ನ್ಯಾಯವಾದಿಗಳಿಗೆ ಎಲ್ಲ ವಿಷಯಗಳ ಪರಿಣತಿ ಅಗತ್ಯ
Team Udayavani, Dec 9, 2018, 12:44 PM IST
ಮಾನ್ವಿ: ವಕೀಲರಿಗೆ ಕೇವಲ ತಮ್ಮ ವೃತ್ತಿ ಪುಸ್ತಕದ ಹೊರತಾಗಿಯು ಕೃಷಿ, ವೈದ್ಯಕೀಯ, ಸೇರಿ ಎಲ್ಲ ವಿಷಯಗಳ ಪರಿಣತಿ ಹೊಂದಿದ್ದರೆ ಮಾತ್ರ ಉತ್ತಮ ವಕೀಲರಾಗಿ ರೂಪುಗೊಳ್ಳಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಯಚೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ
ಬಿ.ಎ.ಪಾಟೀಲ ಹೇಳಿದರು.
ರಾಯಚೂರು ಜಿಲ್ಲಾ ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮಾನ್ವಿ ಹಾಗೂ ಲೋಕೋಪಯೋಗಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಪಟ್ಟಣದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ನೂತನ ಸಿವಿಲ್ ನ್ಯಾಯಾಲಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ವಕೀಲರು ಕೇವಲ ಒಂದು ವಿಷಯದಲ್ಲಿ ಪರಿಣತಿ ಸಾಧಿಸಿದರೆ ಸಾಲದು, ಆತನಿಗೆ ಎಲ್ಲ ಕ್ಷೇತ್ರಗಳ ಜ್ಞಾನ ಇರಬೇಕು ಅಂದಾಗ ಮಾತ್ರ ತನ್ನ ಕಕ್ಷಿದಾರರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದರು. ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಕಿರಿಯ ವಕೀಲರು ಸಾಗಬೇಕು. ಅವಕಾಶ ಬಂದಾಗ ಮುನ್ನುಗ್ಗಬೇಕು. ಪ್ರಸ್ತುತ ತಂತ್ರಜ್ಞಾನ ಬೆಳೆದಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಶಾಸಕ ರಾಜಾವೆಂಕಟಪ್ಪ ನಾಯಕ ಮಾತನಾಡಿ, ವಕೀಲರ ವೃತ್ತಿ ತುಂಬಾ ಗೌರವಯುತವಾದದ್ದು, ವೃತ್ತಿಗೆ ಧಕ್ಕೆ ಬರದಂತೆ ಸರಿಯಾದ ಮಾರ್ಗದಲ್ಲಿ ಸಾಗಬೇಕು. ಸಿವಿಲ್ ನ್ಯಾಯಾಲಯದಲ್ಲಿ ಹಲವು ವರ್ಷಗಳ ಪ್ರಕರಣಗಳು ವಿಲೇವಾರಿಯಾಗದೆ ಬಾಕಿ ಉಳಿದುಕೊಂಡಿವೆ. ಬಾಕಿ ಇರುವ ಪ್ರಕರಣಗಳನ್ನು ಅದಷ್ಟು ಬೇಗ ಇತ್ಯರ್ಥಗೊಳಿಸಬೇಕು. ಇದಕ್ಕೆ ಸಾರ್ವಜನಿಕರು ಕೂಡ ಸಹಕರಿಸಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಇಲ್ಲಿನ ಸಿವಿಲ್ ಕೋರ್ಟ್ಗೆ 70 ವರ್ಷಗಳ ಇತಿಹಾಸವಿದೆ. ಸಿವಿಲ್ ನ್ಯಾಯಾಲಯ ಹೊಸ ಕಟ್ಟಡ ಕಾಮಗಾರಿ ಕಳೆದ ವರ್ಷವೇ ಪ್ರಾರಂಭಗೊಳ್ಳಬೇಕಿತ್ತು. ಆದರೆ ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಇಂದು ಶಂಕುಸ್ಥಾಪನೆ ನೆರವೇರಿರುವುದು ಖುಷಿಯ ವಿಚಾರ ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಬೈಲೂರು ಶಂಕರರಾಮ ಮಾತನಾಡಿದರು. ರಾಯಚೂರು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಬಿ.ಬಿ.ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಪ್ರ.ಕಾರ್ಯದರ್ಶಿ ಸೈಯ್ಯದ್ ತಾಹೇರ್ ಹುಸೇನಿ ಮತವಾಲೆ ಇದ್ದರು.
ಶಾಸಕಾಂಗ, ಕಾರ್ಯಾಂಗಕ್ಕಿಂತ ನ್ಯಾಯಾಂಗದ ಪಾತ್ರ ಅಗಾಧ. ಅದನ್ನು ಜವಾಬ್ದಾರಿಯಿಂದ ನಿಬಾಯಿಸಬೇಕು. ಇದಕ್ಕಾಗಿ ಕಠಿಣ ಪರಿಶ್ರಮ ಪಡಬೇಕು. ಎಲ್ಲವನ್ನೂ ಓದಬೇಕು. ಹೊಸ, ಹೊಸ ಅಲೋಚನೆಗಳ ಮೂಲಕ ಕಕ್ಷಿದಾರರಿಗೆ ನ್ಯಾ ದೊರಕಿಸಿಕೊಡಬೇಕು.
ನ್ಯಾ| ಎ.ಬಿ. ಪಾಟೀಲ, ರಾಜ್ಯ ಉತ್ಛ ನ್ಯಾಯಾಲಯದ ನ್ಯಾಯಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ