ಸಾಲ ಮನ್ನಾಕ್ಕೆ ಇಂದಿನಿಂದ ದಾಖಲೆ ಸಂಗ್ರಹ


Team Udayavani, Dec 15, 2018, 2:35 PM IST

ray-1.jpg

ರಾಯಚೂರು: ರಾಜ್ಯದ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಚಾಲನೆ ನೀಡಿರುವ ಸರ್ಕಾರ ಇಂದಿನಿಂದ ಅರ್ಹ ಫಲಾನುಭವಿಗಳಿಂದ ದಾಖಲೆ ಸಂಗ್ರಹಕ್ಕೆ ಸೂಚನೆ ನೀಡಿದೆ ಎಂದು ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಹಕಾರಿ ಬ್ಯಾಂಕ್‌ಗಳಲ್ಲಿ ಫಲಾನುಭವಿ ಸಾಲ ಮನ್ನಾ ಪ್ರಕ್ರಿಯೆ ಶುರುವಾಗಿದೆ. ಜಿಲ್ಲೆಯ 67 ಖಾತೆಗಳಿಗೆ 45.35 ಲಕ್ಷ ರೂ. ಹಣ ಜಮಾ ಮಾಡಲಾಗಿದೆ. ಈಗ ವಾಣಿಜ್ಯ ಬ್ಯಾಂಕ್‌ಗಳ ಫಲಾನುಭವಿಗಳಿಂದ ದಾಖಲೆ ಸಲ್ಲಿಸಲಾಗುತ್ತಿದೆ. ಜಿಲ್ಲೆಯ 190 ಶಾಖೆಗಳಲ್ಲಿ 1,23,462 ರೈತರು ಫಲಾನುಭವಿಗಳಿದ್ದಾರೆ.

ಅದೇ ರೀತಿ ಸಹಕಾರಿ ಬ್ಯಾಂಕ್‌ಗಳಲ್ಲಿ 7200 ಫಲಾನುಭವಿಗಳಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರಾಜ್ಯದ ಜಿಲ್ಲೆಗಳಲ್ಲಿ ರಾಯಚೂರು ಮೂರನೇ ಸ್ಥಾನದಲ್ಲಿದೆ ಎಂದು ವಿವರಿಸಿದರು. ಸಾಲ ಮನ್ನಾ ಯೋಜನೆ ವ್ಯಾಪ್ತಿಗೆ ಬರುವ ರೈತರು ತಮ್ಮ ಖಾತೆಗಳಿರುವ ಬ್ಯಾಂಕ್‌ಗಳಿಗೆ ತೆರಳಿ ಆಧಾರ್‌, ಜಮೀನಿನ ಪಹಣಿ ಹಾಗೂ ಪಡಿತರ ಚೀಟಿ ನಕಲು ಪ್ರತಿ ಸಲ್ಲಿಸಬೇಕು. ಇದಕ್ಕಾಗಿ ಎಲ್ಲ ಬ್ಯಾಂಕ್‌ ಗಳಲ್ಲೂ ಪ್ರತ್ಯೇಕ ಕೌಂಟರ್‌ ಆರಂಭಿಸಲಾಗುವುದು. ಜ.31ರ ವರೆಗೆ ಕಾಲಮಿತಿ ನಿಗದಿ ಮಾಡಲಾಗಿದೆ. ದಾಖಲೆಗಳಲ್ಲಿ ಹೊಂದಿಕೆ ಆಗದಿದ್ದಲ್ಲಿ ಅಂಥ ರೈತರು ಸಾಲ ಮನ್ನಾ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ವಿವರಿಸಿದರು.

ದಾಖಲೆ ಸಲ್ಲಿಸಿದ ರೈತರಿಗೆ ಟೋಕನ್‌ ನೀಡಲಾಗುವುದು. ನಂತರ ದಾಖಲೆ ಪರಿಶೀಲನೆ ವೇಳೆ ದಾಖಲೆಗಳ ಆಧಾರದ ಮೇಲೆ ಅಂಗೀಕೃತಗೊಳಿಸಲಾಗುವುದು. ಸಾಲ ಪಡೆಯಲು ಸಲ್ಲಿಸಿದ ಪಹಣಿ, ಫಲಾನುಭವಿ ಹೆಸರು, ಪಡಿತರ ಚೀಟಿ ಹಾಗೂ ಆಧಾರ್‌ ಎಲ್ಲವೂ ಸಾಮ್ಯತೆ ಇರಬೇಕು. ಒಂದು ವೇಳೆ ತಾಳೆ ಆಗದಿದ್ದಲ್ಲಿ ಆಯಾ ತಹಶೀಲ್ದಾರ್‌ ನೇತೃತ್ವದಲ್ಲಿ ರಚಿಸಿದ ಸಮಿತಿ ಪರಿಶೀಲನೆ ಮಾಡಿ ಅವರು ಯೋಜನೆಗೆ ಅರ್ಹರೋ ಅಲ್ಲವೋ ಎಂಬುದನ್ನು ದೃಢೀಕರಿಸುವರು ಎಂದು
ವಿವರಸಿದರು.

ಜಿಲ್ಲೆಯ ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕ್‌ಗಳ 190 ಶಾಖೆಗಳಲ್ಲಿ 1,23,462 ರೈತರು 1600 ಕೋಟಿಗಿಂತ ಅಧಿಕ ಸಾಲ ಪಡೆದಿದ್ದಾರೆ. ಇದರಲ್ಲಿ ಎರಡು ಲಕ್ಷ ರೂ. ಮಾತ್ರ ಸಾಲ ಮನ್ನಾ ಆಗಲಿದೆ. 2017 ಡಿ.31ರೊಳಗೆ ಪಡೆದ ಸಾಲಗಳು ಮಾತ್ರ ಅನ್ವಯವಾಗಲಿವೆ. ಪ್ರತಿ ನಿತ್ಯ ಕೇವಲ 40 ರೈತರಿಂದ ದಾಖಲೆ ಪಡೆದು ಹೆಸರು ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ ಎಲ್ಲ ರೈತರ ನೋಂದಣಿ ಜ.31ರೊಳಗೆ ಮುಗಿಸಲಾಗುವುದು ಎಂದು ತಿಳಿಸಿದರು.

ಸಹಕಾರಿ ಬ್ಯಾಂಕ್‌ಗೆ ಆದ್ಯತೆ: ಒಬ್ಬ ರೈತರು ಅಥವಾ ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ. ಒಂದು ವೇಳೆ ಸಹಕಾರಿ ಬ್ಯಾಂಕ್‌ನಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದರೆ, ಸಹಕಾರಿ ಬ್ಯಾಂಕ್‌ ಸಾಲ ಮಾತ್ರ ಮನ್ನಾ ಆಗಲಿದೆ. ಸಹಕಾರಿ ಬ್ಯಾಂಕ್‌ಗಳಲ್ಲಿ 52 ಸಾವಿರ ಫಲಾನುಭವಿಗಳಿದ್ದು, ಈಗಾಗಲೇ 7200 ಫಲಾನುಭವಿಗಳು ಅರ್ಹತೆ ಪಡೆದಿದ್ದಾರೆ. ಉಳಿದ ರೈತರ ನೋಂದಣಿ ಕಾರ್ಯ ನಡೆದಿದೆ ಎಂದು ಎಡಿಸಿ ತಿಳಿಸಿದರು.

ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ರಂಗನಾಥ ನೂಲಿಕರ್‌, ಸಹಕಾರಿ ಇಲಾಖೆ ಸಹಾಯಕ ನಿಬಂಧಕ ತಿಪ್ಪಣ್ಣ, ಆರ್‌ಡಿಸಿಸಿ ಪ್ರಧಾನ ವ್ಯವಸ್ಥಾಪಕ ಶ್ರೀಕಾಂತ ಸುದ್ದಿಗೋಷ್ಠಿಯಲ್ಲಿದ್ದರು. 

ಸರ್ಕಾರ ಸಾಲಮನ್ನಾ ಪ್ರಕ್ರಿಯೆ ಆರಂಭಿಸಿದ್ದು, ಈಗ ಫಲಾನುಭವಿಗಳ ಹೆಸರು ನೋಂದಣಿ ಆರಂಭಿಸಲಿದೆ. ಆನ್‌ಲೈನ್‌ನಲ್ಲಿ ಮಾಹಿತಿ ದಾಖಲಿಸಲಾಗುವುದು. ಅದರ ಜತೆಗೆ ಫಲಾನುಭವಿ ಕೂಡ ಸ್ಪಷ್ಟೀಕರಣ ನೀಡಬೇಕಿದೆ. ಈಗಾಗಲೇ ಸಹಕಾರಿ ಸಂಘದ ಬ್ಯಾಂಕ್‌ಗಳಲ್ಲಿ ಕೆಲ ರೈತರ ಸಾಲ ಮನ್ನಾ ಆಗಿದೆ. ದಾಖಲೆ ಪರಿಶೀಲನೆ ಕಾರ್ಯ ಮುಗಿದಂತೆಲ್ಲ ಸಾಲಮನ್ನಾ ಆಗಲಿದೆ. 
 ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ

ತಹಶೀಲ್ದಾರ್‌ ನೇತೃತ್ವದ ಸಮಿತಿ ರೈತರು ನೋಂದಣಿ ಮಾಡಿದ ಬಳಿಕ ಯಾವುದಾದರೂ ತಗಾದೆಗಳಿದ್ದಲ್ಲಿ ಅಂಥ
ದಾಖಲೆಗಳ ಪರಿಶೀಲನೆಗಾಗಿ ತಹಶೀಲ್ದಾರ್‌ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಆ ಸಮಿತಿ ಮತ್ತೂಮ್ಮೆ ಪರಾಮರ್ಶೆ ನಡೆಸಿ ಅರ್ಹರೋ ಅಲ್ಲವೋ ಎನ್ನುವುದು ನಿರ್ಧರಿಸಲಿದೆ.

ಟಾಪ್ ನ್ಯೂಸ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.