ಸಂವಿಧಾನ ದೇಶದ ಪವಿತ್ರ ಗ್ರಂಥ: ನ್ಯಾ| ಪಾಟೀಲ
Team Udayavani, Dec 11, 2018, 12:20 PM IST
ಲಿಂಗಸುಗೂರು: ಸಂವಿಧಾನ ದೇಶದ ಪವಿತ್ರ ಗ್ರಂಥವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೀಪ ಪಾಟೀಲ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ತಾಲೂಕು ಘಟಕ ಸಹಯೋಗದಲ್ಲಿ ಸೋಮವಾರ ಪಟ್ಟಣದ ವಿಸಿಬಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ದಿನಾಚರಣೆ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಡಿ ಕಾನೂನು ರಚನೆಯಾಗುತ್ತವೆ. ಸಂವಿಧಾನ ವಿರುದ್ಧವಾಗಿ ಕಾನೂನು ರಚನೆ ಮಾಡುವುದು ಅಸಾಧ್ಯದ ಕೆಲಸವಾಗಿದೆ. ಪ್ರತಿಯೊಂದು ಕಾರ್ಯ ಚಟುವಟಿಕೆಗಳು ಸಂವಿಧಾನದಡಿ ನಡೆಯುತ್ತಿವೆ. ದೇಶದ ಗಡಿ ಕಾಯುವ ಸೈನಿಕರು ತಮ್ಮ ಜೀವನವನ್ನು ಮುಡುಪಾಗಿಟ್ಟು ಹೋರಾಡುತ್ತಿರುವುದರಿಂದ ನಾವು ದೇಶದಲ್ಲಿ ಶಾಂತಿಯಿಂದ ಜೀವನ ನಡೆಸಲು ಕಾರಣವಾಗಿದೆ. ಸಮಾಜದ ಸುಧಾರಣೆ ಪ್ರತಿಯೊಬ್ಬರ ಜವಾಬ್ದಾರಿ. ವಿದ್ಯಾರ್ಥಿಗಳು ಒಳ್ಳೆಯ ವಿಚಾರಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತ ಎಂ.ಪಿ.ಮಾರುತಿ ಮಾತನಾಡಿ, ಸಾಧನೆಗೆ ವಿದ್ಯಾರ್ಥಿಗಳು ಪ್ರಯತ್ನ ಪಡಬೇಕು. ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ ಎಂದರು.
ವಕೀಲರ ಸಂಘ ಅಧ್ಯಕ್ಷ ಮಹಾಲಿಂಗಪ್ಪ ಪಾಟೀಲ, ಎಪಿಪಿ ವಸಂತ, ತಹಶೀಲ್ದಾರ್ ಚಾಮರಾಜ ಪಾಟೀಲ, ಪ್ರಾಚಾರ್ಯ ಪಿ.ಜಗದೀಶ, ಟಿಎಚ್ಒ ರುದ್ರಗೌಡ ಪಾಟೀಲ, ಸಿಡಿಪಿಒ ಪ್ರೇಮಮೂರ್ತಿ, ಎಚ್ಆರ್ಎಸಿಎಫ್ ಅಧ್ಯಕ್ಷ ಹುಸೇನಬಾಷಾ, ಕಾರ್ಯದರ್ಶಿ ಶೇಖ್ ಅಹ್ಮದ್, ಆಶಿಕ್ ಅಹ್ಮದ್, ಡಾ| ಪದ್ಮರಾಜ ಜೈನ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ