ಬಾದರ್ಲಿ-ನಾಡಗೌಡರಿಂದ ರೈತರಿಗೆ ವಂಚನೆ


Team Udayavani, Dec 17, 2018, 2:43 PM IST

ray-2.jpg

ಸಿಂಧನೂರು: ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರವಿದ್ದರೂ ತುಂಗಭದ್ರಾ ಎಡದಂಡೆ ನಾಲೆ ರೈತರಿಗೆ ಎರಡನೇ ಬೆಳೆಗೆ ನೀರು ಕೊಡದೇ ಜಿಲ್ಲಾ ಉಸ್ತುವಾರಿ ಸಚಿವ ಜೆಡಿಎಸ್‌ನ ವೆಂಕಟರಾವ್‌ ನಾಡಗೌಡ ಮತ್ತು ಮಾಜಿ ಶಾಸಕ ಕಾಂಗ್ರೆಸ್‌ನ ಹಂಪನಗೌಡ ಬಾದರ್ಲಿ ನೀರಿನ ವಿಷಯದಲ್ಲಿ ಒಬ್ಬರ ವಿರುದ್ಧ ಒಬ್ಬರ ಹೇಳಿಕೆ ನೀಡಿ ರಾಜಕೀಯ ಮಾಡುತ್ತ ರೈತರನ್ನು ವಂಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಕೊಲ್ಲಾ ಶೇಷಗಿರಿರಾವ್‌ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ವೆಂಕಟರಾವ್‌ ನಾಡಗೌಡರು ನೀರಿನ ವಿಷಯ ಹೇಳಿಕೊಂಡೇ ಗೆಲುವು ಸಾಧಿಸಿದ್ದಾರೆ. ಈಗ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಎರಡನೇ ಬೆಳೆಗೆ ನೀರು ಕೊಡದೇ ಮಾತು ತಪ್ಪಿದ್ದಾರೆ. ಸುಳ್ಳಿನ ಸರದಾರರಾಗಿದ್ದಾರೆ ಎಂದು ಟೀಕಿಸಿದರು.

ಇನ್ನು ಕಾಂಗ್ರೆಸ್‌ನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪನವರು ಸಹ ಶಾಶ್ವತ ಪರಿಹಾರಕ್ಕಾಗಿ ಹೋರಾಟ ಮಾಡುವುದಾಗಿ ಹೇಳಿಕೆ ನೀಡುತ್ತ ನೀರಿನ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ನಗರದಲ್ಲಿ ಒಳಚರಂಡಿ ಮತ್ತು 24/7 ನೀರು ಹಾಗೂ ನಗರೋತ್ಥಾನ ಕಾಮಗಾರಿಗಳು ತೀರಾ ಕಳಪೆ ಮಟ್ಟದಲ್ಲಿ
ನಡೆಯುತ್ತಿವೆ. ಇದರ ಬಗ್ಗೆ ಹಿಂದೆ ಧ್ವನಿಯೆತ್ತಿದ್ದ ನಾಡಗೌಡರು ಸಚಿವರಾದ ನಂತರ ಮರೆತಿದ್ದಾರೆ. ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮ ಜರುಗಿಸಲು ಅವರಿಂದ ಆಗುತ್ತಿಲ್ಲ. ತಮ್ಮ ಬೆಂಬಲಿಗರಿಗೆ ಮಾತ್ರ ಕಾಮಗಾರಿ ನೀಡುವ ಗುಣ ಜೆಡಿಎಸ್‌ ನಾಯಕರಲ್ಲಿದೆ ಎಂದು ಆರೋಪಿಸಿದರು. 

ಈಗಾಗಲೇ ಕೇಂದ್ರ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿದೆ. ರಾಜ್ಯ ಸರ್ಕಾರವು ಬೆಂಬಲ ಬೆಲೆ ಘೋಷಿಸಬೇಕು. ರೈತರೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುವುದನ್ನು ಬಿಡಬೇಕು. ಮೊದಲ ಬಾರಿಗೆ ಕ್ಷೇತ್ರದ ಶಾಸಕರು ಸಚಿವರಾಗಿದ್ದರೂ ಪ್ರಯೋಜನವಿಲ್ಲದಂತಾಗಿದೆ. ತಾಲೂಕಿನ ಜನತೆಗೆ ಅಥವಾ ಜಿಲ್ಲೆಯ ಜನತೆಗೆ ನಾಡಗೌಡರ
ಕೊಡುಗೆ ಏನು ಎಂದು ಪ್ರಶ್ನಿಸಿದರು. ಎಲ್ಲವನ್ನು ಮರೆಸಲು ನಾಡಗೌಡರು ಜನವರಿಯಲ್ಲಿ ಸಿಂಧನೂರಿನಲ್ಲಿ ರಾಜ್ಯಮಟ್ಟದ
ಪಶುಮೇಳ ನಡೆಸಲು ಮುಂದಾಗಿದ್ದಾರೆ. ಮೊದಲು ರೈತರಿಗೆ ಎರಡನೇ ಬೆಳೆಗೆ ನೀರು ಕೊಡಿಸಲು ಮುಂದಾಗಲಿ. ನಂತರ ರಾಜ್ಯ ಮಟ್ಟದ ಕಾರ್ಯಕ್ರಮ ಮಾಡುವುದು ಒಳ್ಳೆಯದು ಎಂದರು.

ಸಚಿವರ ಸಹೋದರರ ದೌರ್ಜನ್ಯ: ತಾಲೂಕಿನಾದ್ಯಂತ ಸಚಿವ ನಾಡಗೌಡರ ಸಹೋದರರ ದೌರ್ಜನ್ಯ ಹೆಚ್ಚಿದೆ. ಆರ್‌.
ಎಚ್‌.ನಂ. ಕ್ಯಾಂಪ್‌ಗ್ಳಲ್ಲಿ ಬಡವರ ಗುಡಿಸಲುಗಳನ್ನು ಕಿತ್ತಿಸುವ ಕೀಳುಮಟ್ಟದ ರಾಜಕೀಯವನ್ನು ಸಹೋದರರು
ಮಾಡುತ್ತಿದ್ದಾರೆ. ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ ಮತ ಹಾಕಿಲ್ಲವೆಂಬ ಒಂದೇ ಕಾರಣಕ್ಕೆ ದೌರ್ಜನ್ಯ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಅಧಿಕಾರಿಗಳು ಗಪ್‌ಚುಪ್‌: ರಾಜ್ಯದಲ್ಲಿ ಮೈತ್ರಿ ಸರ್ಕಾರದ ಆಡಳಿತ ಇರುವುದರಿಂದ ತಾಲೂಕಿನಲ್ಲಿ ಕಾಮಗಾರಿಗಳು ಎರಡೂ ಪಕ್ಷದ ಮುಖಂಡರಿಗೆ ಹಂಚಿಕೆಯಾಗುತ್ತಿವೆ. ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರ ಮೇಲೆ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸದಂತೆ ಸ್ಥಳೀಯ ನಾಯಕರು ನೋಡಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಮಧ್ವರಾಜ್‌ ಆಚಾರ್‌, ನಗರ ಘಟಕದ ಅಡಿವೆಪ್ಪ, ಎಸ್‌ಟಿ ಮೋರ್ಚಾ ರಾಜ್ಯ ಸದಸ್ಯ ಹನುಮೇಶ ನಾಯಕ ಇತರರು ಇದ್ದರು.

ಸಿಂಧನೂರಿನಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರು ನೀ ಸತ್ತಂಗ ಮಾಡು, ನಾ ಅತ್ತಂಗ ಮಾಡ್ತಿನಿ ಎಂಬಂತೆ ನಡೆದುಕೊಳ್ಳುತ್ತ ರೈತರ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ.
 ಕೊಲ್ಲಾ ಶೇಷಗಿರಿರಾವ್‌, ಬಿಜೆಪಿ ಮುಖಂಡರು

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.