ಜಾಲಹಳ್ಳಿ ಜಿಪಂ: ನಾಳೆ ಮತದಾನ


Team Udayavani, Oct 27, 2018, 2:19 PM IST

ray-1.jpg

ದೇವದುರ್ಗ: ಜಾಲಹಳ್ಳಿ ಜಿಪಂ ಕ್ಷೇತ್ರದ ಸದಸ್ಯ ಗುರುರಾಜ ದೇಸಾಯಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಅ. 28ರಂದು ಬೆಳಗೆ 7:00ರಿಂದ 5:00ರ ವರೆಗೆ ಮತದಾನ ನಡೆಯಲಿದೆ ಎಂದು ಸಹಾಯಕ ಚುನಾಣಾಧಿಕಾರಿ, ತಹಶೀಲ್ದಾರ್‌ ಶಿವಶರಣಪ್ಪ ಕಟ್ಟೋಳಿ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತ ಮತದಾನಕ್ಕೆ ತಾಲೂಕು ಆಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 27054 ಮತದಾರರು ಇದ್ದಾರೆ. ಇದರಲ್ಲಿ 13192 ಪುರುಷರು, 13857 ಮಹಿಳೆಯರು ಮತ್ತು ಐವರು ಇತರೆ ಮತದಾರರು ಇದ್ದಾರೆ ಎಂದು ತಿಳಿಸಿದರು. 

ಒಟ್ಟು 31 ಮತಗಟ್ಟೆ ಸ್ಥಾಪಿಸಲಾಗಿದೆ. ಅದರಲ್ಲಿ ಅತಿಸೂಕ್ಷ್ಮ 10, ಸೂಕ್ಷ್ಮ 7, ಸಾಮಾನ್ಯ 14. ಚುನಾವಣೆ ಕರ್ತವ್ಯಕ್ಕೆ 175 ಸಿಬ್ಬಂದಿ ನಿಯೋಜಿಸಲಾಗಿದೆ. ಚುನಾವಣೆ ನಡೆಯುವ ಪ್ರತಿಯೊಂದು ಮತಗಟ್ಟೆ ಕೇಂದ್ರಗಳಿಗೆ ಈಗಾಗಲೇ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ಅಂಗವಿಕ ಮತದಾರರಿಗೆ ಮತಗಟ್ಟೆಗೆ ಹೋಗಲು ರ್‍ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಂದೋಬಸ್ತ್ಗಾಗಿ ನಾಲ್ವರು ಪಿಎಸ್‌ಐ, ಐವರು ಎಎಸ್‌ಐ,
17 ಜನ ಹೆಡ್‌ ಕಾನಸ್ಟೇಬಲ್‌, 31 ಜನ ಪೊಲೀಸರು, 24 ಜನ ಹೋಮ್‌ ಗಾರ್ಡ್‌ ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ದೃಶ್ಯ ಸೆರೆ ಹಿಡಿಯಲು ಪ್ರತಿ ಕೇಂದ್ರದಲ್ಲಿ ಚಿತ್ರಿಕರಣ ಮಾಡಲಾಗುತ್ತದೆ. ಮಿನಿವಿಧಾನಸೌಧ ಸಭಾಂಗಣದಲ್ಲಿ ಅ. 31ರಂದು ಬೆಳಗ್ಗೆ 8:00ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು. 

ಜಾಲಹಳ್ಳಿ: ಜಾಲಹಳ್ಳಿ ಜಿಪಂ ಕ್ಷೇತ್ರಕ್ಕೆ ಅ. 28ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಪಾಣಿ ಗೆಲುವು ಖಚಿತವಾಗಿದೆ ಎಂದು ಶಾಸಕ ಕೆ. ಶಿವನಗೌಡ ನಾಯಕ ಹೇಳಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶುಕ್ರವಾರ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ನಂತರ ಅವರು ಮಾತನಾಡಿದರು. ತಾವು ಮಂತ್ರಿಗಳಾಗಿ ಹಾಗೂ ಶಾಸಕರಾಗಿ ಜಾಲಹಳ್ಳಿ ಜಿಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜಾಲಹಳ್ಳಿ ರಂಗನಾಥ ದೇವಸ್ಥಾನದ ಎರಡು ಗೋಪುರಗಳ ನಿರ್ಮಾಣ, ಅಂಬಿಗೇರ ಚೌಡಯ್ಯ ಭವನ, ವಾಲ್ಮೀಕಿ ಭವನ, ಹೈಟೆಕ್‌ ಗ್ರಂಥಾಲಯ ಕಟ್ಟಡ, ಸೂಮಾರು 30 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಶಾಲಾ ಕಟ್ಟಡಗಳು, ಬಸ್‌ ನಿಲ್ದಾಣ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕಗಳು, ವರಟಿ ಮಾರುತಿ ದೇವಸ್ಥಾನ, ಯಲ್ಲಮ್ಮ ದೇವರ ಮನೆ ನಿರ್ಮಾಣ ಸೇರಿದಂತೆ ಹಲವಾರು ದೇಗುಲಗಳ ಜೀರ್ಣೋದ್ದಾರ ಮಾಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಮುದುಗೋಟ, ಲಿಂಗದಳ್ಳಿ, ಹೇರುಂಡಿ, ಬಾಗೂರು, ಮೇದಿನಾಪುರು, ಪರಾಪುರು, ಮುಕ್ಕನಾಳ ಗ್ರಾಮಗಳ ರಸ್ತೆ ಡಾಂಬರೀಕರಣ ಸೇರಿದಂತೆ ನೂರಾರು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಮ್ಮ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿ ಗೆಲವಿಗೆ ಶ್ರೀರಕ್ಷೆ ಆಗಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷ ಹನುಮಂತ ಕಟ್ಟಿಮನಿ, ಗೋವಿಂದರಾಜ ತಿಮ್ಮಾಪುರು, ಬಿಜೆಪಿ ಮಂಡಲದ ಅಧ್ಯಕ್ಷ ಪ್ರಕಾಶ ಪಾಟೀಲ, ಚಂದಪ್ಪ ಬುದ್ದಿನ್ನಿ, ಮುಖಂಡರಾದ ಅಮರೇಶ ಪಾಟೀಲ, ನಸೀರಸಾಬ್‌ ಮುಲ್ಲಾ, ವೆಂಕನಗೌಡ ಪಾಟೀಲ, ಭೀಮಣ್ಣ ನಾಡಗೌಡ ಚಿಂಚೋಡಿ, ವಿ.ಎಂ. ಮೇಟಿ, ಜಂಬಣ್ಣ ನಿಲೋಗಲ್‌, ಬಸವರಾಜ ಪಾಟೀಲ ಗಾಣದಾಳ ಭಾಗವಹಿಸಿದ್ದರು. 

 ಕಾಂಗ್ರೆಸ್‌ ಅಭ್ಯರ್ಥಿ ಪ್ರಚಾರ: ಕಾಂಗ್ರಸ್‌ ಪಕ್ಷದ ಅಭ್ಯರ್ಥಿ ವಿಠೊಬ ನಾಯಕ ಕಾರ್ಯಕರ್ತರೊಂದಿಗೆ ಗ್ರಾಮದಲ್ಲಿ ಮನೆ, ಮನೆಗೆ ತೆರಳಿ ಮತ ಯಾಚಿಸಿದರು. ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರ, ಜಾಲಹಳ್ಳಿ ಬ್ಲಾಕ್‌ ಅಧ್ಯಕ್ಷ ಆದನಗೌಡ ಪಾಟೀಲ, ವೇಣುಗೋಪಾಲಗೌಡ ವಕೀಲರು, ಬಸವರಾಜ ಹೇರುಂಡಿ, ಶರಣಗೌಡ ಗಣೇಕಲ್‌ ಇದ್ದರು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.