ಮಳೆ ನೀರು ನುಗ್ಗಿ ಬೆಳೆ ಹಾನಿ
Team Udayavani, Oct 20, 2018, 4:40 PM IST
ಸಿಂಧನೂರು: ನಗರ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಇಡೀ ರಾತ್ರಿ ಸುರಿದ ಮಳೆಯಿಂದಾಗಿ ಹಳ್ಳ ಕೊಳ್ಳ ರಸ್ತೆಗಳಲ್ಲಿ ನೀರು ತುಂಬಿ ಹರಿದು ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡರೆ ಇನ್ನೂ ಕೆಲವೆಡೆ ಹೊಲಗಳಿಗೆ ನೀರು ನುಗ್ಗಿ ಜೋಳ, ಭತ್ತ, ಹತ್ತಿ ಬೆಳೆಗಳು ನಷ್ಟವಾಗಿವೆ.
ತಾಲೂಕಿನ ಬನ್ನಿಗನೂರು, ರಾಗಲಪರ್ವಿ, ಧುಮತಿ, ಆಯನೂರು, ಗೋನವಾರ, ಹೆಡಗಿನಾಳ, ಒಳಬಳ್ಳಾರಿ, ಗಿಣಿವಾರ, ಬಾದರ್ಲಿ, ಹರಟೆನೂರು, ಹೊಸಳ್ಳಿ ಇಜೆ, ಅಮರಾಪುರ ಸೇರಿದಂತೆ ಹಲವೆಡೆಗಳಲ್ಲಿ ಹಳ್ಳದ ನೀರು ಹೊಲಗಳಿಗೆ ನುಗ್ಗಿದ್ದು, ಭತ್ತ, ಹತ್ತಿ, ಜೋಳ ಸೇರಿದಂತೆ ಇತರೆ ಕೆಲ ಬೆಳೆಗಳು ಹಾಳಾಗಿವೆ.
40ನೇ ಉಪಕಾಲುವೆ ನೀರು ಹೆಚ್ಚಾಗಿ ವಾರ್ಡ್ ನಂ. 17ರ ವೆಂಕಟೇಶ್ವರ ಕಾಲೋನಿಯಲ್ಲಿ ನುಗ್ಗಿ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೊಮ್ಮೆ ಇಂತಹ ಸಮಸ್ಯೆ ಉಂಟಾಗುತ್ತಿದೆ. ವಾರ್ಡ್ನಲ್ಲಿ ಹರಿದ ನೀರು ಮುಂದುವರಿದು ಗಂಗಾವತಿ ಮುಖ್ಯರಸ್ತೆಗೆ ಹೋಗಿ ಅಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳುತ್ತದೆ. ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರ ನಿರ್ಲಕ್ಷ್ಯದಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ವಾರ್ಡ್ ನಿವಾಸಿಗಳಾದ ನಿರುಪಾದೆಪ್ಪ ವಕೀಲ, ನನ್ನುಸಾಬ್ ಮೇಸ್ತ್ರಿ ಆರೋಪಿಸಿದ್ದಾರೆ.
ಮಳೆಯಿಂದಾಗಿ ಹಾಳಾದ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ ವರದಿ ನೀಡುವಂತೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲಲ್ಲಿ ಹೊಲಗಳಿಗೆ ನೀರು ನುಗ್ಗಿ ಅಲ್ಪ ಸ್ವಲ್ಪ ಬೆಳೆಗಳು ಹಾಳಾದನ್ನು ಬಿಟ್ಟರೇ ಯಾವುದೇ ರೀತಿಯ ಅನಾಹುತಗಳು ನಡೆದಿಲ್ಲ ಎಂದು ತಹಶೀಲ್ದಾರ ಸಂತೋಷಕುಮಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ