ಸ್ವಂತ ಖರ್ಚಿನಲ್ಲಿ ಹೊಲಿಗೆ ತರಬೇತಿ


Team Udayavani, Nov 10, 2018, 1:45 PM IST

ray-3.jpg

ದೇವದುರ್ಗ: ಗ್ರಾಮೀಣ ಭಾಗದಲ್ಲಿ ಸರಕಾರದ ಯೋಜನೆಗಳು ತಲುಪದೇ ಜನರು ಗೋಳಿಡುತ್ತಿರುವ ಈ ಕಾಲದಲ್ಲಿ ಸದ್ದಿಲ್ಲದೇ ಹಳ್ಳಿಯೊಂದರಲ್ಲಿ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಕಾರ್ಯ ನಡೆಯುತ್ತಿದೆ. ಯಾವುದೇ ಅಕ್ಷರ ಕಲಿಯದ ವ್ಯಕ್ತಿ ಅನೇಕ ಗ್ರಾಮೀಣ ಮಹಿಳೆಯರ ಜೀವನ ಬದಲಿಸಿದ್ದು, ಹಳ್ಳಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಹೌದು ಅರಕೇರಾ ಸಮೀಪದ ಬಿ.ಗಣೇಕಲ್‌ ಗ್ರಾಮದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಂಪಣ್ಣ ಪಲ್ಲೇದ ಅವರೇ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಕಟಿಬದ್ಧರಾಗಿ ನಿಂತಿರುವ ವ್ಯಕ್ತಿ.

ಪಲ್ಲೇದ ಅವರು ಕಳೆದ ಒಂದು ವರ್ಷದಿಂದ ಬಿ.ಗಣೇಕಲ್‌ ಗ್ರಾಮದಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, ಅನೇಕ ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದಿರುವ ಪಲ್ಲೇದ ಅವರು ಮೊದಲಿನಿಂದಲೂ ಶಿಕ್ಷಣ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡುವ ಕನಸು ಹೊತ್ತಿದ್ದರು. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ತಮ್ಮದೇ ಶಿಕ್ಷಣ ಸಂಸ್ಥೆ ಆರಂಭಿಸಿ, ಗ್ರಾಮದಲ್ಲಿ ಪಟ್ಟಣಗಳ ರೀತಿ ಉತ್ತಮ ಶಿಕ್ಷಣ ನೀಡಲು ಸಾಧ್ಯವಿದೆ ಎನ್ನುವುದನ್ನು ಸಾಬೀತುಪಡಿಸಿದವರು.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿರುವುದನ್ನು ಮನಗಂಡು ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರ ಆರಂಭಿಸಿದ್ದಾರೆ. ಸ್ವಂತ ಖರ್ಚಿನಲ್ಲಿ ಅನೇಕ ಹೊಲಿಗೆ ಯಂತ್ರಗಳನ್ನು ತಂದು ದಿನಕ್ಕೆ ವಿವಿಧ ಬ್ಯಾಚ್‌ಗಳಲ್ಲಿ ತರಬೇತಿ  ನೀಡಲಾಗುತ್ತಿದೆ. ಹೊಲಿಗೆ ತರಬೇತಿ ನೀಡಲು ಮಹಿಳೆಯರನ್ನು ನೇಮಿಸಿದ್ದಾರೆ. ಅವರಿಗೆ ಪಲ್ಲೇದ ಅವರೇ ಸ್ವಂತ ಹಣದಿಂದ ಸಂಬಳ ನೀಡುತ್ತಿದ್ದಾರೆ.

ಸದ್ಯ 103 ಮಹಿಳೆಯರು ಉಚಿತ ತರಬೇತಿ ಪಡೆಯುತ್ತಿರುವ ಈ ಕೇಂದ್ರ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸರಕಾರದ ಯಾವ ನೆರವಿಲ್ಲದೇ ತಮ್ಮ ಸ್ವಂತ ಖರ್ಚಿನಲ್ಲಿಯೇ ಈ ಕೇಂದ್ರ ಮುನ್ನಡೆಸುತ್ತಿರುವ ಹಂಪಣ್ಣ ಪಲ್ಲೇದ ಅವರ ಕಾರ್ಯವನ್ನು ಸರಕಾರ ಗುರುತಿಸಬೇಕಿದೆ. ಆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಕಟಿಬದ್ದರಾಗಿರುವ ಪಲ್ಲೇದ ಅವರ ಸಾಮಾಜಿಕ ಕಾರ್ಯಕ್ಕೆ ಸಾಥ್‌ ನೀಡಬೇಕಿದೆ ಎನ್ನುವುದು ಸ್ಥಳೀಯ ಶಿಕ್ಷಣ ಪ್ರೇಮಿ ಅಮರೇಶ ಒತ್ತಾಸೆಯಾಗಿದೆ.

ಪುರುಷ ಪ್ರಧಾನ ಸಮಾಜದಲ್ಲಿ ಕೌಟುಂಬಿಕ ಬಲವರ್ಧನೆಗೆ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ. ಹೀಗಾಗಿ ಹೊಲಿಗೆ ತರಬೇತಿ ಪಡೆದು ಸ್ವಾವಲಂಬಿತರಾಗಲಿ ಎನ್ನುವ ಸದುದ್ದೇಶದಿಂದ ಉಚಿತ ತರಬೇತಿ ಕೇಂದ್ರ ಆರಂಭಿಸಿದ್ದೇನೆ.
 ಹಂಪಣ್ಣ ಪಲ್ಲೇದ, ಉಚಿತ ಹೊಲಿಗೆ ತರಬೇತಿ ಕೇಂದ್ರದ ಸ್ಥಾಪಕ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.