ಭೀಮಣ್ಣ ಖಂಡ್ರೆಗೆ ರಾಷ್ಟ್ರೀಯ ಪುರಸ್ಕಾರ


Team Udayavani, Oct 20, 2018, 4:21 PM IST

ray-1.jpg

ಬಸವಕಲ್ಯಾಣ: ಗೊತ್ತಿಲ್ಲದ ಸಂಗತಿಗಳು ಅನುಭವದಿಂದ ಮಾತ್ರ ತಿಳಿಯುತ್ತವೆ. ಹೀಗಾಗಿ ವಿಶ್ವಗುರು ಬಸವಣ್ಣ ಅನುಭವ ಮಂಟಪ ಸ್ಥಾಪಿಸಿದ್ದರು ಎಂದು ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ ಪಾಟೀಲ ಚಾಕೂರಕರ್‌ ಹೇಳಿದರು.

ಬಿಕೆಡಿಬಿ ಸಭಾಭವನದಲ್ಲಿ ಅಖೀಲ ಭಾರತ ಹರಳಯ್ಯ ಪೀಠ ಹಮ್ಮಿಕೊಂಡ ಶರಣ ವಿಜಯೋತ್ಸವ ನಾಡಹಬ್ಬ ಮತ್ತು 39ನೇ ಹುತಾತ್ಮ ದಿನಾಚರಣೆಯ ಎಂಟನೇ ದಿನ ನಡೆದ ಕಲ್ಯಾಣ ಕ್ರಾಂತಿ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣಾ ಖಂಡ್ರೆ ಅವರಿಗೆ ಶರಣ ವಿಜಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. 

ಅನುಭವ ಮಂಟಪದಲ್ಲಿ ಕೇವಲ ದೇಶದ ಜನರು ಮಾತ್ರ ಭಾಗಿಯಾಗಲಿಲ್ಲ. ವಿದೇಶಿಗರೂ ಭಾಗವಹಿಸಿದ್ದರು. ಇಲ್ಲಿ ಸತ್ಯ, ಅಹಿಂಸೆ, ಶಾಂತಿ ಕುರಿತು ಚರ್ಚೆ ನಡೆಯುತ್ತಿತ್ತು. ಆದರೆ ಈಗಲೂ ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕೆಲಸವಾಗುತ್ತಿಲ್ಲ. ತಾಪಂ, ಜಿಪಂ, ಗ್ರಾಪಂನಲ್ಲಿ ಮೀಸಲಾತಿಯನ್ನು ರಾಜೀವ ಗಾಂಧಿ ಜಾರಿಗೆ ತಂದಿದ್ದರು. ಆ ಸಂದರ್ಭದಲ್ಲಿ ನಾನು ಸಮಿತಿ ಸದಸ್ಯನಾಗಿದ್ದಾಗ ಒಬ್ಬರು ಲೋಕಸಭೆಯಲ್ಲಿ ಮಹಿಳೆಯರಿಗೆ ಯಾಕೆ ಮೀಸಲಾತಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದಾಗ, ಎರಡು ವರ್ಷಗಳ ನಂತರ ಮಾಡುತ್ತೇವೆ ಎಂದು ತಿಳಿಸಿದ್ದರು. ಆದರೆ ಈ ವರೆಗೂ ಮೀಸಲಾತಿ ಜಾರಿ ಮಾಡಿಲ್ಲ. ಇದಕ್ಕೆ ರಾಜಕೀಯ ಸ್ವಾರ್ಥವೇ ಪ್ರಮುಖ ಕಾರಣ. ಅಲ್ಲದೇ ವಿಶ್ವಗುರು ಬಸವಣ್ಣನವರು ಮಹಿಳೆಯರಿಗೆ 12ನೇ ಶತಮಾನದಲ್ಲಿ ಸಮಾನತೆ ಹಕ್ಕು ನೀಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಲೇಬೇಕು ಎಂದರು.

ಹಿರಿಯ ಮುತ್ಸದ್ಧಿ, ಲೋಕ ನಾಯಕ ಭಿಮಣ್ಣಾ ಖಂಡ್ರೆ ಸಮಾನತೆ, ಬಡವರ ಅಭಿವೃದ್ಧಿಗಾಗಿ ಶ್ರಮಿಸಿದವರು. ಅವರಿಂದ ನಾವು ಸಾಕಷ್ಟು ಕಲಿಯುವುದಿದೆ ಎಂದರಲ್ಲದೇ, ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸಹಕಾರ ಮತ್ತು ಬೆಂಬಲ ವಿದೆ ಎಂದು ಭರವಸೆ ನೀಡಿದರು. ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ನನ್ನ ಜೀವನದಲ್ಲಿ ಸಾಧನೆ ಮಾಡಿದ ಶ್ರೇಯಸ್ಸು ಭೀಮಣ್ಣಾ ಖಂಡ್ರೆ ಅವರಿಗೆ ಸಲ್ಲುತ್ತದೆ. ನೂತನ ಅನುಭವ ಮಂಟಪ ಕಾಮಗಾರಿ ದೊಡ್ಡ ಯೋಜನೆಯಾಗಿದೆ. ಆದ್ದರಿಂದ ಅದನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು. 

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ನಾರಾಯಣರಾವ್‌ ಮಾತನಾಡಿ, ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳ ಪ್ರಚಾರ ಬೆಳೆಯುವುದಕ್ಕೆ ಚನ್ನಬಸವ ಪಟ್ಟದ್ದೇವರು, ಭೀಮಣ್ಣಾ ಖಂಡ್ರೆ ಕಾರಣ. ಬಡವರು, ದಲಿತರು ಮತ್ತು ಸಂತರ ನಡುವೆ ಅವರ ಜೀವನ ನಡೆದಿದೆ ಎಂದು ಹೇಳಿದರು. 

ಹರಳಯ್ಯನವರ ಗುಹೆಯ ಡಾ| ಗಂಗಾಂಬಿಕಾ ಅಕ್ಕ ಆಶೀರ್ವಚನ ನೀಡಿದರು. ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಕೂಡಲ ಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. 

ಮಹಾರಾಷ್ಟ್ರದ ಔಸಾ ತಾಲೂಕಿನ ಶಾಸಕ ಬಸವರಾಜ ಪಾಟೀಲ ಮುರುಮ, ಬಸವೇಶ್ವರ ದೇವಸ್ಥಾನ ಪಂಚಕಮಿಟಿ ಅಧ್ಯಕ್ಷ ಅನೀಲಕುಮಾರ ರಗಟೆ, ನಗರಸಭೆ ಅಧ್ಯಕ್ಷ ನೂರಅಜರ್‌ಅಲಿ ನೌರಂಗ, ಬಸವರಾಜ ಬಾಲಿಕಿಲೆ, ಶಿವರಾಜ ನರಶೆಟ್ಟಿ, ಬಸವರಾಜ ಸ್ವಾಮಿ, ಶಶಿಕಾಂತ ದುರ್ಗೆ,
ಮುಂಬೈ ಸಾರಿಗೆ ಅಧಿಕಾರಿ ಸಂಜುಕುಮಾರ ವಾಡೇಕರ್‌ ಮತ್ತಿತರರು ಇದ್ದರು.

ಬೆಳಗ್ಗೆ 770 ಅಮರ ಗಣಂಗಳಿಂದ ಸಾಮೂಹಿಕ ಇಷ್ಟಲಿಂಗ ಯೋಗ ಮತ್ತು ಮಧ್ಯಾಹ್ನ 2:30ಕ್ಕೆ ಅಮೃತ ಪಾತ್ರೆ ಮೆರವಣಿಗೆ ನಡೆಯಿತು.  

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.