ಕೈಗೆ ಒಂದು-ದಳಕ್ಕೆ ಎರಡು ಅಧ್ಯಕ್ಷ ಸ್ಥಾನ


Team Udayavani, Oct 23, 2018, 3:48 PM IST

ray-1.jpg

ರಾಯಚೂರು: ಜಿಲ್ಲಾ ಪಂಚಾಯಿತಿ ವಿವಿಧ ಸ್ಥಾಯಿ ಸಮಿತಿ ಸ್ಥಾನಗಳಿಗೆ ಸದಸ್ಯರ ಆಯ್ಕೆ ಬಳಿಕ ಜೆಡಿಎಸ್‌ನ ಇಬ್ಬರು, ಕಾಂಗ್ರೆಸ್‌ನ ಒಬ್ಬರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. 

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಐದು ಸ್ಥಾಯಿ ಸಮಿತಿಗಳಿಗೆ ಸೋಮವಾರ ಚುನಾವಣೆ ನಡೆಯಿತು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್‌ನ ಖಾಸಿಂ ನಾಯಕ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಬಸನಗೌಡ ಕಂಬಳಿ ಹಾಗೂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜೆಡಿಎಸ್‌ನ ಬಸವರಾಜ ಹಿರೇಗೌಡ್ರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಹ್ಮದ್‌ ಯೂಸೂಫ್‌ ಘೋಷಿಸಿದರು.

ಜಿಪಂ ಸಾಮಾನ್ಯ ಸ್ಥಾಯಿ ಸಮಿತಿ, ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ತಲಾ 6 ಜನ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಹಾಗೂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ ತಲಾ 7 ಜನ ಸದಸ್ಯರ ಆಯ್ಕೆ ಪ್ರಕ್ರಿಯೆ ಮೊದಲು ನಡೆಯಿತು.
 
ಸಾಮಾನ್ಯ ಸ್ಥಾಯಿ ಸಮಿತಿ: ಆರು ಸದಸ್ಯರುಳ್ಳ ಸಾಮಾನ್ಯ ಸ್ಥಾಯಿ ಸಮಿತಿ ಸದಸ್ಯತ್ವಕ್ಕಾಗಿ ಸಂದೀಪ ನಾಯಕ, ಕಿರಿಲಿಂಗಪ್ಪ ಕವಿತಾಳ, ಸಾಹೀರಾ ಬೇಗಂ, ಶರಣ ಬಸವರಾಜ ಪಾಟೀಲ ಅನ್ವರಿ ನಾಮಪತ್ರ ಸಲ್ಲಿಸಿದ್ದರು. ಯಾರೂ ನಾಮಪತ್ರ ಹಿಂಪಡೆಯದ ಕಾರಣ ಎಲ್ಲರನ್ನು ಸಮಿತಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ: ಏಳು ಜನ ಸದಸ್ಯರುಳ್ಳ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಗೆ ಖಾಸಿಂ ನಾಯಕ, ಮಹಾಂತೇಶ ಪಾಟೀಲ ಅತ್ತನೂರು, ಗೌರಿ ನಾಡಗೌಡ, ರೇಣುಕಾ ಚಂದ್ರಶೇಖರ, ದುರುಗಪ್ಪ, ಎಂ.ಪದ್ಮಾವತಿ, ಸಾಹೀರಾ ಬೇಗಂ, ಬಾಬುಗೌಡ ಬಾದರ್ಲಿ ಸೇರಿ ಎಂಟು ಜನ ನಾಮಪತ್ರ ಸಲ್ಲಿಸಿದರು. ಕೊನೆ ಕ್ಷಣದಲ್ಲಿ ಬಾಬುಗೌಡ ಬಾದರ್ಲಿ ನಾಮಪತ್ರ ಹಿಂಪಡೆದರು. ಇದರಿಂದ ಉಳಿದ ಏಳು ಜನರನ್ನು ಸದಸ್ಯರನ್ನಾಗಿ ಸಮಿತಿಗೆ ಆಯ್ಕೆ ಮಾಡಲಾಯಿತು. ಬಳಿಕ ಈ ಸದಸ್ಯರೆಲ್ಲ ಸೇರಿ ಖಾಸಿಂ ನಾಯಕರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.

ಹಣಕಾಸು, ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ: ಒಟ್ಟು ಆರು ಜನ ಸದಸ್ಯರ ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಗೌರಿ ನಾಡಗೌಡ ಮತ್ತು ಮಹಾಂತೇಶ ಪಾಟೀಲ ಅತ್ತನೂರು, ಸಂದೀಪ ನಾಯಕ, ಬಸವರಾಜೇಶ್ವರಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ: ಏಳು ಸದಸ್ಯರ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಬಸನಗೌಡ ಕಂಬಳಿ, ಸಂಗಪ್ಪ ದೇಸಾಯಿ, ರಾಣಿ ಜಯಲಕ್ಷ್ಮೀ, ಎಂ.ಅನ್ನಪೂರ್ಣ, ಕಿರಿಲಿಂಗಪ್ಪ, ಎನ್‌.ಶಿವನಗೌಡ, ಅಮರೇಗೌಡ ಮಾಲಿಪಾಟೀಲ ಅವರು ನಾಮಪತ್ರ ಸಲ್ಲಿಸಿದರು. ಇವರಲ್ಲಿ ಯಾರೂ ನಾಮಪತ್ರ ಹಿಂಪಡೆಯದ ಕಾರಣಕ್ಕೆ ಎಲ್ಲರನ್ನು ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಂಕ್ಷಿಪ್ತ ಸಭೆ ನಡೆಸಿದ ಸದಸ್ಯರು ಬಸನಗೌಡ ಕಂಬಳಿ ಅವರನ್ನು ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.

ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ: ಏಳು ಜನ ಸದಸ್ಯರ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಗೆ ಬಸವರಾಜ ಹಿರೇಗೌಡ್ರು, ಬಾಬುಗೌಡ ಬಾದರ್ಲಿ, ಗಂಗಣ್ಣ ಸಾಹುಕಾರ, ಬಸವರಾಜೇಶ್ವರಿ, ಜಯಶ್ರೀ, ಎನ್‌. ಶಿವನಗೌಡ, ಅಮರಮ್ಮ, ದುರುಗಪ್ಪ, ರೇಣುಕಾ, ಕಿರಿಲಿಂಗಪ್ಪ ಸೇರಿ ಒಟ್ಟು 10
ಜನರು ನಾಮಪತ್ರಗಳನ್ನು ಸಲ್ಲಿಸಿದ್ದರು. ಇದರಲ್ಲಿ ಕಿರಿಲಿಂಗಪ್ಪ, ಬಸವರಾಜೇಶ್ವರಿ ಮತ್ತು ದುರುಗಪ್ಪ ಅವರು ನಾಮಪತ್ರ ಹಿಂಪಡೆದ ಕಾರಣ ಉಳಿದವರ ಆಯ್ಕೆ ನಡೆಯಿತು. ಬಳಿಕ ಸದಸ್ಯರು ಬಸವರಾಜ ಹಿರೇಗೌಡ್ರು ಅವರನ್ನು ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದರು.
ಸಂಸದ ಬಿ.ವಿ.ನಾಯಕ, 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.