ಬ್ರಾಹ್ಮಣರು ಶ್ರಮಜೀವಿಗಳಾಗಲಿ
Team Udayavani, Dec 11, 2018, 12:13 PM IST
ರಾಯಚೂರು: ಬ್ರಾಹ್ಮಣರು ಕೇವಲ ಕುಲ ವೃತ್ತಿಯನ್ನೇ ನೆಚ್ಚಿಕೊಳ್ಳದೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಮುಂದಾಗಬೇಕು. ಅಂದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗಲಿದೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸಲಹೆ ನೀಡಿದರು.
ನಗರದ ಜೋಡು ವೀರಾಂಜನೇಯ ದೇವಸ್ಥಾನ ಆವರಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರವಿವಾರ ಸಂಜೆ ಹಮ್ಮಿಕೊಂಡಿದ್ದ ವಿಪ್ರೋತ್ಸವ ಕಾರ್ಯಕ್ರಮದ ನಿಮಿತ್ತ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಪೂಜ್ಯರು ಮಾತನಾಡಿದರು.
ನಮ್ಮ ಧರ್ಮದಲ್ಲಿ ಅವಕಾಶಗಳಿಲ್ಲ ಎಂದು ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವುದು ಸರಿಯಲ್ಲ. ಹಿರಿಯರಿಂದ ಬಳುವಳಿಯಾಗಿ ಬಂದ ಪೌರೋಹಿತ್ಯವೊಂದೇ ನಿಮ್ಮ ಕಾಯಕ ಆಗಬಾರದು. ಸೋಮಾರಿಗಳಾಗದೆ ಶ್ರಮ ಜೀವನ ರೂಢಿಸಿಕೊಳ್ಳಿ. ಉತ್ತರಪ್ರದೇಶದಲ್ಲಿ ಬ್ರಾಹ್ಮಣರಿಗೆ ಅಧಿಕಾರ ಸಿಕ್ಕಿದೆ. ಅದರಂತೆ ತೆಲಂಗಾಣ, ಕರ್ನಾಟಕದಲ್ಲೂ ಅವಕಾಶ ದಕ್ಕಿದೆ. ಪಕ್ಷಾತೀತವಾಗಿ ಅಧಿಕಾರ ಹಂಚಿಕೆಯಾಗುತ್ತಿದೆ ಎಂದರು.
ಅದರ ಜತೆಗೆ ಸಮಾಜ ಸಂಘಟನೆಗೂ ಒತ್ತು ನೀಡಬೇಕು. ಆರ್ಥಿಕವಾಗಿ ಸಬಲರಾದಾಗ, ಅಧಿಕಾರವಂತರಾದಾಗ ಮಾತ್ರ ಉನ್ನತಿ ಸಾಧ್ಯವಾಗಲಿದೆ. ಬ್ರಾಹ್ಮಣರ ಆಚಾರ ವಿಚಾರಗಳ ಕುರಿತು ಕಿರುಹೊತ್ತಿಗೆ ತರುವ ಪ್ರಯತ್ನ ಮಠ ಮಾಡಿದೆ ಎಂದರು.
ಮಹಾಸಭಾ ರಾಜ್ಯಾಧ್ಯಕ್ಷ ಕೆ.ಎನ್. ವೆಂಕಟನಾರಾಯಣ ಮಾತನಾಡಿ, ಬ್ರಾಹ್ಮಣ ಸಮಾಜ ಜನಸಂಖ್ಯೆಯಲ್ಲಿ ಚಿಕ್ಕದಾದರೂ ಎಲ್ಲರ ಜತೆಗೆ ಉತ್ತಮ ಬಾಂಧವ್ಯ ಹೊಂದಿ ಮುನ್ನಡೆದಿದೆ. ಮಕ್ಕಳ ಶಿಕ್ಷಣ, ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ ಎಂದರು.
ಕೆನರಾ ಬ್ಯಾಂಕ್ ನಿವೃತ್ತ ಹಿರಿಯ ಪ್ರಬಂಧಕ ಸತ್ಯನಾರಾಯಣ ಮುಜುಮದಾರ ಅವರಿಗೆ ವಿಪ್ರಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರು, ಪದವಿ ಪುರಸ್ಕೃತರನ್ನು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಹಾಸಭಾ ಉಪಾಧ್ಯಕ್ಷಾ ಆರ್.ಲಕ್ಷ್ಮೀಕಾಂತ, ವಿದ್ವಾಂಸರಾದ ಡಾ| ಅರಳು ಮಲ್ಲಿಗೆ ಪಾರ್ಥಸಾರಥಿ, ಮಂತ್ರಾಲಯದ ವಿದ್ಯಾಪೀಠದ ಪ್ರಾಚಾರ್ಯ ಎಸ್.ವಾದಿರಾಜ ಆಚಾರ್ಯ ಮಾತನಾಡಿದರು.
ಅಖೀಲ ಕರ್ನಾಟಕ ವಕ್ತಾರ ಮ.ಸ. ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಡಾ| ಆನಂದ ಫಡ್ನೀಸ್, ನರಸಿಂಗರಾವ್ ದೇಶಪಾಂಡೆ, ಪ್ರಾಣೇಶ ಮುತಾಲಿಕ್, ಜಗನ್ನಾಥ ಕುಲಕರ್ಣಿ, ಗಿರೀಶ ಕನಕವೀಡು, ಡಾ| ಪ್ರಮೋದ ಕಟ್ಟಿ, ವೀಣಾರಾಜೇಂದ್ರ ಸೇರಿ ಸಮಾಜದ ಅನೇಕರು ಪಾಲ್ಗೊಂಡಿದ್ದರು.
ಕಾಯಕದ ಬಗ್ಗೆ ಇರುವ ಸಂಕೋಚಗಳನ್ನು ಬದಿಗೊತ್ತಿ. ಧರ್ಮಕ್ಕೆ ವಿರುದ್ಧವಾದದ್ದನ್ನು ಬಿಟ್ಟು ಎಲ್ಲ ಕೆಲಸಗಳು ಶ್ರೇಷ್ಠ. ಬ್ರಾಹ್ಮಣರು ಎಂದಾಕ್ಷಣ ನಮಗೆ ಮೀಸಲಾತಿ ಸಿಗುವುದಿಲ್ಲ, ಸೂಕ್ತ ಅವಕಾಶಗಳಿಲ್ಲ ಎಂಬ ನೆಪ ಹೇಳದೆ ಕೆಲಸ ಮಾಡಬಲ್ಲೆವು ಎಂಬ ಆತ್ಮವಿಶ್ವಾಸದಿಂದ ಮುನ್ನಡೆಯಿರಿ.
ಶ್ರೀ ಸುಬುಧೇಂಧ್ರ ತೀರ್ಥರು, ಪೀಠಾಧಿಪತಿ, ರಾಘವೇಂದ್ರ ಸ್ವಾಮಿಗಳ ಮಠ, ಮಂತ್ರಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು