ಮೈತ್ರಿ ಸರ್ಕಾರದಿಂದ ರೈತರಿಗೆ ಮೋಸ: ವಜ್ಜಲ್‌


Team Udayavani, Nov 22, 2018, 12:45 PM IST

ray-3.jpg

ಲಿಂಗಸುಗೂರು: ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಮೈತ್ರಿ ಸರ್ಕಾರದ ವಿರುದ್ಧ ತಾಲೂಕು ಬಿಜೆಪಿ ಘಟಕದಿಂದ ಮಾಜಿ ಶಾಸಕ ಮಾನಪ್ಪ ವಜ್ಜಲ್‌ ನೇತೃತ್ವದಲ್ಲಿ ಬುಧವಾರ ಬಸ್‌ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಮಾನಪ್ಪ ವಜ್ಜಲ್‌, ರೈತರ ಸಾಲ ಮನ್ನಾ ಎಂದು ಮೈತ್ರಿ ಸರ್ಕಾರ ಹೇಳುತ್ತಿದೆ. ಆದರೆ ಬ್ಯಾಂಕ್‌ನವರು ರೈತರಿಗೆ ನೋಟಿಸ್‌ ನೀಡುತ್ತಲೇ ಇದ್ದಾರೆ. ಸಾಲ ಮನ್ನಾ ನೆಪದಲ್ಲಿ ಮೈತ್ರಿ ಸರ್ಕಾರ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ರೈತರ ಜೀವನದ ಜತೆ ಚೆಲ್ಲಾಟ ಆಡುತ್ತಿದೆ. ಬರದಿಂದ ತತ್ತರಿಸುತ್ತಿರುವ ರೈತರ ಸಂಕಷ್ಟಕ್ಕೆ ನೆರವಾಗಬೇಕಾದ ಸಿಎಂ ಕುಮಾರಸ್ವಾಮಿ ಅವರು ರೈತರನ್ನು ಗುಂಡಾ, ರೈತ ಮಹಿಳೆ ಬಗ್ಗೆ ಅವಹೇಳಕಾರಿಯಾಗಿ ಮಾತುಗಳನ್ನಾಡಿ ಅವರಿಗೆ ಅವಮಾನ ಮಾಡಿದ್ದಾರೆ. ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದ ಶಾಸಕರು ವಿಫಲ: ಸರ್ಕಾರ ತಾಲೂಕನ್ನು ಬರಪೀಡಿತ ಎಂದು ಘೋಷಿಸಿದೆ ವಿನಃ ಪರಿಹಾರಕ್ಕೆ ನಯಾಪೈಸೆ ನೀಡಿಲ್ಲ. ತಾಲೂಕಿನಲ್ಲಿ ಹಿಂಗಾರು ಹಾಗೂ ಮುಂಗಾರು ಸಂಪೂರ್ಣ ವಿಫಲವಾಗಿದೆ. ಈ ಬಗ್ಗೆ ಶಾಸಕರಿಗೆ ನಿಜವಾಗಿ ಕ್ಷೇತ್ರದ ಕಾಳಜಿಯಿದ್ದರೆ ಸರಕಾರದಿಂದ 500 ಕೋಟಿ ರೂ. ತಂದು ಬರ ನಿರ್ವಹಣೆ ಮಾಡಲಿ. ಆದರೆ ಶಾಸಕರಿಗೆ ಅವರಿಗೆ ಬರ ಎಂದರೆ ಏನೂ ಗೊತ್ತಿಲ್ಲ. ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಂದ ಎಷ್ಟು ಕಮಿಷನ್‌ ಬರಬೇಕು ಎಂದು ಲೆಕ್ಕ ಹಾಕುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಕಮಿಷನ್‌ ಕೊಟ್ಟರೆ ಮಾತ್ರ ಕಾಮಗಾರಿಗೆ ಅಡಿಗಲ್ಲು ಹಾಕುತ್ತಾರೆ ಎಂದು ಆರೋಪಿಸಿದರು.

ತಾವು ಶಾಸಕರಾಗಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದೇನೆ. ಕೆಲ ಕಾಮಗಾರಿ ಟೆಂಡರ್‌ ಹಂತದಲ್ಲಿದ್ದವು. ಅಂತಹ ಕಾಮಗಾರಿಗಳಿಗೆ ಈಗಿನ ಶಾಸಕರು ಈಗ ಅಡಿಗಲ್ಲು ಹಾಕುತ್ತಲೇ ಇದ್ದಾರೆ. ಆದರೆ ಹೊಸದಾಗಿ ಅನುದಾನವೇ ತಂದಿಲ್ಲ ಎಂದರು.

 ಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ನಾನು ಶಾಸಕನಾಗಿದ್ದ ವೇಳೆ ಕಮಿಷನ್‌ ತೆಗೆದುಕೊಂಡಿದ್ದೇನೆಂದು ಈಗಿನ ಶಾಸಕರು ಆರೋಪಿಸಿದ್ದಾರೆ. ಇದಕ್ಕೆ ಅವರಲ್ಲಿ ದಾಖಲೆಗಳು ಇದ್ದರೆ ಬಿಡುಗಡೆಗೊಳಿಸಲಿ ಎಂದ ಅವರು, ಈಗಿನ ಶಾಸಕರು ಕಮಿಷನ್‌ ತೆಗೆದುಕೊಂಡ ಬಗ್ಗೆ ನನ್ನ ಹತ್ತಿರ ದಾಖಲೆಗಳು ಇವೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮುಖಂಡರಾದ ಡಾ| ಶಿವಬಸಪ್ಪ, ಶಂಕರಗೌಡ ಅಮರಾವತಿ, ಗೋವಿಂದ ನಾಯಕ, ನಾರಾಯಣಪ್ಪ ನಾಯ್ಕ, ಅಮರಣ್ಣ ಸಕ್ರಿ, ವೀರಣ್ಣ ಹುರಕಡ್ಲಿ, ಮದನಮೋಹನ್‌, ಜಗನ್ನಾಥ ಕುಲಕರ್ಣಿ, ಶಿವಪ್ರಕಾಶ, ಚೆನ್ನಬಸವ ಹಿರೇಮಠ, ಶಶಿಕಾಂತ ಗಸ್ತಿ, ಪರಮೇಶ ಯಾದವ್‌ ಇತರರು ಇದ್ದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.