ಬರದ ನಾಡಿಗಿಂದು ಅಧ್ಯಯನ ತಂಡ


Team Udayavani, Nov 17, 2018, 4:00 PM IST

ray-1.jpg

ರಾಯಚೂರು: ಮುಂಗಾರು ಹಾಗೂ ಹಿಂಗಾರು ಸಂಪೂರ್ಣ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಇಂಥ ವೇಳೆ ಅಧ್ಯಯನಕ್ಕೆ ಬರುತ್ತಿರುವ ಕೇಂದ್ರ ತಂಡಕ್ಕೆ ಪರಿಸ್ಥಿತಿ ಅವಲೋಕಿಸಲು ಹೆಚ್ಚೇನು ಕಷ್ಟವಾಗಲಿಕ್ಕಿಲ್ಲ ಎನ್ನುತ್ತಿದ್ದಾರೆ ರೈತರು. ಬರೀ ಖುಷ್ಕಿ ಮಾತ್ರವಲ್ಲ ನೀರಾವರಿ ಪ್ರದೇಶದ ರೈತರಿಗೂ ಈ ಬಾರಿ ಮರ್ಮಾಘಾತವಾಗಿದೆ. ಮುಂಗಾರು ಮಳೆಗಾಗಿ
ಕಾದು ಸುಸ್ತಾಗಿದ್ದ ರೈತರು ದೇವರ ಮೇಲೆ ಭಾರ ಹಾಕಿ ಬಿತ್ತನೆ ಮಾಡಿದ್ದರು. ಅವಧಿ ಮೀರಿದರೂ ಮಳೆ ಬಾರದ ಕಾರಣ ಅದನ್ನು ಕೆಡಿಸಿ ಹಿಂಗಾರಿಗೆ ಕಾದು ಕುಳಿತರು. ನಂತರ ಹಿಂಗಾರು ಬಿತ್ತನೆ ಮಾಡಿದ ರೈತರಿಗೂ ಅದೇ ನಿರಾಸೆ ಎದುರಾಗಿದೆ. ಒಂದು ಮಳೆ ಬಂದರೂ ಬೆಳೆ ಉಳಿಯಬಹುದು ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇಂಥ ವೇಳೆ ಬರ ಅಧ್ಯಯನ ಕೇಂದ್ರ ತಂಡ ಬರುತ್ತಿರುವುದು ರೈತರಿಗೆ ತುಸು ಸಮಾಧಾನ ತಂದಿದೆ.

ಎಷ್ಟು ಪ್ರಮಾಣದ ಬಿತ್ತನೆ?
ಈಗ ಕೇಂದ್ರ ತಂಡ ಬರುತ್ತಿರುವುದು ಮುಂಗಾರು ಬೆಳೆ ಹಾನಿ ಸಮೀಕ್ಷೆಗಾದರೂ ಅವರಿಗೆ ಹಿಂಗಾರು ಪರಿಸ್ಥಿತಿ ಕೂಡ ಮನವರಿಕೆ ಆಗಲಿದೆ. ಈ ವರ್ಷ 3.50 ಲಕ್ಷ ಹೆಕ್ಟೇರ್‌ ಬಿತ್ತನೆ ಪ್ರದೇಶದಲ್ಲಿ 2.65 ಲಕ್ಷ ಹೆಕ್ಟೇರ್‌ ಪ್ರದೇಶ ಬಿತ್ತನೆ ಮಾಡಲಾಗಿತ್ತು. ಅದರಲ್ಲಿ 85 ಸಾವಿರ ಹೆಕ್ಟೇರ್‌ ತೊಗರಿ, 65 ಸಾವಿರ ಹೆಕ್ಟೇರ್‌ ಹತ್ತಿ, 22 ಸಾವಿರ ಹೆಕ್ಟೇರ್‌ ಸಜ್ಜೆ, 6 ಸಾವಿರ ಹೆಕ್ಟೇರ್‌ ಸಜ್ಜೆ ಬಿತ್ತನೆ ಮಾಡಲಾಗಿತ್ತು. ಇನ್ನೂ 1.37 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆ ಗುರಿ ಇದ್ದರೂ ಜಲಾಶಯದಿಂದ ಸಕಾಲಕ್ಕೆ ನೀರು ಸಿಗದ ಕಾರಣ ಕೇವಲ  5
ಸಾವಿರ ಹೆಕ್ಟೇರ್‌ ಬಿತ್ತನೆ ಮಾಡಲಾಗಿದೆ. ಆದರೆ, ಖುಷ್ಕಿ ಭೂಮಿಯಲ್ಲಿ ಬಿತ್ತನೆ ಮಾಡಿದ್ದ ಬಹುತೇಕ ಬೆಳೆ ಮಳೆ ಇಲ್ಲದೇ ಒಣಗಿದ ಪರಿಣಾಮ ಶೇ.80ಕ್ಕಿಂತ ಹೆಚ್ಚು ಬೆಳೆಯನ್ನು ರೈತರೇ ನಾಶ ಮಾಡಿದ್ದರು. 3.94 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಬಿತ್ತನೆ ಗುರಿಯಿದ್ದು, ಅದರಲ್ಲಿ 2.74 ಲಕ್ಷ ಹೆಕ್ಟೇರ್‌ ಬಿತ್ತನೆಯಾಗಿದೆ. ಬಹುತೇಕ ರೈತರು ಜೋಳದ ಮೊರೆ ಹೋದರೆ, ನೀರಾವರಿ ಪ್ರದೇಶದಲ್ಲಿ ಮೆಕ್ಕೆಜೋಳ, ಹತ್ತಿ, ಮೆಣಸಿಕಾಯಿ ಬಿತ್ತನೆ ಮಾಡಲಾಗಿದೆ. ಆದರೆ, ಇಲ್ಲೂ ಅದೇ ಸ್ಥಿತಿ ಇದ್ದು, ಮಳೆ ಇಲ್ಲದೇ ಇಳುವರಿ ಹೆಚ್ಚಾಗುತ್ತಿಲ್ಲ.  ಟೆಲೆಂಡ್‌ಗೂ ಸಂಕಷ್ಟ

ಇದು ಕೇವಲ ಖುಷ್ಕಿ ರೈತರ ಪರಿಸ್ಥಿತಿಯಲ್ಲ ರಾಯಚೂರು ಮತ್ತು ಮಾನ್ವಿ ತಾಲೂಕಿನ ಕೊನೆ ಭಾಗದ ರೈತರ ಸ್ಥಿತಿಯೂ
ಭಿನ್ನವಾಗಿಲ್ಲ. ತುಂಗಭದ್ರಾ, ಆಲಮಟ್ಟಿ ಜಲಾಶಯಗಳನ್ನು ನಂಬಿ ರೈತರು ಭತ್ತ ನಾಟಿ ಮಾಡಿದ್ದಾರೆ. ಬೆಳೆ ಕೈಗೂಡುವ ಹೊತ್ತಲ್ಲಿ ನೀರು ಹರಿಸುತ್ತಿಲ್ಲ. ಇದರಿಂದ ಟಿಎಲ್‌ಬಿಸಿ ಮತ್ತು ಎನ್‌ಆರ್‌ಬಿಸಿ ಟೆಲೆಂಡ್‌ ರೈತರ ಸ್ಥಿತಿ ಶೋಚನೀಯವಾಗಿದೆ. ನೀರು ಹರಿಸುವಂತೆ ನಿತ್ಯ ಅಂಗಲಾಚುವ ಸ್ಥಿತಿ ಇದೆ. ಈ ಕಾರಣಕ್ಕೆ ನಮ್ಮ ಭಾಗವನ್ನೂ ಖುಷ್ಕಿ ಎಂದು ಪರಿಗಣಿಸಿ ಪರಿಹಾರ ಕಲ್ಪಿಸಿ ಎಂಬ ಒತ್ತಾಯ ಹೆಚ್ಚುತ್ತಿದೆ.

ಎಲ್ಲೆಲ್ಲಿ ಭೇಟಿ?
ಕೇಂದ್ರ ಸರಕಾರದ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ಅಮಿತಾಬ್‌ ಗೌತಮ್‌ ನೇತೃತ್ವದ ಬರ ಅಧ್ಯಯನ ತಂಡವು ರಾಜ್ಯದ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಜಿಲ್ಲೆಗೂ ಒಂದು ತಂಡ ಬರಲಿದೆ. ಒಟ್ಟು 10 ಸದಸ್ಯರಿರುವ ಈ ತಂಡ ಮೂರು ಉಪ ತಂಡಗಳಾಗಿ ರಾಜ್ಯದ ನಾನಾ ಭಾಗಗಳಿಗೆ ಭೇಟಿ ನೀಡಲಿದೆ. ಗೌತಮ್‌ ನೇತೃತ್ವದ ತಂಡವು ನ.17ರಂದು ರಾಯಚೂರು ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಲಿದೆ. ತಾಲೂಕಿನ ಕುಕುನೂರು, ಮರ್ಚೆಡ್‌ ಹಾಗೂ ಮಾನ್ವಿ ತಾಲೂಕಿನ ಕಲ್ಲೂರು, ಮಾನ್ವಿ ಹಾಗೂ
ಹಿರೇಕೊಟೆಕಲ್‌ ಗ್ರಾಮಗಳಲ್ಲಿ ಅಧ್ಯಯನ ನಡೆಸಲಿದೆ. ನಂತರ ಬಳ್ಳಾರಿ ತೆರಳಿಲಿದೆ. 

ಕೇಂದ್ರ ಸರ್ಕಾರ ಬರ ಅಧ್ಯಯನದ ನಿಯಮಗಳನ್ನು ಬದಲಿಸಿದೆ. ಅಧ್ಯಯನ ತಂಡ ಸಮೀಕ್ಷೆಗೆ ಬರುವುದು ತಡವಾಗಿದೆ. ಆದರೆ, ಅಧಿಕಾರಿಗಳಿಗೆ ಜಿಲ್ಲೆಯ ವಸ್ತುಸ್ಥಿತಿಯನ್ನು ವಿವರಿಸುವ ಪ್ರಯತ್ನ ಮಾಡಲಾಗುವುದು. ಜಿಲ್ಲೆಯಲ್ಲಿ ಉಂಟಾದ ನಷ್ಟದ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ. 
 ಡಾ| ಚೇತನಾ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.