ಅಂದ ಹೆಚ್ಚಿಸಿಕೊಂಡ ತಲೆಕಟ್ಟು ಶಾಲೆ


Team Udayavani, Dec 17, 2018, 2:51 PM IST

ray-3.jpg

ಮುದಗಲ್ಲ: ಸರಕಾರಿ ಶಾಲೆಯ ಶಿಕ್ಷಣ, ವಾತಾವರಣ ಅಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಸಮೀಪದ ತಲೆಕಟ್ಟು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಲವು ಆಕರ್ಷಣೀಯ ಕೇಂದ್ರವಾಗಿದೆ.

ಶಾಲೆಗೆ ಇತ್ತೀಚೆಗೆ ಸಾರಿಗೆ ಸಂಸ್ಥೆಯ ಬಸ್‌ನಂತೆ ಬಣ್ಣ ಬಳಿಯಲಾಗಿದ್ದು, ವಿದ್ಯಾರ್ಥಿಗಳು, ಪಾಲಕರನ್ನು
ಆಕರ್ಷಿಸುತ್ತಿದೆ. ಇನ್ನು ಶಾಲಾ ಆವರಣ ಹಚ್ಚುಹಸಿರಿನಿಂದ ಕೂಡಿದೆ. ಶಾಲೆಗೆ ಬಸ್‌ ಬಂದಿದೆ ಎಂಬ ಭಾವನೆಯಿಂದ
ವಿದ್ಯಾರ್ಥಿಗಳು ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುತ್ತಿದ್ದಾರೆ. 

ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 125 ಮಕ್ಕಳು ಇದ್ದಾರೆ. 4 ಜನ ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರು ಬೋಧನೆ
ಮಾಡುತ್ತಿದ್ದಾರೆ. ಶಾಲಾ ಆವರಣಕ್ಕೆ ಕಾಂಪೌಂಡ್‌ ನಿರ್ಮಿಸಲಾಗಿದ್ದು, ಶಾಲೆ ಆವರಣದಲ್ಲಿ 17 ತೆಂಗು, 10
ಬಾದಾಮಿ, ಬೇವಿನಮರ, ಆಲದ ಮರ, ಅರಳಿ ಮರ ಸೇರಿ ವಿವಿಧ ಬಗೆಯ ಗಿಡಮರಗಳನ್ನು ಬೆಳೆಸಲಾಗಿದೆ.

ಇದರಿಂದ ಶಾಲೆಯಲ್ಲಿ ಸದಾ ಹಸಿರಿನ ಜತೆಗೆ ತಂಪಿನ ವಾತಾವರಣವಿದ್ದು ಶಿಕ್ಷಣ ಪ್ರೇಮಿಗಳನ್ನು ಆಕರ್ಷಿಸುತ್ತಿದೆ.
ನೀರಲೋಟಿ ಶಾಲೆಯಿಂದ 5 ತಿಂಗಳ ಹಿಂದೆ ಶಾಲೆಗೆ ವರ್ಗವಾಗಿ ಬಂದ ಮುಖ್ಯಗುರುಗಳು ಶಾಲೆಗೆ ಕಾಯಕಲ್ಪ
ನೀಡಬೇಕೆಂದು ಶಾಲಾ ಸುಧಾರಣಾ ಸಮಿತಿ ಹಾಗೂ ಸಹ ಶಿಕ್ಷಕರೊಂದಿಗೆ ಚರ್ಚಿಸಿ ಯೋಜನೆ ರೂಪಿಸಿಕೊಂಡರು.
 
ಅದರಂತೆಯೇ ಶಾಲೆಯ ಸುಸಜ್ಜಿತ ಕೊಠಡಿಗಳ ಹೊರ ಗೋಡೆಗಳಿಗೆ ಕೆಂಪು ಬಸ್‌ನಂತೆ ಬಣ್ಣ ಬಳಿಸಿ ಶಾಲೆಗೆ ಒಂದು
ಕಳೆತಂದರು. ಶಾಲೆಯ ಆವರಣ, ಶೌಚಾಲಯ ಸೇರಿದಂತೆ ಸ್ವತ್ಛತೆಗೆ ಆದ್ಯತೆ ನೀಡಿದ ಮುಖ್ಯಗುರಗಳು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸವಾಲು ಒಡ್ಡಿದ್ದಾರೆ. ಇದೀಗ ಶಾಲೆ ಬಿಟ್ಟು ಬೇರೆ ಕಡೆ ಹೋಗಿದ್ದ ಮಕ್ಕಳು ಕೂಡ ಈಗ ತಮ್ಮ ಗ್ರಾಮದ ಶಾಲೆಯತ್ತ ಮುಖ ಮಾಡಿದ್ದಾರೆ. ಇದಕ್ಕೆ ಶಿಕ್ಷಣ ಇಲಾಖೆಯ ಸಿಆರ್‌ಸಿ ಬಸಪ್ಪ ಆರ್‌., ಎಸಿಎಂಸಿ ಸಮಿತಿ, ಊರಿನ ಹಿರಿಯರ ಸಹಕಾರ ಕೂಡ ಕಾರಣವಾಗಿದೆ ಎನ್ನುತ್ತಾರೆ ಮುಖ್ಯಗುರುಗಳು.

ಶಾಲೆಯಲ್ಲಿ ಸೆಲ್ಫಿ: ಸಾಮಾನ್ಯ ಬಣ್ಣದ ಶಾಲೆ ಆಗಿದ್ದರೆ ಜನ ಕಣ್ಣು ಹಾಯಿಸುತ್ತಿರಲಿಲ್ಲ, ಆದರೆ ಈ ಶಾಲೆಯ ಗೋಡೆಗಳಿಗೆ ಬಸ್‌ನಂತೆ ಬಣ್ಣ ಬಳಿದಿದ್ದರಿಂದ ಶಾಲೆ ಮುಂಭಾಗದಲ್ಲಿ ಓಡಾಡುವ ಜನರು ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಂಡು ವ್ಯಾಟ್ಸಾಪ್‌, ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಶಾಲೆಗೆ ಹೊಸ ರೂಪ ನೀಡಿದ ಶಿಕ್ಷಕರು, ಶಿಕ್ಷಣ ಇಲಾಖೆ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಶಾಲೆಯ ವಾತಾವರಣ ಸೇರಿದಂತೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದರೆ ಮತ್ತಷ್ಟು ಅನುಕೂಲವಾಗಲಿದೆ. ಬಸಪ್ಪ, ಸಿಆರ್‌ಸಿ

„ದೇವಪ್ಪ ರಾಠೊಡ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.