ವಸತಿ ನಿಲಯಗಳಿಗೆ ಸೌಲಭ್ಯ ಒದಗಿಸಲು ಆಗ್ರಹ
Team Udayavani, Dec 11, 2018, 12:01 PM IST
ಮಾನ್ವಿ: ಜಿಲ್ಲೆಯ ಎಲ್ಲ ವಸತಿ ನಿಲಯಗಳ ಮೂಲ ಸೌಕರ್ಯ ಒದಗಿಸುವುದು ಸೇರಿ ತಾಲೂಕಿನಲ್ಲಿರುವ ವಿವಿಧ ಸಮಸ್ಯೆ ನಿವಾರಿಸಲು ಆಗ್ರಹಿಸಿ ದಲಿತಪರ ಸಂಘಟನೆಗಳ ಒಕ್ಕೂಟ ಹಾಗೂ ಮೇಜರ್ ಶಹನವಾಜ್ ಖಾನ್ ಹೈದರಾಬಾದ್ ಕರ್ನಾಟಕ ಸಂಘದ ಕಾರ್ಯಕರ್ತರು ಸೋಮವಾರದಿಂದ ಪಟ್ಟಣದ ಶಾಸಕರ ಭವನ ಆವರಣದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಜಿಲ್ಲೆಯಲ್ಲಿನ ವಸತಿ ನಿಲಯಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ವಸತಿ ನಿಲಯಗಳಿಗೆ ಆಹಾರ ಪದಾರ್ಥಗಳ ಸರಬರಾಜು ಟೆಂಡರ್ ಪಡೆದು ಈಗ ಸರಬರಾಜು ನಿಲ್ಲಿಸಿರುವ ಪದ್ಮಾವತಿ ಎಂಟರ್ಪ್ರೈಸಿಸ್ ಮಾಲೀಕ ಸಾಗರ್ ಮಂಟು ವಿರುದ್ಧ ಕ್ರಮ ಜರುಗಿಸಬೇಕು. ವಸತಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣ, ಶುದ್ಧ ನೀರು ಸರಬರಾಜು, ಗ್ರಂಥಾಲಯ ವ್ಯವಸ್ಥೆ, ಪ್ರವಾಸ ಭತ್ಯೆ ನೀಡುವ ವ್ಯವಸ್ಥೆಯಾಗಬೇಕು. ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಬೇಕೆಂದು ಆಗ್ರಹಿಸಿದರು.
ತಾಲೂಕಿನ ರೈತರು, ಕೃಷಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಬೇಕು. ಉದ್ಯೋಗ ಖಾತ್ರಿ ಯೋಜನೆ ಸರಿಯಾಗಿ ಅನುಷ್ಠಾನಗೊಳಿಸಬೇಕು.
ತಾಲೂಕಿನ ಕರೆಗುಡ್ಡದ ಹತ್ತಿರ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ತಡೆಯಬೇಕು. ತಾಲೂಕಿನಾದ್ಯಂತ ತನಿಖೆ ನಡೆಸಿ ವಕ್ಫ್ ಮಂಡಳಿ ಭೂಮಿಯನ್ನು ವಶಪಡಿಸಿಕೊಳ್ಳಬೇಕು. ಗ್ರಾಮ ಪಂಚಾಯತಿಗಳ 14ನೇ ಹಣಕಾಸು ಯೋಜನೆ ಅನುದಾನದ ದುರ್ಬಳಕೆ ತಡೆಯಬೇಕು. ಮಹಿಳಾ ಮತ್ತು
ಮಕ್ಕಳ ಕಲ್ಯಾಣ ಇಲಾಖೆಯ ಮೊಟ್ಟೆ ಖರೀದಿಯಲ್ಲಿ ನಡೆಯುತ್ತಿರುವ ಅಕ್ರಮ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಕಾಂತ ಶಿವಪುರೆ ಪ್ರತಿಭಟನಾಕಾರರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. ಬೇಡಿಕೆಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಅಧಿಕಾರಿಗಳನ್ನು ಪ್ರತಿಭಟನಾ ಸ್ಥಳಕ್ಕೆ ಕರೆಯಿಸಿ ಕ್ರಮಕ್ಕೆ ಸೂಚಿಸಲಾಗುವುದು. ಕೆಲ ಬೇಡಿಕೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ದಲಿತಪರ ಸಂಘಟನೆಗಳ ಒಕ್ಕೂಟ ಪ್ರಭುರಾಜ ಕೊಡ್ಲಿ, ಮೇಜರ್ ಶಹನವಾಜ್ ಖಾನ್ ಹೈದರಾಬಾದ್ ಕರ್ನಾಟಕ ಸಂಘದ ಸಂಸ್ಥಾಪಕ ಅಧ್ಯಕ್ಷ ಎಸ್.ಎಂ.ಶಾನವಾಜ್, ಸಂಚಾಲಕರಾದ ರಮೇಶ ಕರೇಗುಡ್ಡ, ಹೊಳೆಯಪ್ಪ ಉಟಕನೂರು, ಕರಿಯಪ್ಪ ನಕ್ಕುಂದಿ, ಯಲ್ಲಪ್ಪ, ಆಂಜನೇಯ,
ಹುಲಿಗೆಪ್ಪ ಚಿಮ್ಲಾಪುರ, ಕೃಷ್ಣ ಜಿನೂರು, ಹನುಮಂತ ಅಮರಾವತಿ, ದೇವೇಂದ್ರಪ್ಪ, ಪರಶುರಾಮ ಸಂಗಾಪುರ, ಮೌನೇಶ ತಡಕಲ್, ಜಗದೀಶ ಪೋತ್ನಾಳ, ಮರಿಸ್ವಾಮಿ ಮಾನ್ವಿ, ಈರಣ್ಣ ಗವಿಗಟ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ