ಪದವಿಗಿಂತ ಗುಣಮಟ್ಟದ ಶಿಕ್ಷಣ ಮುಖ್ಯ


Team Udayavani, Nov 10, 2018, 12:47 PM IST

ray-1.jpg

ಕಲಬುರಗಿ: ಬರೀ ಪದವಿ ಪಡೆದರೆ ಸಾಲದು. ಗುಣಮಟ್ಟದ ಶಿಕ್ಷಣದೊಂದಿಗೆ ಹೊರ ಬಂದರೆ ಮಾತ್ರ ಸಾರ್ಥಕತೆ ಹೊಂದಲು ಸಾಧ್ಯ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಸತಿ ಶಾಲೆ (ಎಸ್‌ಬಿಆರ್‌) ಐದು ದಿನಗಳ ಸುವರ್ಣ ಮಹೋತ್ಸವ ಹಾಗೂ ಶಾಲೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣ ನೀಡುವುದು ಬಹಳ ಮುಖ್ಯವಾದ ಕೆಲಸ. ಕೇರಳದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಹಿನ್ನೆಲೆಯಲ್ಲಿ ಶೇ. ನೂರರಷ್ಟು ಸಾಕ್ಷರತೆ ಸಾಧಿಸಲು ಸಾಧ್ಯವಾಗಿದೆ. ಅದೇ ರೀತಿ ನಮ್ಮ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಬೋಧನೆಯಲ್ಲಿ ಗುಣಮಟ್ಟತೆ ಕಾರ್ಯಾನುಷ್ಠಾನದಿಂದ ಶಿಕ್ಷಣದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತಿದೆ. ಅದೇ ರೀತಿ ಶರಣಬಸವೇಶ್ವರ ವಸತಿ ಶಾಲೆಯಲ್ಲಿ ಗುಣಮಟ್ಟತೆ ಇರುವುದರಿಂದಲೇ ಪ್ರತಿ ವರ್ಷ 200 ವಿದ್ಯಾರ್ಥಿಗಳು ವೈದ್ಯಕೀಯ, ನೂರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್‌ಗೆ ಪ್ರವೇಶಾತಿ ಪಡೆಯುತ್ತಿದ್ದಾರೆ. ಒಟ್ಟಾರೆ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿರುವ ಸಂಸ್ಥೆಗೆ ಈ ಐದು ದಿನಗಳ ಸಮ್ಮೇಳನವೇ ಸಾಕ್ಷಿಯಾಗಿದೆ ಎಂದು ಬಣ್ಣಿಸಿದರು.

ಸಂಸ್ಥೆ ಅಧ್ಯಕ್ಷರಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರು ದೇಶದ ಹಲವಾರು ಉತ್ತಮ ಶಾಲೆಗಳನ್ನು ಸಂದರ್ಶಿಸಿ ಗುಣಮಟ್ಟ ಅಳವಡಿಸಿದ್ದಾರೆ. ಶಾಲೆಯೊಂದರಲ್ಲಿಯೇ ಈ ಹಿಂದೆ ಶಿಕ್ಷಣ ಪಡೆದು ಹೊರ ಹೋಗಿರುವ ಹತ್ತು ಸಾವಿರ ವಿದ್ಯಾರ್ಥಿಗಳು ಹಾಗೂ ಪ್ರಸಕ್ತವಾಗಿ ಓದುತ್ತಿರುವ ಹತ್ತು ಸಾವಿರ ವಿದ್ಯಾರ್ಥಿಗಳು ಸೇರುತ್ತಿರುವ ಈ ಸಮ್ಮೇಳನ ಒಂದು ಅಮೃತ ಘಳಿಗೆ ಎಂದರು. 

ಮುಖ್ಯ ಅತಿಥಿಯಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ಮಾತನಾಡಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ವಿಕಸನವನ್ನು ರೂಪಿಸಲಾಗುತ್ತದೆ. ಮುಖ್ಯವಾಗಿ ತಾವೂ ಈ ಸಂಸ್ಥೆಯಲ್ಲಿ ಶಿಕ್ಷಣ ಪಡೆದಿದ್ದು, ಶಿಸ್ತು, ಕಲಿಕೆ ಹಾಗೂ ಸಂಸ್ಕಾರ ಕಲಿಯಲು ಕಾರಣವಾಗಿದೆ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶರಣಬಸವ ವಿವಿ ಕುಲಾಧಿಪತಿಗಳಾದ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಆಶೀರ್ವಚನ ನೀಡಿ, ತಮ್ಮ ಸಂಸ್ಥೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡುತ್ತಾ ಬಂದಿದ್ದೇವೆ. ಜತೆಗೆ ಸ್ವತಂತ್ರವಾಗಿ ವಿಚಾರ ಮಾಡುವುದು, ಸ್ವತಂತ್ರವಾಗಿ ಬರೆಯುವುದು ಹಾಗೂ ಸ್ವತಂತ್ರವಾಗಿ ಮಾತನಾಡುವುದನ್ನು ಕಲಿಸುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಸಂಸ್ಥೆ ಬೆಳೆಯಲು ಕಾರಣವಾಗಿದೆ. ಜ್ಞಾನದ ಗುಣಮಟ್ಟತೆಗೆ ಜಗತ್ತಿನಲ್ಲಿ ಬೆಲೆ ಇದೆ ಎನ್ನುವುದು ಈ ಮೂಲಕ ಸಾಬೀತು ಆಗಿದೆ ಎಂದರು.

ಎಸ್‌ಬಿಆರ್‌ ಶಾಲೆ ಗುಣಮಟ್ಟ ಉಳಿದ ಸಂಸ್ಥೆಗಳಲ್ಲೂ ಬರಬೇಕು. ಪ್ರತಿಯೊಂದು ಮಗು ಸಹ ಎಸ್‌ಬಿಆರ್‌ ಶಾಲೆಯಲ್ಲಿಯೇ ಪ್ರವೇಶ ಪಡೆಯಬೇಕು ಎನ್ನುವ ಮಟ್ಟಿಗೆ ಶಾಲೆ ಖ್ಯಾತಿ ಪಡೆದಿದೆ. ಕಳೆದ ವರ್ಷವೇ ಆರಂಭವಾಗಿರುವ ಶರಣಬಸವ ವಿವಿಯಲ್ಲಿ ಏಕಕಾಲಕ್ಕೆ 22 ಕೋರ್ಸಗಳು ಆರಂಭವಾಗಿರುವುದು ಶಿಕ್ಷಣ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ನುಡಿದರು.

ಕೃತಿ ಬಿಡುಗಡೆ: ಎಸ್‌ಬಿಆರ್‌ ಶಾಲೆ ಸುವರ್ಣ ಮಹೋತ್ಸವದ ಅಂಗವಾಗಿ ಹಿರಿಯ ಪತ್ರಕರ್ತ ಹಾಗೂ ಶರಣಬಸವ ವಿವಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್‌ ಅವರು ಬರೆದ ಟೆಂಪಲ್‌ ಆಫ್‌ ನಾಲೆಜ್‌ ಪುಸ್ತಕ ಬಿಡುಗಡೆ ಮಾಡಲಾಯಿತು. 

ಮಾಜಿ ಸಂಸದ ಡಾ| ಬಸವರಾಜ ಪಾಟೀಲ ಸೇಡಂ, ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವೇಶ್ವರ ವಸತಿ ಶಾಲೆ ಪ್ರಾಚಾರ್ಯ ಪ್ರೊ| ಎನ್‌.ಎಸ್‌. ದೇವರಕಲ್‌, ಶರಣಬಸವ ವಿವಿ ಕುಲಪತಿ ಡಾ| ನಿರಂಜನ್‌ ನಿಷ್ಠಿ, ಕುಲಸಚಿವ ಪ್ರೊ| ಅನೀಲಕುಮಾರ ಬಿಡವೆ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ, ಪ್ರಮುಖರಾದ ಉದಯಶಂಕರ ನವಣಿ, ವಿನಾಯಕ ಮುಕ್ಕಾ ಮುಂತಾದವರಿದ್ದರು. ಎಸ್‌ಬಿಆರ್‌ ಶಾಲೆಯಲ್ಲಿ ಶಿಕ್ಷಣ ಪಡೆದು ದೇಶ-ವಿದೇಶಗಳಲ್ಲಿರುವ ಸಾವಿರಾರು ಗಣ್ಯರು-ಪ್ರಮುಖರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಎಸ್‌ಬಿಆರ್‌ ಶಾಲೆ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ| ಭರತ ಕೋಣಿನ್‌ ಸ್ವಾಗತಿಸಿದರು. ಶಿಕ್ಷಕ ಶಂಕರಗೌಡ ಪಾಟೀಲ ನಿರೂಪಿಸಿದರು. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ರಾಜ್ಯಕ್ಕೆ ಅತ್ಯುತ್ತಮ ಫಲಿತಾಂಶ ಬರುತ್ತದೆ. ಅದಕ್ಕೆ ಅಲ್ಲಿರುವ ಶಿಕ್ಷಕರು ಮೈಗೂಡಿಸಿಕೊಂಡಿರುವ ಶೈಕ್ಷಣಿಕ ಬದ್ಧತೆಯೇ ಕಾರಣವಾಗಿದೆ. ನಮ್ಮ ಶಿಕ್ಷಕರಲ್ಲೂ ಈ ಗುಣ ಬಂದರೆ ಫಲಿತಾಂಶ ಸುಧಾರಣೆಗೆ ನಾಂದಿ ಹಾಡಬಹುದಾಗಿದೆ. ಹೇಗೆ ಆ ಭಾಗದ ಶಿಕ್ಷಕರು ಸ್ಥಳೀಯವಾಗಿದ್ದು, ಶಿಕ್ಷಣ ಸುಧಾರಣೆಗೆ ಕೈ ಜೋಡಿಸುತ್ತಾರೆಯೋ ಅದೇ ರೀತಿ ನಮ್ಮ ಭಾಗದ ಶಿಕ್ಷಕರಲ್ಲೂ ಆ ಗುಣ ಬರಲಿ ಎನ್ನುವ ಉದ್ದೇಶದಿಂದ 371ನೇ (ಜೆ) ವಿಧಿಗೆ ತಿದ್ದುಪಡಿ ತಂದು ಶೇ. 75ರಷ್ಟು ನಮ್ಮ ಶಿಕ್ಷಕರೇ ನೇಮಕಗೊಂಡು ಇಲ್ಲೇ ಶಿಕ್ಷಣ ಕಲಿಸಲಿ ಎನ್ನುವ ಕ್ರಮ ಕೈಗೊಳ್ಳಲಾಗಿದೆ.
 ಡಾ| ಮಲ್ಲಿಕಾರ್ಜುನ ಖರ್ಗೆ, ಸಂಸದ

ದೇವರಕಲ್‌ ಗುರುಸ್ಮರಣೆ ಎಸ್‌ಬಿಆರ್‌ ಸುವರ್ಣ ಮಹೋತ್ಸವದ ವೇದಿಕೆಯಲ್ಲಿ ಕಳೆದ 42 ವರ್ಷಗಳಿಂದ ಪ್ರಾಚಾರ್ಯರಾಗಿ ಶಾಲೆಯನ್ನು ಮುನ್ನಡೆಸಿಕೊಂಡು ಬರುತ್ತಿರುವ ಪ್ರೊ| ಎನ್‌. ಎಸ್‌. ದೇವರಕಲ್‌ ಗಮನ ಸೆಳೆದರು. ಪ್ರೊ| ದೇವರಕಲ್‌ ಹೆಸರು ಹೇಳುತ್ತಿದ್ದಂತೆ ಮಾಜಿ
ಹಾಗೂ ಹಾಲಿ ವಿದ್ಯಾರ್ಥಿಗಳ ಚಪ್ಪಾಳೆ ಶಬ್ದ ಮುಗಿಲು ಮುಟ್ಟುತ್ತಿತ್ತು. ದೇವರಕಲ್‌ ಗುರುವಿನ ಸ್ಮರಣೆ ಸಮಾರಂಭದುದ್ದಕ್ಕೂ ಕೇಳಿ ಬಂತು. 

ವೈದ್ಯಕೀಯ ಪ್ರವೇಶಾತಿಗೆ ಈಗ ಜಾರಿಗೆ ತಂದಿರುವ ನೀಟ್‌ ಪದ್ಧತಿ ಅಷ್ಟು ಸಮಂಜಸವೆನಿಸುತ್ತಿಲ್ಲ. ಏಕೆಂದರೆ ಗ್ರಾಮೀಣ ಭಾಗದಲ್ಲಿ ಇನ್ನು ಉತ್ತಮ ಶಿಕ್ಷಣ ನೀಡುವ ವಾತಾವರಣವಿಲ್ಲ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಅವಕಾಶ ಕಲ್ಪಿಸಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿದ ನಂತರ ನೀಟ್‌ ಜಾರಿಗೆ ತನ್ನಿ. ಹೀಗಾದಲ್ಲಿ ಗ್ರಾಮೀಣರು ವಂಚಿತರಾಗುವ ಅವಕಾಶ ಎದುರಾಗುವುದಿಲ್ಲ. ಎಸ್‌ಎಸ್‌ಎಲ್‌ ಸಿ-ಪಿಯುಸಿ ಅಂಕಗಳ ಆಧಾರದ ಮೇಲೆಯೇ ಪ್ರವೇಶಾತಿ ನಡೆಯಲಿ.
 ಡಾ| ಶರಣಬಸವಪ್ಪ ಅಪ್ಪ, ಅಧ್ಯಕ್ಷರು, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.