ತೇವಾಂಶವಿಲದೆ ಬಾಡುತ್ಲಿದೆ ಬಿಳಿ ಜೋಳ


Team Udayavani, Dec 8, 2018, 12:52 PM IST

ray-1.jpg

ರಾಯಚೂರು: ಮುಂಗಾರು ಮತ್ತು ಹಿಂಗಾರಿನಿಂದ ಸಂಪೂರ್ಣ ವಂಚಿತಗೊಂಡಿರುವ ರೈತನೀಗ ಜೋಳದ ಬೆಳೆ ಉಳಿಸಿಕೊಳ್ಳಲು ತೋಳ್ಬಲ ನೆಚ್ಚಿಕೊಂಡಿದ್ದಾನೆ. ತೇವಾಂಶವಿಲ್ಲದೇ ಬೆಳೆ ಬಾಡಿ ಹೋಗುತ್ತಿದ್ದು, ಅದನ್ನು ಉಳಿಸಿಕೊಳ್ಳಲು “ಭಗೀರಥ’ ಪ್ರಯತ್ನವನ್ನೇ ನಡೆಸಿದ್ದಾನೆ.

ಪ್ರಸಕ್ತ ಸಾಲಿನಲ್ಲಿ ಮಳೆ ಸಂಪೂರ್ಣ ಕೈ ಕೊಟ್ಟ ಹಿನ್ನೆಲೆಯಲ್ಲಿ ಭೂಮಿಯಲ್ಲಿ ತೇವಾಂಶವೇ ಉಳಿದಿಲ್ಲ. ಇದರಿಂದ ಹಿಂಗಾರಿನಲ್ಲಿ ರೈತರು ಬಿತ್ತನೆ ಮಾಡಿರುವ ಜೋಳದ ಬೆಳೆ ಕೂಡ ಬಾಡುತ್ತಿದೆ. ಇದರಿಂದ ಆತಂಕಕ್ಕೆ ಒಳಗಾಗಿರುವ ರೈತರು ಮೂರ್‍ನಾಲ್ಕು ಕಿಮೀ ದೂರದಿಂದ ಪೈಪ್‌ಲೈನ್‌ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುವ ಸಾಹಸಕ್ಕೆ ಕೈ ಹಾಕಿದ್ದಾರೆ. ಇನ್ನೂ ಕೆಲ ರೈತರು ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸುತ್ತಿದ್ದಾರೆ.

ಹಿಂದೆಂದೂ ಕಾಣದಂಥ ಸೈನಿಕ ಹುಳು ಕಾಟ ಈ ಬಾರಿ ಜೋಳಕ್ಕೆ ತಗುಲಿದ್ದು, ಬೆಳವಣಿಗೆ ಕುಂಠಿತವಾಗಿದೆ. ಅದರ ಜತೆಗೆ ತೇವಾಂಶವಿಲ್ಲದೇ ಇಳುವರಿಯೇ ಬರುವುದು ಅನುಮಾನವಾಗಿದೆ. ಸಾಮಾನ್ಯವಾಗಿ ಭೂಮಿಯಲ್ಲಿನ ತೇವ ಹೀರಿಕೊಂಡು ಡಿಸೆಂಬರ್‌, ಜನವರಿಯಲ್ಲಿ ಚಳಿಗೆ ಜೋಳ
ಚೆನ್ನಾಗಿ ಬೆಳೆಯುತ್ತದೆ. ಈ ಬಾರಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಬೆಳವಣಿಗೆ ಕಂಡಿಲ್ಲ.

ಸಾವಿರಾರು ಖರ್ಚು: ಖರ್ಚಿಲ್ಲದ ಬೆಳೆ ಎಂದು ನಂಬಿದ್ದ ಜೋಳಕ್ಕೆ ನಿತ್ಯ ಸಾವಿರಾರು ಖರ್ಚು ಮಾಡಲಾಗುತ್ತಿದೆ. ಸುಮಾರು ನಾಲ್ಕೈದು ಕಿಮೀ ದೂರದಿಂದ ಪೈಪ್‌ಲೈನ್‌ ಮಾಡಿಸಲು ಸಾವಿರಾರು ಖರ್ಚು ಮಾಡಿರುವ ರೈತರು ಡೀಸೆಲ್‌ ಎಂಜಿನ್‌ ಮೂಲಕ ನೀರು ಹಾಯಿಸುತ್ತಿದ್ದಾರೆ. ನಿತ್ಯ ಏನಿಲ್ಲ ಎಂದರೂ 7-8 ಲೀಟರ್‌ ಡೀಸೆಲ್‌ ಬೇಕಾಗುತ್ತಿದೆ. ಅದರ ಜತೆಗೆ ಕೆಲಸಗಾರರನ್ನು ನೇಮಿಸಬೇಕಿದೆ.

ಎಲ್ಲ ಸೇರಿ ನಿತ್ಯ ಸಾವಿರದಿಂದ ಹದಿನೈದು ನೂರು ಖರ್ಚಾಗುತ್ತಿದೆ. ಇನ್ನು ಒಂದು ಟ್ಯಾಂಕರ್‌ಗೆ 600 ದರ ಇದ್ದು, ನೀರು ತುಂಬಿಸಲು 200 ಕೊಡಬೇಕು. ಚಾಲಕರಿಗೆ 300 ನೀಡಬೇಕಿದೆ.

ನಿಯಂತ್ರಣಕ್ಕೆ ಬಾರದ ಲದ್ದಿ ಹುಳು: ಈ ಬಾರಿ ಕಾಣಿಸಿಕೊಂಡ ಸೈನಿಕ ರೋಗಕ್ಕೆ ಈಗಾಗಲೇ ರೈತರು ಕ್ರಿಮಿನಾಶಕ ಸಿಂಪರಣೆ ಮಾಡಿದ್ದಾರೆ. ಆದರೂ ಲದ್ದಿ ಹುಳು ನಿಯಂತ್ರಣಕ್ಕೆ ಬರುತ್ತಿಲ್ಲ. ರೈತರು ಹೇಳುವ ಪ್ರಕಾರ ಇದಕ್ಕೆ ಭೂಮಿಯಲ್ಲಿ ತೇವಾಂಶ ಇಲ್ಲದಿರುವುದು ಕಾರಣವಾಗಿದೆ.

ದರ ಹೆಚ್ಚಳ: ಮಾರುಕಟ್ಟೆಯಲ್ಲಿ ಈಗ ಜೋಳದ ದರ ಹೆಚ್ಚಾಗಿದೆ. ಇದು ರೈತರಲ್ಲಿ ಆಶಾಭಾವನೆ ಮೂಡಿಸಿದೆ. ಹಿಂದೆ ಎಕರೆಗೆ ಏನಿಲ್ಲ ಎಂದರೂ 7-8 ಕ್ವಿಂಟಲ್‌ ಜೋಳ ಬರುತ್ತಿತ್ತು. ಆದರೆ, ಈ ಬಾರಿ 3-4 ಕ್ವಿಂಟಲ್‌ ಬರುವುದು ಕಷ್ಟವಾಗಿದೆ. ಇಂಥ ವೇಳೆ ಉತ್ತಮ ಬೆಲೆ ಸಿಕ್ಕರೆ ರೈತನಿಗೆ ಅನುಕೂಲವಾಗಲಿದೆ. ಸದ್ಯಕ್ಕೆ ಮಾರುಕಟ್ಟೆಯಲ್ಲಿ ದರವೇನೋ ಇದೆ. ಆದರೆ, ಜೋಳ ಮಾರುಕಟ್ಟೆಗೆ ಬರುವ ವೇಳೆ ಅದು ಕುಸಿದರೆ ಎಂಬ ಆತಂಕವೂ ಇದೆ. ಈ ಕಾರಣಕ್ಕೆ ರೈತರು ಜೋಳವನ್ನು ಬೆಂಬಲ ಬೆಲೆಗೆ ಖರೀದಿಸಲಿ ಎಂಬ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ.

ಜೋಳದ ಬೆಳೆಗೆ ಇಷ್ಟೊಂದು ಖರ್ಚು ಮಾಡುತ್ತಿರುವುದು ಇದೇ ಮೊದಲು. ಖರ್ಚಿಲ್ಲದ ಬೆಳೆ ಎಂದು ಹಾಕಿದರೆ ಈಗ ನಷ್ಟ ಎದುರಾಗುವ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ರೋಗ, ಮತ್ತೂಂದೆಡೆ ಮಳೆ ಕೊರತೆ. ಹೀಗಾಗಿ ಇರುವ ಬೆಳೆಯನ್ನಾದರೂ ಉಳಿಸಿಕೊಳ್ಳಲು ಸಾವಿರಾರು ಖರ್ಚು ಮಾಡಿ ನೀರು ಹರಿಸುತ್ತಿದ್ದೇವೆ. ಮಾರುಕಟ್ಟೆಯಲ್ಲಿ ಉತ್ತಮ ಸಿಕ್ಕರೆ ಅನುಕೂಲ ಇಲ್ಲವಾದರೆ ನಷ್ಟ ತಪ್ಪಿದ್ದಲ್ಲ.
 ಪ್ರಕಾಶ ಪಾಟೀಲ, ರೈತ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.