ಎರಡನೇ ಬೆಳೆಗೆ ನೀರು ಸಿಗೋದು ಡೌಟು


Team Udayavani, Nov 18, 2018, 4:04 PM IST

ray-1.jpg

ಸಿಂಧನೂರು: ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿನ ಎಲ್ಲ ರೈತರಿಗೆ ಒಂದು ಬೆಳೆಗೆ ಸಂಪೂರ್ಣ ನೀರು ಕೊಡುವುದು. ಜೊತೆಗೆ ಈಗ ಬೆಳೆದು ನಿಂತಿರುವ ಬೆಳೆ ರಕ್ಷಣೆ ಮೊದಲ ಆದ್ಯತೆಯಾಗಿದೆ ಎಂದು ಐಸಿಸಿ ಅಧ್ಯಕ್ಷ, ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ ಸರ್ಕ್ನೂಟ್‌ ಹೌಸ್‌ನಲ್ಲಿ ಐಸಿಸಿ ಸಭೆ ಪೂರ್ವಭಾವಿಯಾಗಿ ಶನಿವಾರ ಕರೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ವರ್ಷ ಜಲಾಶಯಕ್ಕೆ 351 ಟಿಎಂಸಿ ಅಡಿ ನೀರು ಹರಿದು ಬಂದಿದೆ. ಜಲಾಶಯ ತುಂಬಿ 197 ಟಿಎಂಸಿ ಅಡಿ ನೀರು ನದಿಗೆ ಹರಿದಿದೆ. 151 ಟಿಎಂಸಿ ನೀರಿನಲ್ಲಿ 98.99 ಟಿಎಂಸಿ ಅಡಿ ನೀರು ಕರ್ನಾಟಕದ ಪಾಲು. ನ.30ರವರೆಗೆ 76.5 ಟಿಎಂಸಿ ನೀರು ಬಳಕೆಯಾಗುತ್ತದೆ.

ಉಳಿದ 22.5 ಟಿಎಂಸಿ ನೀರಿನಲ್ಲಿ 11.5 ಟಿಎಂಸಿ ನೀರು ಡೆಡ್‌ ಸ್ಟೋರೇಜ್‌, ಆವಿಯಾಗಲಿದೆ. ಜೊತೆಗೆ ಬಲದಂಡೆ ಕೆಳಭಾಗದ ಕಾಲುವೆಗೆ 2.847 ಟಿಎಂಸಿ, ಮೇಲ್ಮಟ್ಟದ ಕಾಲುವೆಗೆ 3.147 ಟಿಎಂಸಿ, ರಾಯ ಬಸವ ಕಾಲುವೆಗೆ 1.81 ಟಿಎಂಸಿ, ನದಿಗೆ 0.94 ಟಿಎಂಸಿ, ಡಿಸೆಂಬರ್‌ ಅಂತ್ಯದವರೆಗೆ ಎಡದಂಡೆ ನಾಲೆಗೆ 3000 ಕ್ಯುಸೆಕ್‌ನಂತೆ ನೀರು ಕೊಟ್ಟರೆ 8 ಟಿಎಂಸಿ ನೀರು ಮಾತ್ರ ಉಳಿಯಲಿದೆ. ಕಳೆದ ವರ್ಷ 53,760 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿಯಾಗಿದ್ದರೆ, ಪ್ರಸಕ್ತ ವರ್ಷ 75,806 ಹೆಕ್ಟೇರ್‌ ನಾಟಿಯಾಗಿದೆ. ಜೊತೆಗೆ ಕಳೆದ 36 ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಮಳೆಯಾಗಿದೆ ಎಂದು ಸಭೆ ಪ್ರಾರಂಭವಾಗುತ್ತಿದ್ದಂತೆ ಸಚಿವರು ಅಂಕಿ ಅಂಶಗಳನ್ನು ನೀಡಿದರು.

ರೈತ ಖಾಜಾಸಾಬ್‌ ಸಾಲಗುಂದಾ ಮಾತನಾಡಿ, ಮಳೆ ಕೊರತೆಯಿಂದ ಸೆ. 25ರವರೆಗೆ ಭತ್ತ ನಾಟಿ ಮಾಡಲಾಗಿದೆ. ಬೆಳೆ ಬರಬೇಕಾದರೆ ಡಿ.25ರವರೆಗೆ ನೀರು ಕೊಡಬೇಕು ಎಂದರು. ರೈತ ಸಂಘದ ಮುಖಂಡ ಅಮೀನಪಾಷಾ ದಿದ್ದಿಗಿ ಮಾತನಾಡಿ, ಕೆಳ ಭಾಗದ ರೈತರು ಜೋಳ ಹಾಗೂ ಕಡಲೆ ಬಿತ್ತನೆ ಮಾಡಿದ್ದಾರೆ. ಅವರಿಗೆ ಡಿಸೆಂಬರ್‌ ಅಂತ್ಯದವರೆಗೆ ನೀರು ಕೊಟ್ಟರೆ ಮಾತ್ರ ಬೆಳೆ ಉಳಿಸಲು ಸಾಧ್ಯ. ಅಕ್ರಮ ನೀರಾವರಿಗೆ ಕಡಿವಾಣ ಹಾಕಲು ಸಚಿವರು ಭರವಸೆ ನೀಡಿದ್ದರೂ ಅದು ಸಾಧ್ಯವಾಗಿಲ್ಲ ವೇಕೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ವೆಂಕಟರಾವ್‌ ನಾಡಗೌಡ, ಅಕ್ರಮ ನೀರಾವರಿಗೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕ್ರಮ ಕೈಗೊಳ್ಳುವ ವೇಳೆಗೆ ಭತ್ತ ನಾಟಿ ಮಾಡಿದ್ದರಿಂದ, ಜೊತೆಗೆ ಜನಪ್ರತಿನಿಧಿ ಗಳ ಒತ್ತಡದಿಂದ ಇದೊಂದು ಬೆಳೆಗೆ ಕೈಬಿಡಲಾಗಿದೆ. ಐಸಿಸಿ ಸಭೆಯಲ್ಲಿ ಅಕ್ರಮ ನೀರಾವರಿಗೆ ಸಂಪೂರ್ಣ ಕಡಿವಾಣ ಹಾಕಲು ನಿರ್ಧಾರ ಕೈಗೊಳ್ಳಲಾಗುವುದು. ಎಡದಂಡೆ ವ್ಯಾಪ್ತಿಯಲ್ಲಿ ಎಡಭಾಗಕ್ಕೆ ಸುಮಾರು 10 ಅಡಿ ಕಾಂಕ್ರಿಟ್‌ ಗೋಡೆ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ವಿವಿಧ ಕಂಪನಿಗಳಿಗೆ ನೋಟಿಸ್‌ ನೀಡಿ, ನೀರು ಸಹ ಬಂದ್‌ ಮಾಡಲಾಗಿದೆ ಎಂದರು.

ಸಭೆಯಲ್ಲಿ ಕೆಲ ರೈತರು ಎರಡನೇ ಬೆಳೆಗೆ ಸಂಪೂರ್ಣವಾಗಿ ನೀರು ಕೊಡಲು ಸಾಧ್ಯವಾದರೆ ಮಾತ್ರ ಕಾಲುವೆಗೆ ನೀರು ಬಿಡಬೇಕು. ಇಲ್ಲದಿದ್ದರೆ ಫೆಬ್ರವರಿಯಲ್ಲಿ ಹೊರ ಬೆಳೆಗೆ ನೀರು ಬಿಡಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
 
ತಾಂತ್ರಿಕ ಮುಖ್ಯ ಅಭಿಯಂತರ ಜಾನೇಕರ್‌ ನೀರು ಲಭ್ಯತೆ ಕುರಿತು ಮಾಹಿತಿ ನೀಡಿದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಖಾಸೀಮ್‌ ನಾಯಕ, ಸದಸ್ಯ ದುರುಗಪ್ಪ ಗುಡಗಲದಿನ್ನಿ, ಮುಖಂಡರಾದ ಜಿ.ಸತ್ಯನಾರಾಯಣ, ಲಿಂಗಪ್ಪ ದಡೇಸ್ಗೂರು, ಧರ್ಮನಗೌಡ ಮಲ್ಕಾಪುರ, ಶ್ಯಾಮಸುಂದರ್‌ ಕೀರ್ತಿ, ಬಸವರಾಜ ಹಂಚಿನಾಳ, ಬಸವರಾಜ ನಾಡಗೌಡ, ಮಲ್ಲೇಶಗೌಡ ಬಸಾಪುರ, ನೀಲಕಂಠರಾವ್‌ ಜಾಹಗೀರದಾರ, ಗೌಡಪ್ಪಗೌಡ ಗುಂಜಳ್ಳಿ, ರಾಮರಾವ್‌, ಉದಯಕುಮಾರ, ಕೆ.ಹನುಮೇಶ, ಆದಿಮನಿ ಪರಮೇಶ, ನಾಗೇಶ ಹಂಚಿನಾಳ ಕ್ಯಾಂಪ್‌ ಸೇರಿ ನೂರಾರು ರೈತರು ಭಾಗವಹಿಸಿದ್ದರು. 

ಅಮಾನತಿಗೆ ಸೂಚನೆ
ನೀರಾವರಿ ಇಲಾಖೆಯಲ್ಲಿ ಅ ಧಿಕಾರಿಗಳ ಕೊರತೆಯಿಂದ ಸರಿಯಾದ ನಿರ್ವಹಣೆ ಸಾಧ್ಯವಾಗಿಲ್ಲ. 4 ಜನ ಕಾರ್ಯನಿರ್ವಾಹಕ ಅಭಿಯಂತರರು, 20 ಜನ ಎಇಇ, 10 ಜನ ಜೆಇಗಳನ್ನು ಹಾಕಲಾಗಿತ್ತು. ಆದರೂ ಯಾವ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲು ಸೂಚಿಸಲಾಗಿದೆ ಎಂದು ಸಚಿವ ವೆಂಕಟರಾವ್‌ ನಾಡಗೌಡರ ರೈತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೈತರ ಹಿತ ಕಾಯುವುದು ನಮ್ಮ ಕರ್ತವ್ಯ. ಕಳೆದ ಬೇಸಿಗೆ ಬೆಳೆಗೆ ಜಲಾಶಯದಲ್ಲಿ 29 ಟಿಎಂಸಿ ಅಡಿ ನೀರು ಇದ್ದಿದ್ದರಿಂದ ತಾವು ಹೋರಾಟ ಮಾಡಿದ್ದು, ಈ ಬಾರಿ ಕೇವಲ 8 ರಿಂದ 10 ಟಿಎಂಸಿ ಅಡಿ ಮಾತ್ರ ನೀರು ಉಳಿಯಲಿದ್ದು, ಐಸಿಸಿ ಸಭೆಯಲ್ಲಿ ಎಲ್ಲರ ಸಲಹೆ ಪಡೆದು ನೀರು ಸಹ ಪೋಲಾಗದಂತೆ ನಿರ್ಧಾರ ಕೈಗೊಳ್ಳಲಾಗುವುದು.
 ವೆಂಕಟರಾವ್‌ ನಾಡಗೌಡ ಜಿಲ್ಲಾ ಉಸ್ತುವಾರಿ ಸಚಿವರು, ಐಸಿಸಿ ಸಭೆ ಅಧ್ಯಕ್ಷರು  

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.