌ ಸ್ಟಾಪ್‌ ಬದಲಾವಣೆ: ಅದರ ಜತೆಗೆ ಬಹುವರ್ಷಗಳ ಯೋಜನೆಯಾದ ಸಿಟಿ ಬಸ್‌ ನಿಲ್ದಾಣ ಸ್ಥಳಾಂತರ ಯೋಜನೆಗೂ ಸಮ್ಮತಿ ಸಿಕ್ಕಿದೆ. ಇದಕ್ಕಾಗಿ ಐದು ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಎಚ್‌ಕೆಆರ್‌ಡಿಬಿ ಗ್ರೀನ್‌ ಸಿಗ್ನಲ್‌ ನೀಡಿದ್ದು, ಕೇಂದ್ರ ಬಸ್‌ ನಿಲ್ದಾಣ ಮುಂಭಾಗದ ಒಂದನೇ ಡಿಪೋ ಸಿಟಿ ಬಸ್‌ ನಿಲ್ದಾಣವಾಗಿ ಮಾರ್ಪಡಲಿದೆ. ಈಗಾಗಲೇ ಮೂರನೇ ಡಿಪೋ ಕೂಡ ಸೇವೆಗೆ ಮುಕ್ತಗೊಂಡಿದೆ. ಒಂದನೇ ಡಿಪೋವನ್ನು 2ರಲ್ಲಿ ಸಂಯೋಜಿಸುವ ಉದ್ದೇಶವಿದೆ. ಖಾಲಿಯಾದ ಒಂದನೇ ಡಿಪೋ ಸ್ಥಳದಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ, ಸಿಟಿ ಬಸ್‌ಗಳ ನಿಲುಗಡೆಗೆ ಬಳಸಿಕೊಳ್ಳುವ ಯೋಜನೆಯಿದೆ.

ಮಾನ್ವಿಯಲ್ಲೂ ಸ್ಥಳಾಂತರ
ಇದು ಕೇವಲ ರಾಯಚೂರು ನಗರ ಬಸ್‌ ನಿಲ್ದಾಣಕ್ಕೆ ಮಾತ್ರವಲ್ಲ ಮಾನ್ವಿ ಬಸ್‌ ನಿಲ್ದಾಣದಲ್ಲೂ ಕೆಲ ಬದಲಾವಣೆ ಸಾಧ್ಯತೆಗಳಿವೆ. ಅಲ್ಲಿನ ಡಿಪೋವನ್ನು ಬಸ್‌ ನಿಲ್ದಾಣವನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ. ರಾಯಚೂರು ರಸ್ತೆಯಲ್ಲಿರುವ ಎಲ್‌ಐಸಿ ಕಚೇರಿ ಬಳಿ ಐದು ಎಕರೆ ಜಮೀನು ನಿಗಮಕ್ಕೆ ಹಸ್ತಾಂತರವಾಗಿದ್ದು, ಅಲ್ಲಿಗೆ ಡಿಪೋ ಸ್ಥಳಾಂತರ ಮಾಡಲಾಗುತ್ತಿದೆ. ನಿಲ್ದಾಣವನ್ನು ಹಳೇ ಡಿಪೋ ಸ್ಥಳದಲ್ಲಿ ನಿರ್ಮಿಸುವ ಸಾಧ್ಯತೆಗಳಿವೆ. ಜನಸಂಖ್ಯೆಗೆ ಅನುಗುಣವಾಗಿ ಸಾರಿಗೆ ನಿಗಮವೂ ಬದಲಾವಣೆ ಬಯಸುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಅಂದುಕೊಂಡ ಯೋಜನೆಗಳು ತ್ವರಿತಗತಿಯಲ್ಲಿ ಮುಗಿಸಿದರೆ ಅನುಕೂಲ ಎಂಬುದು ಪ್ರಯಾಣಿಕರ ಅನಿಸಿಕೆ.

ಕೇಂದ್ರ ಬಸ್‌ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವುದು, ಒಂದನೇ ಡಿಪೋವನ್ನು ನಿಲ್ದಾಣಕ್ಕೆ ಬಳಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಎಚ್‌ಕೆಆರ್‌ಡಿಬಿ ಒಟ್ಟು ಆರು ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಿದೆ. ಅನುದಾನ ಬಿಡುಗಡೆಯಾದ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು. 
 ಶ್ರೀರಾಮ್‌ ಬಿ., ವಿಭಾಗೀಯ ನಿಯಂತ್ರಣಾಧಿಕಾರಿ, ಈಶಾನ್ಯ ಸಾರಿಗೆ ಸಂಸ್ಥೆ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.