ಕತ್ತಲೆಯಲ್ಲಿ ಸಿರವಾರ ತಹಶೀಲ್ದಾರ್ ಕಾರ್ಯಾಲಯ
Team Udayavani, Dec 8, 2018, 3:02 PM IST
ಸಿರವಾರ: ಪಟ್ಟಣದಲ್ಲಿ ಜೆಸ್ಕಾಂ ಇಲಾಖೆ ವಿದ್ಯುತ್ ನಿರ್ವಹಣೆ ಕಾಮಗಾರಿ ನಡೆಸುತ್ತಿರುವುದರಿಂದ ಒಂದು ವಾರ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಹೀಗಾಗಿ ತಹಶೀಲ್ದಾರ್ ಕಚೇರಿ ಕತ್ತಲೆಯಲ್ಲಿ ಕಾರ್ಯ ನಿರ್ವಹಿಸುವ ಜೊತೆಗೆ ಸಾರ್ವಜನಿಕರು ಸಕಾಲದಲ್ಲಿ ಪ್ರಮಾಣಪತ್ರಗಳನ್ನು ಪಡೆಯಲು ಆಗುತ್ತಿಲ್ಲ.
ಸಿರವಾರ ಪಟ್ಟಣದಲ್ಲಿ ವಾಲಿರುವ ಕಂಬಗಳ ಸರಿಪಡಿಸುವಿಕೆ, ವೈರ್ಗಳ ಜೋಡಣೆ ಕಾರ್ಯ ನಿಮಿತ್ತ ಒಂದು ವಾರ ವಿದ್ಯುತ್ ಕಡಿತಗೊಳಿಸುತ್ತಿದ್ದು, ಪರ್ಯಾಯ ವ್ಯವಸ್ಥೆಯಿಲ್ಲದ ಕಾರಣ ತಹಶೀಲ್ದಾರ್ ಕಾರ್ಯಾಲಯದ ಕೆಲಸಗಳಿಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ವಿದ್ಯುತ್ ಸಮಸ್ಯೆ: ಕಳೆದ ಒಂದು ವರ್ಷದಿಂದ ನಾಡ ಕಾರ್ಯಾಲಯದಲ್ಲಿ ಸೋಲಾರ್ ಪ್ಲೇಟ್ಗಳು ಕಾರ್ಯ ನಿರ್ವಹಿಸದೇ ವಿದ್ಯುತ್ ಸಮಸ್ಯೆಯಿದೆ. ವಿದ್ಯುತ್ ಇದ್ದಾಗ ಮಾತ್ರ ಕಚೇರಿ ಕೆಲಸಗಳು ನಡೆಯುತ್ತವೆ. ವಿದ್ಯುತ್ ವ್ಯತ್ಯಯವಾದಾಗ ತಹಶೀಲ್ದಾರ್ ಕಾರ್ಯಾಲಯ ಕತ್ತಲೆಯ ಮನೆಯಂತಾಗುತ್ತದೆ.
ಪ್ರಮಾಣ ಪತ್ರಗಳಿಗೆ ಪರದಾಟ: ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿದ್ಯುತ್ ಕೈಕೊಟ್ಟಾಗ ಪರ್ಯಾಯ ವ್ಯವಸ್ಥೆ ಇಲ್ಲದ್ದರಿಂದ ರೇಷನ್ ಕಾರ್ಡ್ ಸೇರಿ ಅನೇಕ ಸರ್ಕಾರಿ ಕೆಲಸಗಳಿಗೆ ಬೇಕಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಸೌಲಭ್ಯಗಳಿಗೆ ಪಹಣಿ ಮತ್ತು ಸರ್ವೇ ಕಾರ್ಯಗಳಿಗೆ ಅರ್ಜಿ ಸಲ್ಲಿಸಲು ಕಾರ್ಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ನಿತ್ಯ ಕಚೇರಿಗೆ ಅಲೆದಾಡುವಂತಾಗಿದೆ.
ಖಾಸಗಿ ಕಂಪ್ಯೂಟರ್ ಕೇಂದ್ರಗಳ ಮೊರೆ: ನಾಡ ಕಾರ್ಯಾಲಯದಲ್ಲಿ ವಿದ್ಯುತ್ ಸಮಸ್ಯೆ ಇರುವುದರಿಂದ ಅನಿವಾರ್ಯವಾಗಿ ಖಾಸಗಿ ಕಂಪ್ಯೂಟರ್ ಕೇಂದ್ರಗಳನ್ನು ಸಾರ್ವಜನಿಕರು ಅವಲಂಬಿಸುವಂತಾಗಿದೆ. ಅಲ್ಲಿಯೂ ವಿದ್ಯುತ್ ಸಮಸ್ಯೆ, ವೆಬ್ಸೈಟ್ ತಾಂತ್ರಿಕ ತೊಂದರೆ ಎದುರಾದರೆ ಜನ ಗಂಟೆಗಟ್ಟಲೇ ಕಾಯುವಂತಾಗಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಪರಿಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಳೆದ ವಾರ ಸರ್ಕಾರದಿಂದ ಹೊಸ ಸೋಲಾರ್ ಪ್ಲೇಟ್ ಹಾಗೂ ಬ್ಯಾಟರಿಗಳನ್ನು ಕಳುಹಿಸಿದ್ದು ಅವುಗಳ ಜೋಡಣೆ ಕಾರ್ಯ ನಡೆದಿದೆ. ಇನ್ನು ಒಂದು ವಾರದಲ್ಲಿ ವಿದ್ಯುತ್ ಸಮಸ್ಯೆ ಪರಿಹಾರವಾಗಲಿದೆ.
ಶ್ರೀನಾಥ, ಕಂದಾಯ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..