ಗಣಿ ಆಡಳಿತ ವರ್ಗಕ್ಕೆ ಮುಷ್ಕರದ ನೋಟಿಸ್‌


Team Udayavani, Nov 10, 2018, 12:53 PM IST

ray-2.jpg

ಹಟ್ಟಿ ಚಿನ್ನದ ಗಣಿ: ಟಿಯುಸಿಐ ನೇತೃತ್ವದ ಹಟ್ಟಿಚಿನ್ನದಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಮುಖಂಡರು ಗುರುವಾರ ನಡೆಸಿದ ಕಾರ್ಮಿಕರ ಸಾಮಾನ್ಯ ಸಭೆಯಲ್ಲಿನ ನಿರ್ಣಯದಂತೆ ಗಣಿ ಕಂಪನಿ ಆಡಳಿತ ವರ್ಗಕ್ಕೆ 14 ದಿನಗಳ ಮುಷ್ಕರದ ನೋಟಿಸ್‌ನ್ನು ಶುಕ್ರವಾರ ಸಲ್ಲಿಸಿದರು.

ಕಾರ್ಮಿಕ ಸಂಘದ ಅಧಿಕೃತ ಕಚೇರಿಯಾದ ಪೈಭವನದಿಂದ ಗಣಿ ಕಂಪನಿವರೆಗೆ ಮೆರೆವಣಿಗೆ ಮೂಲಕ ತೆರಳಿದರು. ಕಂಪನಿ ಮುಖ್ಯ ಆಡಳಿತಾಧಿಕಾರಿಗಳ ಕಚೇರಿ ಬಳಿ ಬಂದು ಮುಷ್ಕರದ ನೋಟಿಸ್‌ ಓದಿ ಪ್ರಧಾನ ವ್ಯವಸ್ಥಾಪಕ(ಗಣಿ) ಪ್ರಕಾಶ ಬಹದ್ದೂರ್‌ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ವ್ಯವಸ್ಥಾಪಕ(ಗಣಿ) ಪ್ರಕಾಶ ಬಹದ್ದೂರ್‌, ಗಣಿ ಆಡಳಿತ ವರ್ಗ ಆದಷ್ಟು ಶೀಘ್ರದಲ್ಲಿ ಕಾರ್ಮಿಕರ ವೇತನ ಒಪ್ಪಂದ ಜಾರಿಗೆ ತರಲಿದೆ. ದುಡುಕಿ ಮುಷ್ಕರದಂತ ಚಳವಳಿಗೆ ಇಳಿಯಬೇಡಿ. ಇದರಿಂದ ಯಾರಿಗೂ ಪ್ರಯೋಜನವಿಲ್ಲ ಎಂದು ಹೇಳಿದರು. 

ಇದರಿಂದ ಆಕ್ರೋಶರಾದ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಮಹ್ಮದ್‌ ಅಮೀರಅಲಿ, ಇಷ್ಟು ಹೇಳುವ ನೀವು ವೇತನ ಒಪ್ಪಂದ ಜಾರಿಗೆ ಯಾಕಿಷ್ಟು ವಿಳಂಬವಾಗುತ್ತಿದೆ. ನಿರ್ದೇಶಕ ಮಂಡಳಿ ಸದಸ್ಯರಿಗೆ ತಿಳಿಹೇಳಿ ಅದನ್ನು ಜಾರಿಗೆ ತರಬೇಕಾಗಿತ್ತಲ್ಲ ಎಂದು ಪ್ರಶ್ನಿಸಿದರು. ಇದಕ್ಕೆ ಮರು ಉತ್ತರ ನೀಡಿದ ಪ್ರಧಾನ ವ್ಯವಸ್ಥಾಪಕ, ಇದೊಂದು ಸರಕಾರಿ ಕಂಪನಿಯಾಗಿದೆ. ಆದ್ದರಿಂದ ಸರಕಾರದ ನಿಯಮ ಪಾಲಿಸಬೇಕಾಗುತ್ತದೆ. ನಿರ್ದೇಶಕ ಮಂಡಳಿ ಒಪ್ಪಿಗೆ ನೀಡಿದ ನಂತರ ಸರಕಾರದ ವಿವಿಧ ಇಲಾಖೆಗಳಲ್ಲಿ ತಡವಾಗಬಾರದು ಎಂಬ ಉದ್ದೇಶದಿಂದ ಸಂಪೂರ್ಣವಾಗಿ ಪರಿಶೀಲಿಸಲು
ಅಧ್ಯಯನಕ್ಕಾಗಿ ಸಮಿತಿ ಹಾಗೂ ಉಪ ಸಮಿತಿ ನೇಮಿಸಿದೆ. ಆದಷ್ಟು ಶೀಘ್ರ ವೇತನ ಒಪ್ಪಂದ ಜಾರಿಯಾಗಲಿದೆ ಎಂದು ಹೇಳಿದರು. 

ಪ್ರಧಾನ ವ್ಯವಸ್ಥಾಪಕರ ಮಾತು ಒಪ್ಪದ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ, ವೇತನ ಒಪ್ಪಂದದ ಮಾತುಕತೆ ಮುಗಿದು 5 ತಿಂಗಳಾಗಿವೆ. ಬರೀ ಭರವಸೆ ಕೇಳಿ ಇರಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ಸಾಮಾನ್ಯ ಸಭೆ ನಡೆಸಿ ಮುಷ್ಕರದ ನೋಟಿಸ್‌ ನೀಡಿದ್ದೇವೆ. ಮುಷ್ಕರ ನಡೆದರೂ ಕಾಯ್ದೆ ಪ್ರಕಾರ ಕಾರ್ಮಿಕರಿಗೆ ವೇತನ ನೀಡಬೇಕಾಗುತ್ತದೆ ಎಂದು ಖಾರವಾಗಿ ಹೇಳಿದರು.

ಕಂಪನಿ ಮುಖ್ಯ ಆಡಳಿತಾಧಿಕಾರಿ ಡಾ| ಜಗದೀಶ ನಾಯ್ಕ ಮಾತನಾಡಿ, ಕಾರ್ಮಿಕರ ವೇತನ ಒಪ್ಪಂದ ವಿಳಂಬವಾಗದಂತೆ ಜಾರಿಗಾಗಿ ಕಂಪನಿ ಪ್ರಧಾನ ವ್ಯವಸ್ಥಾಪಕ(ಸಮನ್ವಯ) ಡಾ| ಪ್ರಭಾಕರ ಸಂಗೂರಮಠ ಈಗಾಗಲೇ ಬೆಂಗಳೂರಿಗೆ ತೆರಳಿದ್ದಾರೆ. ಮುಷ್ಕರ ನಡೆಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಮುಷ್ಕರದ ನೋಟಿಸ್‌ ನೀಡದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಮಹ್ಮದ್‌ ಅಮೀರಅಲಿ, ಧರಣಿ ನಂತರ ನೇರವಾಗಿ ಕಂಪನಿ ಬಂದ್‌ ಮಾಡುವಂತ ಮುಷ್ಕರಕ್ಕಿಳಿಯುವ ಬದಲಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಬಹುದಿತ್ತಲ್ಲ ಎಂಬ ಪ್ರಶ್ನೆಗೆ, ನಾಲ್ಕು ಸಾವಿರ ಕಾರ್ಮಿಕರಿಗಾಗಿ ಉಪವಾಸ ಕುಳಿತು ನ್ಯಾವೇಕೆ ಸಾಯಬೇಕು. ಮಹಾತ್ಮಾ ಗಾಂಧೀಜಿ ಉಪವಾಸ ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿರಬಹುದು. ಆದರೆ ಈ ಮೋದಿ ಆಡಳಿತದಲ್ಲಿ ಉಪವಾಸ ಕುಳಿತವರಿಗೆ ಬೆಲೆ ಇಲ್ಲವಾಗಿದೆ. ಸತ್ತರೆ ಸಾಯಿಲಿ ಬಿಡಿ ಎಂದು ನಿರ್ಲಕ್ಷ್ಯವಹಿಸಲಾಗುತ್ತಿದೆ ಎಂದು ಆರೋಪಿಸಿದರು. ಕಾರ್ಮಿಕ ಸಂಘದ ರೇವಣಸಿದ್ದಪ್ಪ, ಸೋಮಣ್ಣ ಪಾಟೀಲ ಜವಳಗೇರಾ, ಎಚ್‌.ಎ. ಲಿಂಗಪ್ಪ, ಬಾಬು ಭೂಪುರ, ಗುಡದಪ್ಪ, ನಾಗೇಶ್ವರರಾವ್‌, ಮುರಳಿಮೋಹನ, ಡಿ.ಕೆ. ಲಿಂಗಸುಗೂರು ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.